ಕನಸು ವಾಸ್ತವದ ಸುತ್ತ ಸ್ಟ್ರೈಕರ್‌


Team Udayavani, Feb 8, 2019, 12:30 AM IST

21.jpg

ನಾಯಕ ಯಾವುದೋ ಒಂದು ಮಾನಸಿಕ ಸಮಸ್ಯೆಗೆ ಸಿಕ್ಕಿ, ಮುಂದೆ ಅದರಿಂದ ತೊಂದರೆ ಅನುಭವಿಸುವ ಅನೇಕ ಸಿನಿಮಾಗಳು ಈಗಾಗಲೇ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಂದಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಸ್ಟ್ರೈಕರ್‌’. “ಸ್ಟ್ರೈಕರ್‌’ ಎಂಬ ಚಿತ್ರ ಆರಂಭವಾಗಿರುವ ವಿಚಾರವನ್ನು ನೀವು ಕೇಳಿರಬಹುದು. ಈಗ ಈ ಚಿತ್ರ ಚಿತ್ರೀಕರಣ ಮುಗಿಸಿ, ಬಿಡುಗಡೆಯ ಹಂತಕ್ಕೆ ಬಂದಿದೆ. ಇದೊಂದು ಸೈಕಲಾಜಿಕಲ್‌ ಕ್ರೈಮ್‌ ಥಿಲ್ಲರ್‌ ಜಾನರ್‌ಗೆ ಸೇರಿದ ಸಿನಿಮಾ. ಪ್ರವೀಣ್‌ ತೇಜ್‌ ಈ ಚಿತ್ರದ ನಾಯಕ. ಈ ಹಿಂದೆ ಪ್ರವೀಣ್‌ ಒಂದಷ್ಟು ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದರೂ, ಯಾವ ಚಿತ್ರವೂ ದೊಡ್ಡ ಮಟ್ಟದಲ್ಲಿ ಅವರ ಕೈ ಹಿಡಿಯಲಿಲ್ಲ. ಈಗ “ಸ್ಟ್ರೈಕರ್‌’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಇಲ್ಲಿ ಅವರು ಮಾನಸಿಕ ಸಮಸ್ಯೆ ಇರುವ ಮೆಕ್ಯಾನಿಕ್‌ ಆಗಿ ಕಾಣಿಸಿಕೊಂಡಿದ್ದಾರೆ. 

ಈ ಚಿತ್ರವನ್ನು ಪವನ್‌ ತ್ರಿವಿಕ್ರಮ ನಿರ್ದೇಶಿಸಿದ್ದಾರೆ. ಇಲ್ಲಿ ಕನಸು ಮತ್ತು ವಾಸ್ತವದ ನಡುವೆ ನಾಯಕ ಹೇಗೆ ಗೊಂದಲಕ್ಕೆ ಒಳಗಾಗುತ್ತಾನೆ ಮತ್ತು ಅದರಿಂದ ಆತ ಹೇಗೆ ಸಮಸ್ಯೆಗೆ ಸಿಕ್ಕಿಕೊಳ್ಳುತ್ತಾನೆ ಎಂಬ ಅಂಶವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರಂತೆ. ರಾತ್ರಿ ಕಂಡ ಕನಸನ್ನು ನಿಜವೆಂದು ನಂಬುವ ನಾಯಕನ ಸುತ್ತವೇ ಇಡೀ ಕಥೆ ಸಾಗುತ್ತದೆ. ಕೆಲವು ವರ್ಷಗಳ ಹಿಂದೆ ನಿರ್ದೇಶಕರು ಕೂಡಾ ಈ ರೀತಿಯ ಸಮಸ್ಯೆಯನ್ನು ಹೊಂದಿದ್ದರಂತೆ. ಹಾಗಾಗಿ, ಅವರಿಂದಲೇ ಈ ಕಥೆ ಸ್ಫೂರ್ತಿ ಪಡೆದಿದೆ ಎಂದರೂ ತಪ್ಪಲ್ಲ. ಇದೊಂದು ಹೊಸ ಬಗೆಯ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ನಿರ್ದೇಶಕರಿಗಿದೆ. 

ನಾಯಕ ಪ್ರವೀಣ್‌ ಕೂಡಾ ಚಿತ್ರದ ಬಗ್ಗೆ ಮಾತನಾಡಿದರು. “ನಾನಿಲ್ಲಿ ಮೆಕ್ಯಾನಿಕ್‌ ಆಗಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕು ಒಂದು ಸೂಕ್ಷ್ಮ ಅಂಶವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಸಣ್ಣ ಸಣ್ಣ ಅಂಶಗಳ ಕುರಿತು ಹೆಚ್ಚು ಗಮನಹರಿಸಿದ್ದಾರೆ. ಇದೊಂದು ಸೈಕಲಾಜಿಕಲ್‌ ಕ್ರೈಮ್‌ ಥ್ರಿಲ್ಲರ್‌ ಚಿತ್ರ. ಕನಸು ಮತ್ತು ವಾಸ್ತವದ ನಡುವೆ ಈ ಸಿನಿಮಾ ನಡೆಯುತ್ತದೆ’ ಎಂದು ಚಿತ್ರದ ಬಗ್ಗೆ ವಿವರ ನೀಡಿದರು. ಚಿತ್ರದಲ್ಲಿ ಶಿಲ್ಪಾ ಮಂಜುನಾಥ್‌ ನಾಯಕಿ. ತಾನೇ ದೊಡ್ಡ ಸಮಸ್ಯೆಯಲ್ಲಿದ್ದೇನೆಂದುಕೊಂಡಿರುವಾಗ ಆಕೆಗೆ ಸಿಗುವ ಬಾಯ್‌ಫ್ರೆಂಡ್‌ ಅವರಿಂತ ದೊಡ್ಡ ಸಮಸ್ಯೆ ಇರುವವನಾಗಿರುತ್ತಾನಂತೆ. ನಾಯಕನ ಸಮಸ್ಯೆಗೆ ಪರಿಹಾರ ಕೊಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಗಿ ಹೇಳಿಕೊಂಡರು ಶಿಲ್ಪಾ.  ಚಿತ್ರದಲ್ಲಿ “ಭಜರಂಗಿ’ ಲೋಕಿ ಮೊದಲ ಬಾರಿಗೆ ಪಾಸಿಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ದಕ್ಷ ಪೊಲೀಸ್‌ ಆಫೀಸರ್‌ ಆಗಿ ನಟಿಸಿದ್ದಾರೆ. ಈ ಚಿತ್ರವನ್ನು ಜಿ.ಶಂಕರಪ್ಪ, ಸಿ.ರಮೇಶ್‌ ಬಾಬು ಹಾಗೂ ಸಿ.ಸುರೇಶ್‌ ಬಾಬು ಸೇರಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಭರತ್‌ ಬಿ.ಜೆ ಸಂಗೀತವಿದೆ. ಚಿತ್ರ ಫೆಬ್ರವರಿ ಕೊನೆ ಅಥವಾ ಮಾರ್ಚ್‌ ಮೊದಲ ವಾರ ತೆರೆಕಾಣಲಿದೆ. 

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.