ಐ ಲವ್ ಯೂ ಟ್ರೇಲರ್ ಬಂತು
Team Udayavani, Jan 4, 2019, 12:30 AM IST
ಆರ್.ಚಂದ್ರು ನಿರ್ದೇಶನ, ನಿರ್ಮಾಣವಿರುವ “ಐ ಲವ್ ಯೂ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಶೋಕ್ ಹೋಟೆಲ್ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ನಟ ಶಿವರಾಜ ಕುಮಾರ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. “ಟ್ರೇಲರ್ ನೋಡಿದಾಗ ಉಪೇಂದ್ರ ಅವರ ಮಾತು ಹಾಗೂ ಚಂದ್ರು ಅವರ ಸೆಂಟಿಮೆಂಟ್ ಎದ್ದು ಕಾಣುತ್ತಿದೆ. ಮತ್ತೆ ಉಪ್ಪಿ ಈ ಸಿನಿಮಾ ಮೂಲಕ ಅವರ ಶೈಲಿಗೆ ಮರಳಿದಂತಿದೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗಲಿ’ ಎಂದು ಚಿತ್ರತಂಡಕ್ಕೆ ಶುಭಕೋರಿದರು. ಉಳಿದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ಅನೇಕರು ಟ್ರೇಲರ್ ರಿಲೀಸ್ನಲ್ಲಿ ಭಾಗಿಯಾಗಿದ್ದರು.
ಚಿತ್ರದ ಬಗ್ಗೆ ಮಾತನಾಡುವ ನಾಯಕ ಉಪೇಂದ್ರ, “ಚಂದ್ರು ಹೇಳಿದ ಕಥೆ ತುಂಬಾ ಫ್ರೆಶ್ ಎನಿಸಿತು. ಜೊತೆಗೆ ಇವತ್ತಿನ ಟ್ರೆಂಡ್ಗೆ ತುಂಬಾನೇ ಸೂಕ್ತ ಎನಿಸಿತು. ಚಂದ್ರು ತುಂಬಾ ಪ್ರೀತಿಯಿಂದ ಸಿನಿಮಾ ಮಾಡುತ್ತಾರೆ. ಅಂದುಕೊಂಡಿದ್ದು ಬರುವವರೆಗೆ ಅವರಿಗೆ ಸಮಾಧಾನವಿಲ್ಲ’ ಎಂದು ಸಿನಿಮಾ ಬಗ್ಗೆ ಹೇಳಿದರು. ನಾಯಕಿ ರಚಿತಾ ರಾಮ್ ಕೂಡಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಥೆ ಕೇಳಿ ಎಕ್ಸೆ„ಟ್ ಆಗಿ ಈ ಸಿನಿಮಾವನ್ನು ಒಪ್ಪಿಕೊಂಡಿದ್ದಾಗಿ ಹೇಳಿದರು. ನಿರ್ದೇಶಕ ಆರ್.ಚಂದ್ರು ಈ ಹಿಂದೆ ಉಪೇಂದ್ರ ಅವರ ಜೊತೆ “ಬ್ರಹ್ಮ’ ಸಿನಿಮಾ ಮಾಡಿದ್ದರು. ಈಗ ಎರಡನೇ ಸಿನಿಮಾ ಮಾಡುತ್ತಿದ್ದು, ಇದು ದೊಡ್ಡ ಮಟ್ಟದಲ್ಲಿ ಹಿಟ್ ಆಗುವ ನಿರೀಕ್ಷೆ ಇದೆಯಂತೆ. ಈ ಚಿತ್ರ ತೆಲುಗಿನಲ್ಲೂ ಬಿಡುಗಡೆಯಾಗುತ್ತಿದ್ದು, ಎರಡು ಭಾಷೆಗಳಲ್ಲೂ ಟ್ರೇಲರ್ ರಿಲೀಸ್ ಮಾಡಲಾಗಿದೆ.
ಚಿತ್ರಕ್ಕೆ ಕಿರಣ್ ಸಂಗೀತ, ಸುಜ್ಞಾನ್ ಛಾಯಾಗ್ರಹಣವಿದೆ. ಅವರು ಕೂಡಾ ತಮ್ಮ ಅನುಭವ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
Kannada Cinema; ರಿಲೀಸ್ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್ಗೆ ಯಶ ನಾಯಕಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ