ಟ್ರೆಂಡಿ ಕಿಸ್‌ ಯೂತ್‌ಫ‌ುಲ್‌ ಲವ್‌ಸ್ಟೋರಿ


Team Udayavani, Jan 11, 2019, 12:30 AM IST

q-24.jpg

ಎ.ಪಿ.ಅರ್ಜುನ್‌ “ಕಿಸ್‌’ ಎಂಬ ಸಿನಿಮಾ ನಿರ್ದೇಶಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಆ ಸಿನಿಮಾ ಏನಾಯಿತು ಎಂದು ಕೇಳುತ್ತಿರುವ ಹೊತ್ತಿಗೆ ಚಿತ್ರದ ಹಾಡೊಂದು ಸದ್ದು ಮಾಡುತ್ತಿದೆ. ಅದು “ಶೀಲಾ ಸುಶೀಲಾ …’. “ಕಿಸ್‌’ ಚಿತ್ರದ “ಶೀಲಾ ಸುಶೀಲಾ’ ಹಾಡು ಬಿಡುಗಡೆಯಾಗಿದ್ದು, ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಖುಷಿಯಲ್ಲೇ ಚಿತ್ರತಂಡ ಮಾಧ್ಯಮದ ಮುಂದೆ ಬಂದಿದೆ. ನಿರ್ದೇಶಕ ಅರ್ಜುನ್‌ ಖುಷಿಯಾಗಿದ್ದರು. ಸಿನಿಮಾ ತಡವಾದರೂ ಚೆನ್ನಾಗಿ ಮೂಡಿಬಂದ ಖುಷಿ ಅವರಲ್ಲಿತ್ತು. “ಸಿನಿಮಾ ತಡವಾಗಲು ನಾನಾ ಕಾರಣ, ನಾಯಕಿಯ ಎಕ್ಸಾಂ, ಲೊಕೇಶನ್‌, ನಾಯಕ ಕಾಲಿಗೆ ಏಟು ಜೊತೆಗೆ ನಿರ್ಮಾಪಕರ ಚುನಾವಣಾ ಓಡಾಟ. ಜೊತೆಗೆ ನಾವು ಹೊಸಬರನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿರುವುದರಿಂದ ರಿಹರ್ಸಲ್‌ ಮಾಡಿಯೇ ಶೂಟಿಂಗ್‌ಗೆ ಹೋಗುತ್ತಿದ್ದೆವು. ಆದರೆ ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಇವತ್ತಿನ ಟ್ರೆಂಡ್‌ಗೆ ತಕ್ಕಂತಹ ಸಿನಿಮಾ’ ಎನ್ನುವುದು ಅರ್ಜುನ್‌ ಮಾತು. ಚಿತ್ರದ ಕಥೆಯ ಬಗ್ಗೆ ಮಾತನಾಡುವ ಅರ್ಜುನ್‌,  “”ಕಿಸ್‌’ ಒಂದು ಕಲರ್‌ಫ‌ುಲ್‌ ಜರ್ನಿ. 18ರ ಹುಡುಗಿ 21ರ ಹುಡುಗರು ಲವ್‌ ಬಗ್ಗೆ ಹೇಗಿರುತ್ತಾರೆ, ಅವರ ನಡುವಿನ ಸಣ್ಣ ಸಣ್ಣ ಕಿತ್ತಾಟ, ಮುನಿಸು, ಎಕ್ಸೆ„ಟ್‌ಮೆಂಟ್‌, ಬ್ರೇಕಪ್‌, ಚಾಟಿಂಗ್‌ … ಇಂತಹ ಅಂಶಗಳೊಂದಿಗೆ ಈ ಸಿನಿಮಾ ಸಾಗುತ್ತದೆ. ಹಿಂದೆಲ್ಲಾ ಲವ್‌ ಎಂದರೆ ಹುಡುಗಿ ಹಿಂದೆ ತಿಂಗಳುಗಟ್ಟಲೇ ಸುತ್ತಾಡಿ, ಅವಳ ಗೆಳತಿಯನ್ನು ಫ್ರೆಂಡ್‌ ಮಾಡಿಕೊಂಡು, ಅವಳ ಕೈಯಲ್ಲಿ ಲವ್‌ಲೆಟರ್‌ ಕೊಡಬೇಕಿತ್ತು. ಆದರೆ, ಈಗ ಎಲ್ಲವೂ ಬದಲಾಗಿದೆ. ಬೆಳಗ್ಗೆ ಫ್ರೆಂಡ್‌ ರಿಕ್ವೆಸ್ಟ್‌. ಮಧ್ಯಾಹ್ನ ಫ್ರೆಂಡ್ಸ್‌. ಒಂದೆರಡು ದಿನ ಬಿಟ್ಟರೆ ಲವರ್ …. ಫೇಸ್‌ಬುಕ್‌, ವಾಟ್ಸಾಪ್‌ ಬಂದ ಮೇಲೆ ಎಲ್ಲವೂ ವೇಗವಾಗಿದೆ. ಇವತ್ತಿನ ಟ್ರೆಂಡಿ ಲವ್‌ಸ್ಟೋರಿಯಲ್ಲೂ ಒಂದಷ್ಟು ಮಂದಿ ಒಳ್ಳೆಯವರು ಇದ್ದಾರೆ. ಆ ತರಹದ ಲವ್‌ಸ್ಟೋರಿಯನ್ನು ಇಲ್ಲಿ ಹೇಳಿದ್ದೇನೆ’ ಎಂದು ಸಿನಿಮಾ ಬಗ್ಗೆ ವಿವರ ಕೊಡುತ್ತಾರೆ.

ಚಿತ್ರವನ್ನು ರಾಷ್ಟ್ರಕೂಟ ಪಿಕ್ಚರ್ನಡಿ ರವಿಕುಮಾರ್‌ ನಿರ್ಮಿಸಿದ್ದಾರೆ. ಕನ್ನಡದಲ್ಲಿ ಒಳ್ಳೆಯ ಸಿನಿಮಾ ಮಾಡಬೇಕೆಂಬ ಉದ್ದೇಶದಿಂದ “ಕಿಸ್‌’ ಮಾಡಿದ್ದಾಗಿ ಹೇಳಿಕೊಂಡರು. ಚಿತ್ರದಲ್ಲಿ ನಾಯಕರಾಗಿ ನಟಿಸಿರುವ ವಿರಾಟ್‌, ಮೊದಲ ಸಿನಿಮಾದ ಖುಷಿಯನ್ನು ಹಂಚಿಕೊಳ್ಳುವ ಜೊತೆಗೆ ಶ್ರೀಮಂತ ಹುಡುಗನಾಗಿ ನಟಿಸಿದ್ದಾಗಿ ಹೇಳಿದರು. ನಾಯಕಿ ಶ್ರೀಲೀಲಾ ಇಲ್ಲಿ ನಂದಿನಿ ಎಂಬ ಪಾತ್ರ ಮಾಡಿದ್ದಾರೆ. ಎಲ್ಲರೂ ಇಷ್ಟಪಡುವಂತಹ ಪಾತ್ರವಂತೆ. ಉಳಿದಂತೆ ಹಿರಿಯ ನಟರಾದ ದತ್ತಣ್ಣ, ಸುಂದರ್‌ ನಟಿಸಿದ್ದಾರೆ. ಚಿತ್ರಕ್ಕೆ ಇಮ್ರಾನ್‌ ಸರ್ದಾರಿಯಾ ನೃತ್ಯ ನಿರ್ದೇಶನವಿದೆ. ಅರ್ಜುನ್‌ ಶೆಟ್ಟಿ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.