ಧರ್ಮ-ಕರ್ಮದ ರಥ ಗುರಿಮುಟ್ಟುವ ಪ್ರಯತ್ನ


Team Udayavani, Feb 15, 2019, 12:30 AM IST

28.jpg

ಚಿತ್ರರಂಗಕ್ಕೆ ಬರುವ ಹೊಸಬರು ತಮ್ಮ ಸಿನಿಮಾದ ಕಥೆ, ಕಾನ್ಸೆಪ್ಟ್, ಮೇಕಿಂಗ್‌ ಎಲ್ಲವೂ ಭಿನ್ನವಾಗಿರಬೇಕು ಎಂದು ಯೋಚಿಸುತ್ತಾರೆ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಿಸುತ್ತಾರೆ ಕೂಡಾ. ಹಾಗಂತ ಆ ಪ್ರಯತ್ನಗಳೆಲ್ಲವೂ ಫ‌ಲಿಸುತ್ತಾ ಎಂದರೆ ಅದಕ್ಕೆ ಉತ್ತರಿಸೋದು ಕಷ್ಟ. ಈಗ ಹೊಸಬರ ತಂಡವೊಂದು ಕಣ್ತುಂಬ ಕನಸು ಕಟ್ಟಿಕೊಂಡು ಗಾಂಧಿನಗರಕ್ಕೆ ಬಂದಿದ್ದಾರೆ. ಅದು “ವಿಜಯರಥ’ ಮೂಲಕ. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. “ಪ್ರೀತಿ ಕಿತಾಬು’ ಸೇರಿದಂತೆ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವಿರುವ ಅಜಯ್‌ ಸೂರ್ಯ ಈ ಚಿತ್ರದ ನಿರ್ದೇಶಕರು. ಧರ್ಮ ಮತ್ತು ಕರ್ಮ ಎಂಬ ವಿಚಾರವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅಜಯ್‌, “ಮನುಷ್ಯರು ಎರಡು ಸಿದ್ಧಾಂತದಲ್ಲಿ ಬದುಕುತ್ತಿರುತ್ತಾರೆ.  ಅದು ಧರ್ಮ ಮತ್ತು ಕರ್ಮ. ಮನುಷ್ಯ ಗುರಿ ಮುಟ್ಟುವ ಪ್ರಯತ್ನದಲ್ಲಿ ಎಡವುತ್ತಾನೆ. ಅದು ಕರ್ಮ. ಇನ್ನೊಬ್ಬ  ಗುರಿ ತಲುಪುತ್ತಾನೆ. ಅದುವೇ ಧರ್ಮ. ಕೆಳಗಡೆ ಬಿದ್ದವನನ್ನು ತನ್ನ ಜೊತೆ ಗುರಿ° ಮುಟ್ಟಿಸಲು  ಪ್ರಯತ್ನ ಮಾಡುವ  ಕಥಾನಾಯಕನ ಸುತ್ತ ಈ ಸಿನಿಮಾ ಸಾಗುತ್ತದೆ. ಆತನಿಗೆ ಮೂರನೇ ರೂಪ ಕಾಣಿಸುತ್ತದೆ. ಯಾರಿಗೂ ಕಾಣದ ಆ ಶಕ್ತಿ ಏನು ಎಂಬುದೇ ಸಿನಿಮಾದ ಸಸ್ಪೆನ್ಸ್‌’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ. ಚಿತ್ರದಲ್ಲಿ ಒಂದಷ್ಟು ಉಪಕಥೆಗಳಿದ್ದು, ಇಲ್ಲಿ ಪೌರಾಣಿಕ ಹಾಗೂ ಜಾನಪದ ಸನ್ನಿವೇಶಗಳು ಬರಲಿವೆಯಂತೆ. 

ವಸಂತ್‌ ಕಲ್ಯಾಣ್‌ ಈ ಚಿತ್ರದ ನಾಯಕ. ಈ ಹಿಂದೆ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಸಂತ್‌ ಇಲ್ಲಿ ಹಳ್ಳಿ ಹುಡುಗನಾಗಿ ನಟಿಸಿದ್ದಾರೆ. ನಾಯಕನಿಗೆ ಒಂದು ಹಂತದಲ್ಲಿ ಸಮಸ್ಯೆ ಎದುರಾದಾಗ ಅವನ ಬದುಕು ಏನಾಗುತ್ತದೆ ಎನ್ನುವ ಅಂಶದೊಂದಿಗೆ ಅವರ ಪಾತ್ರ ಸಾಗುತ್ತದೆಯಂತೆ. ಅರ್ಪಿತಾ ಗೌಡ ಈ ಚಿತ್ರದ ನಾಯಕಿ. ಚಿತ್ರದಲ್ಲಿ ಎಸಿಪಿಯಾಗಿ ರಾಜೇಶ್‌ನಟರಂಗ, ನಾಯಕಿಯ ತಂದೆಯಾಗಿ ಹನುಮಂತೆ ಗೌಡ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಪ್ರೇಮ್‌ಕುಮಾರ್‌ ಸಂಗೀತವ, ಚಂದ್ರು ಸಾಹಿತ್ಯವಿದೆ. ಚಿತ್ರವನ್ನು ರಮೇಶ್‌.ಆರ್‌.ಮಧುಗಿರಿ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.