ಮತ್ತೂಂದು ಭಕ್ತಿಪ್ರಧಾನ ಚಿತ್ರ


Team Udayavani, Jan 11, 2019, 12:30 AM IST

q-22.jpg

ಕನ್ನಡದಲ್ಲಿ ಈಗಾಗಲೇ ಹಲವು ಶರಣರ ಹಾಗೂ ಪವಾಡ ಪುರುಷರ ಕುರಿತು ಅನೇಕ ಚಿತ್ರಗಳು ಬಿಡುಗಡೆಯಾಗಿವೆ. ಈಗ “ಶ್ರೀ ಮೌನೇಶ್ವರ ಮಹಾತ್ಮೆ’ ಚಿತ್ರ ಕೂಡ ಬಿಡುಗಡೆಗೆ ಸಿದ್ಧಗೊಂಡಿದೆ. ಭೀಮರಾಜ್‌ ವಜ್ರದ್‌ ನಿರ್ದೇಶಿಸಿರುವ ಈ ಚಿತ್ರ ಜನವರಿ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ತಮ್ಮ ಚಿತ್ರದ ಕುರಿತು ತಂಡದ ಜೊತೆ ಮಾತಿಗೆ ಕುಳಿತ ನಿರ್ದೇಶಕ ಭೀಮರಾಜ್‌ ವಜ್ರದ್‌ ಚಿತ್ರದ ಬಗ್ಗೆ ಹೇಳುತ್ತಾ ಹೋದರು. “ಇದು ಉತ್ತರ ಕರ್ನಾಟಕದ ಪವಾಡ ಪುರುಷ ಮೌನೇಶ್ವರ ಅವರ ಕುರಿತಾದ ಚಿತ್ರ. ಉತ್ತರ ಕರ್ನಾಟಕ ಭಾಗದ ಮಂದಿಗೆ ಮಾತ್ರ ಈ ಮೌನೇಶ್ವರ ಶರಣರ ಬಗ್ಗೆ ಗೊತ್ತಿದೆ. ಆರಂಭದ ದಿನಗಳಲ್ಲಿ ನಮಗೆ ಸಿನಿಮಾ ಮಾಡುವ ಯಾವುದೇ ಯೋಚನೆ ಇರಲಿಲ್ಲ. ಶ್ರೀಗಳ ಮಹಾತ್ಮೆ ಕುರಿತು ಆಡಿಯೋ ಆಲ್ಬಂ ಮಾಡಿದ್ದೆವು. ಕೊನೆಗೆ ಭಕ್ತಿಗೀತೆಗಳ ಜೊತೆಗೆ ಯಾಕೆ ಶ್ರೀಗಳ ಕುರಿತಾದ ಚಿತ್ರ ಮಾಡಬಾರದು ಅಂತ ಯೋಚಿಸಿ, ಚಿತ್ರ ಮಾಡಿದ್ದೇವೆ. ಬಹುತೇಕ ಉತ್ತರ ಕರ್ನಾಟಕ ಭಾಗದಲ್ಲೇ ಚಿತ್ರೀಕರಣಗೊಂಡಿದೆ. ಯಾದಗಿರಿ ಜಿಲ್ಲೆಯ ಚಿಂಚಣಿ ಗ್ರಾಮದಲ್ಲಿ ಹಲವು ಪವಾಡಗಳು ನಡೆದಿವೆ. ಅವೆಲ್ಲವನ್ನು ಇಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಶರಣರು 16 ನೇ ಶತಮಾನದ ಆಸುಪಾಸಿನಲ್ಲಿ ಇದ್ದರು ಎಂಬ ಮಾತಿದೆ. ಅವರ 12 ಪವಾಡಗಳನ್ನು ಮಾತ್ರ ಇಲ್ಲಿ ಹೇಳಲು ಹೊರಟಿದ್ದೇವೆ. ಇಲ್ಲಿ ಸಂದೇಶ ಕೂಡ ಇದೆ. ಶರಣರ ಸಂಭಾಷಣೆ ಮೂಲಕ ಸಣ್ಣ ಬದಲಾವಣೆ ತರುವ ಪ್ರಯತ್ನ ಕೂಡ ಆಗುತ್ತೆ ಎಂಬ ನಂಬಿಕೆ ನಮಗಿದೆ’ ಅಂದರು ನಿರ್ದೇಶಕರು.

ಶ್ರೀ ಮೌನೇಶ್ವರ ಅವರ ಪಾತ್ರ ನಿರ್ವಹಿಸಿರುವ ಮಹೇಶ್‌ ಕುಮಾರ್‌ ಅವರಿಗೆ, ಪಾತ್ರ ಸಿಕ್ಕಿದ್ದೇ ಅದೃಷ್ಟವಂತೆ. ಬಹುತೇಕ ಹೊಸಬರೇ ಸೇರಿ ಚಿತ್ರ ಮಾಡಿದ್ದೇವೆ. ಉತ್ತರ ಕರ್ನಾಟಕದ ಶ್ರೀಗಳ ಚರಿತ್ರೆಯನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ನಮ್ಮದ್ದಾಗಿದೆ. ನಿಮ್ಮೆಲ್ಲರ ಸಹಕಾರ ಇರಬೇಕು ಎಂದರು ಅವರು.

ಕಲಾವಿದ ಶಿವಕುಮಾರ ಆರಾಧ್ಯ ಅವರು, ಚಿತ್ರರಂಗದಲ್ಲಿ ಸುಮಾರು 35 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದು, ಹಲವು ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರಿಗೊಂದು ವಿಶೇಷ ಪಾತ್ರ ಸಿಕ್ಕಿದೆಯಂತೆ. ಶ್ರೀ ಮೌನೇಶ್ವರ ಮಹಾತ್ಮೆ ಬಗ್ಗೆ ಗೊತ್ತಿಲ್ಲದವರಿಗೆ ಈ ಚಿತ್ರ ಅರಿವು ಮೂಡಿಸಲಿದೆ ಎಂಬುದು ಅವರ ಮಾತು.

ಮಾಸ್ಟರ್‌ ಚಿನ್ಮಯ್‌ ಕೂಡ ನಟಿಸಿದ್ದು, ಬಾಲ ಮೌನೇಶ್ವರರಾಗಿ ಕಾಣಿಸಿಕೊಂಡಿದ್ದಾಗಿ ಹೇಳಿಕೊಂಡರು. “ಉತ್ತರ ಕರ್ನಾಟಕದ ಶ್ರೀಗಳ ಬಗ್ಗೆ ನನಗೇನೂ ಗೊತ್ತಿರಲಿಲ್ಲ. ಪಾತ್ರ ಮಾಡುವಾಗ, ಅವರ ಪವಾಡಗಳ ಬಗ್ಗೆ ತಿಳಿದುಕೊಂಡೆ. ಅಂತಹ ಪಾತ್ರ ಮಾಡಲು ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡಿದ್ದೇನೆ’ ಎಂದು ಹೇಳಿಕೊಂಡರು ಚಿನ್ಮಯ್‌.

ಚಿತ್ರದಲ್ಲಿ ಮಿಮಿಕ್ರಿ ರಾಜು ಕೂಡ ಹಾಸ್ಯ ಪಾತ್ರ ಮಾಡಿದ್ದಾರೆ. ಅವರು ಈ ಹಿಂದೆ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾಗ, ನಿರ್ದೇಶಕರು ಕರೆದು ಹಾಸ್ಯ ಪಾತ್ರ ಕೊಟ್ಟಿದ್ದಾಗಿ ಹೇಳಿಕೊಂಡರು. ಚಿತ್ರವನ್ನು ಚಂದ್ರಶೇಖರ್‌ ವಜ್ರದ್‌ ನಿರ್ಮಾಣ ಮಾಡಿದ್ದಾರೆ. ಜಯಪ್ರಕಾಶ್‌ ಛಾಯಾಗ್ರಹಣ ಮಾಡಿದರೆ, ಹರ್ಷ ಕೋಗೋಡ್‌ ಅವರು ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಎನ್‌.ಟಿ.ರಾಮಸ್ವಾಮಿ, ಸ್ಪಂದನಾ, ಮಾ.ವಿಜಯ್‌, ಎಂ.ಎಸ್‌.ಉಮೇಶ್‌ ಸೇರಿದಂತೆ ಹಲವರು ನಟಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.