ಮತ್ತೂಂದು ಭಕ್ತಿಪ್ರಧಾನ ಚಿತ್ರ


Team Udayavani, Jan 11, 2019, 12:30 AM IST

q-22.jpg

ಕನ್ನಡದಲ್ಲಿ ಈಗಾಗಲೇ ಹಲವು ಶರಣರ ಹಾಗೂ ಪವಾಡ ಪುರುಷರ ಕುರಿತು ಅನೇಕ ಚಿತ್ರಗಳು ಬಿಡುಗಡೆಯಾಗಿವೆ. ಈಗ “ಶ್ರೀ ಮೌನೇಶ್ವರ ಮಹಾತ್ಮೆ’ ಚಿತ್ರ ಕೂಡ ಬಿಡುಗಡೆಗೆ ಸಿದ್ಧಗೊಂಡಿದೆ. ಭೀಮರಾಜ್‌ ವಜ್ರದ್‌ ನಿರ್ದೇಶಿಸಿರುವ ಈ ಚಿತ್ರ ಜನವರಿ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ತಮ್ಮ ಚಿತ್ರದ ಕುರಿತು ತಂಡದ ಜೊತೆ ಮಾತಿಗೆ ಕುಳಿತ ನಿರ್ದೇಶಕ ಭೀಮರಾಜ್‌ ವಜ್ರದ್‌ ಚಿತ್ರದ ಬಗ್ಗೆ ಹೇಳುತ್ತಾ ಹೋದರು. “ಇದು ಉತ್ತರ ಕರ್ನಾಟಕದ ಪವಾಡ ಪುರುಷ ಮೌನೇಶ್ವರ ಅವರ ಕುರಿತಾದ ಚಿತ್ರ. ಉತ್ತರ ಕರ್ನಾಟಕ ಭಾಗದ ಮಂದಿಗೆ ಮಾತ್ರ ಈ ಮೌನೇಶ್ವರ ಶರಣರ ಬಗ್ಗೆ ಗೊತ್ತಿದೆ. ಆರಂಭದ ದಿನಗಳಲ್ಲಿ ನಮಗೆ ಸಿನಿಮಾ ಮಾಡುವ ಯಾವುದೇ ಯೋಚನೆ ಇರಲಿಲ್ಲ. ಶ್ರೀಗಳ ಮಹಾತ್ಮೆ ಕುರಿತು ಆಡಿಯೋ ಆಲ್ಬಂ ಮಾಡಿದ್ದೆವು. ಕೊನೆಗೆ ಭಕ್ತಿಗೀತೆಗಳ ಜೊತೆಗೆ ಯಾಕೆ ಶ್ರೀಗಳ ಕುರಿತಾದ ಚಿತ್ರ ಮಾಡಬಾರದು ಅಂತ ಯೋಚಿಸಿ, ಚಿತ್ರ ಮಾಡಿದ್ದೇವೆ. ಬಹುತೇಕ ಉತ್ತರ ಕರ್ನಾಟಕ ಭಾಗದಲ್ಲೇ ಚಿತ್ರೀಕರಣಗೊಂಡಿದೆ. ಯಾದಗಿರಿ ಜಿಲ್ಲೆಯ ಚಿಂಚಣಿ ಗ್ರಾಮದಲ್ಲಿ ಹಲವು ಪವಾಡಗಳು ನಡೆದಿವೆ. ಅವೆಲ್ಲವನ್ನು ಇಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಶರಣರು 16 ನೇ ಶತಮಾನದ ಆಸುಪಾಸಿನಲ್ಲಿ ಇದ್ದರು ಎಂಬ ಮಾತಿದೆ. ಅವರ 12 ಪವಾಡಗಳನ್ನು ಮಾತ್ರ ಇಲ್ಲಿ ಹೇಳಲು ಹೊರಟಿದ್ದೇವೆ. ಇಲ್ಲಿ ಸಂದೇಶ ಕೂಡ ಇದೆ. ಶರಣರ ಸಂಭಾಷಣೆ ಮೂಲಕ ಸಣ್ಣ ಬದಲಾವಣೆ ತರುವ ಪ್ರಯತ್ನ ಕೂಡ ಆಗುತ್ತೆ ಎಂಬ ನಂಬಿಕೆ ನಮಗಿದೆ’ ಅಂದರು ನಿರ್ದೇಶಕರು.

ಶ್ರೀ ಮೌನೇಶ್ವರ ಅವರ ಪಾತ್ರ ನಿರ್ವಹಿಸಿರುವ ಮಹೇಶ್‌ ಕುಮಾರ್‌ ಅವರಿಗೆ, ಪಾತ್ರ ಸಿಕ್ಕಿದ್ದೇ ಅದೃಷ್ಟವಂತೆ. ಬಹುತೇಕ ಹೊಸಬರೇ ಸೇರಿ ಚಿತ್ರ ಮಾಡಿದ್ದೇವೆ. ಉತ್ತರ ಕರ್ನಾಟಕದ ಶ್ರೀಗಳ ಚರಿತ್ರೆಯನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ನಮ್ಮದ್ದಾಗಿದೆ. ನಿಮ್ಮೆಲ್ಲರ ಸಹಕಾರ ಇರಬೇಕು ಎಂದರು ಅವರು.

ಕಲಾವಿದ ಶಿವಕುಮಾರ ಆರಾಧ್ಯ ಅವರು, ಚಿತ್ರರಂಗದಲ್ಲಿ ಸುಮಾರು 35 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದು, ಹಲವು ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರಿಗೊಂದು ವಿಶೇಷ ಪಾತ್ರ ಸಿಕ್ಕಿದೆಯಂತೆ. ಶ್ರೀ ಮೌನೇಶ್ವರ ಮಹಾತ್ಮೆ ಬಗ್ಗೆ ಗೊತ್ತಿಲ್ಲದವರಿಗೆ ಈ ಚಿತ್ರ ಅರಿವು ಮೂಡಿಸಲಿದೆ ಎಂಬುದು ಅವರ ಮಾತು.

ಮಾಸ್ಟರ್‌ ಚಿನ್ಮಯ್‌ ಕೂಡ ನಟಿಸಿದ್ದು, ಬಾಲ ಮೌನೇಶ್ವರರಾಗಿ ಕಾಣಿಸಿಕೊಂಡಿದ್ದಾಗಿ ಹೇಳಿಕೊಂಡರು. “ಉತ್ತರ ಕರ್ನಾಟಕದ ಶ್ರೀಗಳ ಬಗ್ಗೆ ನನಗೇನೂ ಗೊತ್ತಿರಲಿಲ್ಲ. ಪಾತ್ರ ಮಾಡುವಾಗ, ಅವರ ಪವಾಡಗಳ ಬಗ್ಗೆ ತಿಳಿದುಕೊಂಡೆ. ಅಂತಹ ಪಾತ್ರ ಮಾಡಲು ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡಿದ್ದೇನೆ’ ಎಂದು ಹೇಳಿಕೊಂಡರು ಚಿನ್ಮಯ್‌.

ಚಿತ್ರದಲ್ಲಿ ಮಿಮಿಕ್ರಿ ರಾಜು ಕೂಡ ಹಾಸ್ಯ ಪಾತ್ರ ಮಾಡಿದ್ದಾರೆ. ಅವರು ಈ ಹಿಂದೆ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾಗ, ನಿರ್ದೇಶಕರು ಕರೆದು ಹಾಸ್ಯ ಪಾತ್ರ ಕೊಟ್ಟಿದ್ದಾಗಿ ಹೇಳಿಕೊಂಡರು. ಚಿತ್ರವನ್ನು ಚಂದ್ರಶೇಖರ್‌ ವಜ್ರದ್‌ ನಿರ್ಮಾಣ ಮಾಡಿದ್ದಾರೆ. ಜಯಪ್ರಕಾಶ್‌ ಛಾಯಾಗ್ರಹಣ ಮಾಡಿದರೆ, ಹರ್ಷ ಕೋಗೋಡ್‌ ಅವರು ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಎನ್‌.ಟಿ.ರಾಮಸ್ವಾಮಿ, ಸ್ಪಂದನಾ, ಮಾ.ವಿಜಯ್‌, ಎಂ.ಎಸ್‌.ಉಮೇಶ್‌ ಸೇರಿದಂತೆ ಹಲವರು ನಟಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.