ಪ್ರತ್ಯಕ್ಷ ದೈವನ ಹಾಡು ಬಂತು


Team Udayavani, Feb 1, 2019, 12:30 AM IST

x-19.jpg

ಶಿರಡಿ ಸಾಯಿ ಬಾಬಾ ಅವರ ಕುರಿತಂತೆ ಈಗಾಗಲೇ ಸಾಕಷ್ಟು ಭಕ್ತಿಪ್ರಧಾನ ಚಿತ್ರಗಳು ಬಂದಿವೆ. ಈಗಲೂ ತಯಾರಾಗುತ್ತಲೇ ಇವೆ. ಇದೀಗ “ಪ್ರತ್ಯಕ್ಷ ದೈವ ಶಿರಡಿ ಸಾಯಿ’ ಸಿನಿಮಾ ಚಿತ್ರೀಕರಣಗೊಂಡು ಪ್ರೇಕ್ಷಕರ ಎದುರು ಬರಲು ಸಜ್ಜಾಗಿದೆ. ಹೌದು, ಕೆ.ಎಸ್‌.ನಾರಾಯಣ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವನ್ನು ಮಚ್ಛಾ ರಾಮಲಿಂಗಾರೆಡ್ಡಿ ಅವರು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಚಿತ್ರದಲ್ಲಿ ಶಿರಡಿ ಸಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಕೂಡ. ಇತ್ತೀಚೆಗೆ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಲಾಯಿತು. ಚಿತ್ರದಲ್ಲಿ ಖಳ ಮಾಂತ್ರಿಕರಾಗಿ ನಟಿಸಿರುವ ತೆಲುಗು ನಟ ಭಾನುಚಂದರ್‌ ಆಡಿಯೋ ಬಿಡುಗಡೆ ಮಾಡಿ ಮಾತಿಗಿಳಿದರು. “ಶಿರಡಿ ಸಾಯಿ ಬಾಬಾ ಅವರ ಕುರಿತಂತೆ ಯಾವುದೇ ಭಾಷೆಯಲ್ಲಿ ಚಿತ್ರ ಮಾಡಿದರೂ, ಭಕ್ತರು ಪ್ರೀತಿಯಿಂದಲೇ ನೋಡುತ್ತಾರೆ. ಇಂತಹ ಚಿತ್ರಗಳಲ್ಲಿ ಕೆಲಸ ಮಾಡಲು ಪುಣ್ಯ ಮಾಡಿರಬೇಕು. ಅದರಲ್ಲೂ ಈ ಚಿತ್ರದ ನಿರ್ಮಾಪಕರು 18 ತಿಂಗಳ ಕಾಲ ಮಾಂಸಾಹಾರ ತ್ಯಜಿಸಿ, ಸಾಯಿರಾಂ ಪಾತ್ರದಲ್ಲಿ ನಟಿಸಿ, ಜೀವ ತುಂಬಿದ್ದಾರೆ. ಈ ಚಿತ್ರ ಎಲ್ಲರಿಗೂ ಗೆಲುವು ಕೊಡಲಿ’ ಎಂದು ಶುಭ ಹಾರೈಸಿದರು ಅವರು.

ನಿರ್ಮಾಪಕ ಮಚ್ಛಾ ರಾಮಲಿಂಗಾರೆಡ್ಡಿ ಅವರಿಗೆ ಶಿರಡಿ ಸಾಯಿ ಕುರಿತು ಚಿತ್ರ ಮಾಡುವ ಆಸೆ, “ಪ್ರತ್ಯಕ್ಷ ದೈವ ಶಿರಡಿ ಸಾಯಿ’ ಮೂಲಕ ಈಡೇರಿದೆಯಂತೆ. “ಶ್ರೀ ಬಾಬಾ ಅವರು ಸಮಾಧಿಯಾಗಿ ಶತಕ ಪೂರೈಸಿದ ಸಂದರ್ಭದಲ್ಲಿ ಈ ಚಿತ್ರ ಮಾಡಲಾಗಿದೆ. ಕನ್ನಡ, ತೆಲುಗು ಹಾಗು ತಮಿಳು ಭಾಷೆಯಲ್ಲಿ ಚಿತ್ರ ತಯಾರಾಗಿದೆ. ಮೊದಲು ಕನ್ನಡ ಭಾಷೆಯಲ್ಲಿ ಬಿಡುಗಡೆ ಮಾಡಿ, ನಂತರದ ದಿನಗಳಲ್ಲಿ ಬೇರೆ ಭಾಷೆಯಲ್ಲಿ ಬಿಡುಗಡೆ ಮಾಡಲಾಗುವುದು. ಮಾರ್ಚ್‌ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವುದಾಗಿ ಹೇಳಿಕೊಂಡರು ಅವರು.

ಲಹರಿ ವೇಲು ಅವರು ಸಹ ಬಾಬಾ ಅವರ ಭಕ್ತರಂತೆ. ಅವರೊಮ್ಮೆ, ಶಿರಡಿ ಮಂದಿರಕ್ಕೆ ಭೇಟಿ ನೀಡಿ, ಸಾಯಿ ಬಾಬಾ ಮುಂದೆ ನಿಂತಾಗ, ಅವರಿಗೆ ಗೊತ್ತಾಗದೆಯೇ ಕಣ್ಣಲ್ಲಿ ನೀರು ಬಂದಿತಂತೆ. ಅದೆಲ್ಲವೂ ಬಾಬಾ ಅವರ ಅದ್ಭುತ ಶಕ್ತಿ ಕಾರಣ ಎಂಬುದು ಲಹರಿ ವೇಲು ಮಾತು. 

ನಿರ್ದೇಶಕ ಕೆ.ಎಸ್‌.ನಾರಾಯಣ ಅವರು ಸಿನಿಮಾ ಬಗ್ಗೆ ಹೆಚ್ಚೇನೂ ಮಾತನಾಡಲಿಲ್ಲ. ಈ ಚಿತ್ರ ಮಾಡಲು ಅವಕಾಶ ಸಿಕ್ಕಿದ್ದೇ ಅದೃಷ್ಟ ಅಂದರು. ಹಿರಿಯ ನಟ ರಾಜೇಶ್‌ ಅವರು ಚಿತ್ರತಂಡಕ್ಕೆ ಶುಭಕೋರಿದರು. ಹಿರಿಯ ನಟಿ ಸೀತಾ, ವಿಜೇತ, ಆಂಧ್ರದ ಮಾಜಿ ಸಚಿವ ರಘುವೀರ್‌ರೆಡ್ಡಿ, ನಟಿ ರೂಪಿಕಾ, ರಾಜಾರೆಡ್ಡಿ ಸೇರಿದಂತೆ ಇತರರು ಸಮಾರಂಭದಲ್ಲಿ ಹಾಜರಿದ್ದರು. ಕಿಶನ್‌ ಕವಾಡಿಯ ಸಂಗೀತ ನಿರ್ದೇಶನದ ಆರು ಹಾಡಿನ ತುಣುಕುಗಳನ್ನು ಪ್ರದರ್ಶಿಸಲಾಯಿತು. ಇದಕ್ಕೂ ಮುನ್ನ ಸುಮಾರು 30 ಕ್ಕೂ ಹೆಚ್ಚು ಮಹಿಳೆಯರು ವೇದಿಕೆ ಮೇಲೆ ಸಾಯಿರಾಂ ಭಜನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.