ಧರ್ಮ-ಕರ್ಮದ ರಥ ಗುರಿಮುಟ್ಟುವ ಪ್ರಯತ್ನ


Team Udayavani, Feb 15, 2019, 12:30 AM IST

28.jpg

ಚಿತ್ರರಂಗಕ್ಕೆ ಬರುವ ಹೊಸಬರು ತಮ್ಮ ಸಿನಿಮಾದ ಕಥೆ, ಕಾನ್ಸೆಪ್ಟ್, ಮೇಕಿಂಗ್‌ ಎಲ್ಲವೂ ಭಿನ್ನವಾಗಿರಬೇಕು ಎಂದು ಯೋಚಿಸುತ್ತಾರೆ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಿಸುತ್ತಾರೆ ಕೂಡಾ. ಹಾಗಂತ ಆ ಪ್ರಯತ್ನಗಳೆಲ್ಲವೂ ಫ‌ಲಿಸುತ್ತಾ ಎಂದರೆ ಅದಕ್ಕೆ ಉತ್ತರಿಸೋದು ಕಷ್ಟ. ಈಗ ಹೊಸಬರ ತಂಡವೊಂದು ಕಣ್ತುಂಬ ಕನಸು ಕಟ್ಟಿಕೊಂಡು ಗಾಂಧಿನಗರಕ್ಕೆ ಬಂದಿದ್ದಾರೆ. ಅದು “ವಿಜಯರಥ’ ಮೂಲಕ. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. “ಪ್ರೀತಿ ಕಿತಾಬು’ ಸೇರಿದಂತೆ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವಿರುವ ಅಜಯ್‌ ಸೂರ್ಯ ಈ ಚಿತ್ರದ ನಿರ್ದೇಶಕರು. ಧರ್ಮ ಮತ್ತು ಕರ್ಮ ಎಂಬ ವಿಚಾರವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅಜಯ್‌, “ಮನುಷ್ಯರು ಎರಡು ಸಿದ್ಧಾಂತದಲ್ಲಿ ಬದುಕುತ್ತಿರುತ್ತಾರೆ.  ಅದು ಧರ್ಮ ಮತ್ತು ಕರ್ಮ. ಮನುಷ್ಯ ಗುರಿ ಮುಟ್ಟುವ ಪ್ರಯತ್ನದಲ್ಲಿ ಎಡವುತ್ತಾನೆ. ಅದು ಕರ್ಮ. ಇನ್ನೊಬ್ಬ  ಗುರಿ ತಲುಪುತ್ತಾನೆ. ಅದುವೇ ಧರ್ಮ. ಕೆಳಗಡೆ ಬಿದ್ದವನನ್ನು ತನ್ನ ಜೊತೆ ಗುರಿ° ಮುಟ್ಟಿಸಲು  ಪ್ರಯತ್ನ ಮಾಡುವ  ಕಥಾನಾಯಕನ ಸುತ್ತ ಈ ಸಿನಿಮಾ ಸಾಗುತ್ತದೆ. ಆತನಿಗೆ ಮೂರನೇ ರೂಪ ಕಾಣಿಸುತ್ತದೆ. ಯಾರಿಗೂ ಕಾಣದ ಆ ಶಕ್ತಿ ಏನು ಎಂಬುದೇ ಸಿನಿಮಾದ ಸಸ್ಪೆನ್ಸ್‌’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ. ಚಿತ್ರದಲ್ಲಿ ಒಂದಷ್ಟು ಉಪಕಥೆಗಳಿದ್ದು, ಇಲ್ಲಿ ಪೌರಾಣಿಕ ಹಾಗೂ ಜಾನಪದ ಸನ್ನಿವೇಶಗಳು ಬರಲಿವೆಯಂತೆ. 

ವಸಂತ್‌ ಕಲ್ಯಾಣ್‌ ಈ ಚಿತ್ರದ ನಾಯಕ. ಈ ಹಿಂದೆ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಸಂತ್‌ ಇಲ್ಲಿ ಹಳ್ಳಿ ಹುಡುಗನಾಗಿ ನಟಿಸಿದ್ದಾರೆ. ನಾಯಕನಿಗೆ ಒಂದು ಹಂತದಲ್ಲಿ ಸಮಸ್ಯೆ ಎದುರಾದಾಗ ಅವನ ಬದುಕು ಏನಾಗುತ್ತದೆ ಎನ್ನುವ ಅಂಶದೊಂದಿಗೆ ಅವರ ಪಾತ್ರ ಸಾಗುತ್ತದೆಯಂತೆ. ಅರ್ಪಿತಾ ಗೌಡ ಈ ಚಿತ್ರದ ನಾಯಕಿ. ಚಿತ್ರದಲ್ಲಿ ಎಸಿಪಿಯಾಗಿ ರಾಜೇಶ್‌ನಟರಂಗ, ನಾಯಕಿಯ ತಂದೆಯಾಗಿ ಹನುಮಂತೆ ಗೌಡ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಪ್ರೇಮ್‌ಕುಮಾರ್‌ ಸಂಗೀತವ, ಚಂದ್ರು ಸಾಹಿತ್ಯವಿದೆ. ಚಿತ್ರವನ್ನು ರಮೇಶ್‌.ಆರ್‌.ಮಧುಗಿರಿ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.