ಪ್ರೇಕ್ಷಕರ ಮಡಿಲಿಗೆ ಚಂಬಲ್‌


Team Udayavani, Feb 22, 2019, 12:30 AM IST

26.jpg

ಸತೀಶ್‌ ನೀನಾಸಂ ಅಭಿನಯದ “ಚಂಬಲ್‌’ ಚಿತ್ರ ಈ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಗೋಕುಲ್‌ ಫಿಲ್ಮ್ಸ್ ಚಿತ್ರವನ್ನು ವಿತರಣೆ ಮಾಡುತ್ತಿದೆ. ವಿತರಕ ಗೋಕುಲ್‌ರಾಜ್‌ ಅವರು ವಿತರಣೆ ಕುರಿತು ಹೇಳುವುದು ಹೀಗೆ. “ರಾಜ್ಯಾದ್ಯಂತ ಸುಮಾರು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಚಿತ್ರ ನೋಡಿದಾಗ, ಒಳ್ಳೆಯ ಚಿತ್ರವಿದು ಎಲ್ಲರಿಗೂ ತಲುಪಬೇಕು ಎಂಬ ಕಾರಣಕ್ಕೆ ನಾವೇ ಆಸಕ್ತಿ ವಹಿಸಿ, ವಿತರಣೆ ಹಕ್ಕು ಪಡೆದು, ಇದೀಗ ಒಳ್ಳೆಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸಿದ್ದಾಗಿದೆ. ಚಿತ್ರದಲ್ಲಿ ಒಳ್ಳೆಯ ಅಂಶಗಳಿವೆ. ಎಲ್ಲಾ ವರ್ಗಕ್ಕೂ ಚಿತ್ರ ಇಷ್ಟವಾಗಲಿದೆ’ ಎಂಬುದು ಗೋಕುಲ್‌ರಾಜ್‌ ಅವರ ಮಾತು.

ಇನ್ನು, ನಿರ್ದೇಶಕ ಜೇಕಬ್‌ ವರ್ಗಿಸ್‌ ಅವರಿಗೆ ಗೋಕುಲ್‌ ಫಿಲ್ಮ್ಸ್ ಚಿತ್ರದ ವಿತರಣೆ ಹಕ್ಕು ಪಡೆದಿರುವುದು ಖುಷಿ ಕೊಟ್ಟಿದೆಯಂತೆ. ಚಿತ್ರ ತೋರಿಸಿದಾಗ, ಅವರೇ ವಿತರಣೆ ಮಾಡಲು ಮುಂದಾಗಿದ್ದಾರೆ. ಪ್ರೇಕ್ಷಕರಿಗೆ ಈ ಚಿತ್ರ ಹತ್ತಿರವಾಗಲಿದೆ. ಸಾಮಾನ್ಯ ಜನರಂತೂ ಇಂತಹ ಚಿತ್ರ ಮಿಸ್‌ ಮಾಡಿಕೊಳ್ಳಬಾರದು. ಇದು ವಾಸ್ತವ ಸಮಾಜದಲ್ಲಿ ನಡೆಯುತ್ತಿರುವ ಅಂಶಗಳನ್ನು ಇಟ್ಟುಕೊಂಡು ಮಾಡಲಾಗಿದೆ. ಹಾಗಂತ, ಇದು ಡಿ.ಕೆ.ರವಿ ಅವರ ಕಥೆ ಇರಬಹುದಾ? ಎಂಬ ಪ್ರಶ್ನೆಗಳು ಬಂದಿವೆ. ಆದರೆ, ಇದು ಯಾರ ಕಥೆಯೂ ಅಲ್ಲ, ಒಂದು ಸಿನಿಮಾ ಮಾಡುವಾಗ, ಹಲವು ಸ್ಫೂರ್ತಿಗಳಿರುತ್ತವೆ. ಅಂಥದ್ದೇ ಸ್ಫೂರ್ತಿಯಿಂದ ಹುಟ್ಟಿರುವ ಕಥೆ ಇದು. ಚಿತ್ರ ನೋಡಿದವರಿಗೆ ಇದು ಯಾವ ರೀತಿಯ ಚಿತ್ರ ಎಂಬುದು ಗೊತ್ತಾಗುತ್ತೆ ಅಂದರು ಅವರು.

ನಾಯಕ ಸತೀಶ್‌ ಅವರಿಗೆ ಗೋಕುಲ್‌ರಾಜ್‌ ಅವರು ವಿತರಣೆ ಮಾಡುತ್ತಿದ್ದಾರೆ ಎಂಬುದನ್ನು ಕೇಳಿ ಖುಷಿಯಾಯಿತಂತೆ. ದೊಡ್ಡ ವಿತರಣೆ ಸಂಸ್ಥೆಯೊಂದು ಚಿತ್ರ ಬಿಡುಗಡೆ ಮಾಡಲು ಮುಂದಾಗಿದೆ. ದೊಡ್ಡ ಮೊತ್ತಕ್ಕೆ ಚಿತ್ರದ ವಿತರಣೆ ಹಕ್ಕು ಪಡೆದಿದ್ದು ಇನ್ನೊಂದು ಹೆಮ್ಮೆಯ ವಿಷಯ. ನಿರ್ಮಾಪಕರು ಈಗಾಗಲೇ ಸೇಫ್ ಆಗಿದ್ದಾರೆ. ನಮಗಂತೂ ವಿಶ್ವಾಸವಿದೆ. ವಿತರಕರಿಗೂ ಚಿತ್ರ ಗೆಲುವು ತಂದುಕೊಡಲಿ. ಚಿತ್ರದಲ್ಲಿ ನಾನು ಐಎಎಸ್‌ ಅಧಿಕಾರಿ ಪಾತ್ರ ಮಾಡಿದ್ದೇನೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಅವರು ಹೇಳಿದ ಹಾಗೆ ನಾನು ಕೆಲಸ ಮಾಡಿದ್ದೇನೆ. ರಿಯಲ್‌ ಲೈಫ್ನಲ್ಲಿ ನಾನು ಓದಿದ್ದು ಕಮ್ಮಿ. ಆದರೆ, ರೀಲ್‌ನಲ್ಲಿ ನಿರ್ದೇಶಕರು ನನ್ನನ್ನು ಜಿಲ್ಲಾಧಿಕಾರಿ ಮಾಡಿದ್ದಾರೆ. ಪಾತ್ರ ಎಲ್ಲರಿಗೂ ಇಷ್ಟ ಆಗುತ್ತೆ ಅಂದರು ಸತೀಶ್‌.

ನಟಿ ಸೋನುಗೌಡ ಅವರಿಲ್ಲಿ, ಜಿಲ್ಲಾಧಿಕಾರಿ ಹೆಂಡತಿ ಪಾತ್ರ ಮಾಡಿದ್ದಾರಂತೆ. ನಟ ಸರ್ದಾರ್‌ ಸತ್ಯ ಅವರಿಲ್ಲಿ ಖಳನಟರಾಗಿ ಕಾಣಿಸಿಕೊಂಡಿದ್ದು, ಸಿನಿಮಾ ನೋಡಿದವರು, ನನ್ನ ಮೇಲೆ ಕೋಪಿಸಿಕೊಳ್ಳುವಷ್ಟರ ಮಟ್ಟಿಗೆ ಆ ಪಾತ್ರವಿದೆ ಅಂದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.