ಗ್ರಾಮೀಣ ರಣಹೇಡಿ


Team Udayavani, Feb 22, 2019, 12:30 AM IST

28.jpg

ಕನ್ನಡದಲ್ಲಿ ರೈತರ ಸಮಸ್ಯೆ ಕುರಿತಂತೆ ಹಲವು ಚಿತ್ರಗಳು ಬಂದಿವೆ. ಆ ಸಾಲಿಗೆ “ರಣಹೇಡಿ’ ಸದ್ದಿಲ್ಲದೆ ಚಿತ್ರೀಕರಣಗೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಫಿಲ್ಮ್ಚೇಂಬರ್‌ನ ಗೌರವ ಕಾರ್ಯದರ್ಶಿ ಭಾ.ಮ.ಹರೀಶ್‌ ಆಡಿಯೋ ಬಿಡುಗಡೆ ಮಾಡಿ ಶುಭಹಾರೈಸಿದರು. ಮೊದಲ ಸಲ ಚಿತ್ರತಂಡದೊಂದಿಗೆ ಪತ್ರಕರ್ತರ ಮುಂದೆ ಬಂದಿದ್ದ ನಿರ್ದೇಶಕ ಮನು ಕೆ.ಶೆಟ್ಟಿಹಳ್ಳಿ, ಮಾತಿಗಿಳಿದರು. “ಇದು ರೈತರ ಬದುಕು ಬವಣೆ ಕುರಿತಾದ ಚಿತ್ರ. ಇಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಸರ್ಕಾರಿ ಶಾಲೆ ಹಾಗು ಖಾಸಗಿ ಶಾಲೆ ನಡುವಿನ ವ್ಯತ್ಯಾಸ, ಹಳ್ಳಿಯೊಂದರ ಪ್ರೇಮಕಥೆ, ದ್ವೇಷ, ಅಸೂಯೆ, ಹಾಸ್ಯ ಎಲ್ಲವೂ ಇಲ್ಲಿ ಸಮ್ಮಿಳಿತಗೊಂಡಿದೆ. ನಿರ್ಮಾಪಕರು ಕೇಳಿದ್ದೆಲ್ಲವನ್ನೂ ಒದಗಿಸಿದ್ದಾರೆ. ನಮ್ಮಂತಹ ನಿರ್ದೇಶಕರಿಗೆ ಇಂತಹ ನಿರ್ಮಾಪಕರು ಸಿಗಬೇಕು’ ಎಂದರು ನಿರ್ದೇಶಕರು.

ಹಲವು ಚಿತ್ರಗಳಲ್ಲಿ ತರಹೇವಾರಿ ಪಾತ್ರ ಮಾಡಿದ್ದ ಕರ್ಣ ಕುಮಾರ್‌ ಅವರು ಚಿತ್ರದ ಹೀರೋ. ಆದರೆ, ಅವರಿಗೆ ಹೀರೋ ಅಂತ ಕರೆಸಿಕೊಳ್ಳುವುದು ಇಷ್ಟವಿಲ್ಲ. ಅವರೇ ಹೇಳುವಂತೆ, ” ನಾನಿಲ್ಲಿ ನಾಯಕ ನಟನಲ್ಲ. ಆ ಭ್ರಮೆಯಲ್ಲೂ ಇಲ್ಲ. ಚಿತ್ರದಲ್ಲಿ ಇಬ್ಬರು ಹೀರೋಗಳಿದ್ದಾರೆ. ಒಬ್ಬರು ನಿರ್ಮಾಪಕರು. ಇನ್ನೊಬ್ಬರು ನಿರ್ದೇಶಕರು. ನಮ್ಮಂತಹ ಹೊಸಬರಿಗೆ ಅವಕಾಶ ಕೊಟ್ಟಿದ್ದಾರೆ. ಇನ್ನು, ನಿರ್ದೇಶಕರು ನನ್ನ ಪಾತ್ರ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಬಹಳಷ್ಟು ಸಿನಿಮಾದಲ್ಲಿ ಸಣ್ಣ ಪಾತ್ರ ಮಾಡಿದ್ದೇನೆ. ಇಲ್ಲಿ ಒಳ್ಳೆಯ ಅವಕಾಶವಿದೆ. ಈ ಪಾತ್ರಕ್ಕೆ ನಾನೇ ಬೇಕಿತ್ತಾ ಗೊತ್ತಿಲ್ಲ. ಆದರೆ, ಸಿಕ್ಕ ಅವಕಾಶ ಮಿಸ್‌ ಮಾಡಿಕೊಂಡಿಲ್ಲ. ಇನ್ನುಳಿದಂತೆ ಇಲ್ಲಿ ಕೆಲಸ ಮಾಡಿರುವ ತಾಂತ್ರಿಕ ವರ್ಗದವರು ಸ್ಟಾರ್’ ಎಂದರು ಕರ್ಣಕುಮಾರ್‌.

ಸಂಗೀತ ನಿರ್ದೇಶಕ ವಿ.ಮನೋಹರ್‌ ಅವರು ಬಹಳ ದಿನಗಳ ಬಳಿಕ ಹಳ್ಳಿ ಸೊಗಡಿನ ಚಿತ್ರಕ್ಕೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆಯಂತೆ. “ಕನ್ನಡದಲ್ಲಿ ಇತ್ತೀಚೆಗೆ ಹಳ್ಳಿ ಸೊಗಡಿನ ಕಥೆ ಬಂದಿಲ್ಲ. ಇವತ್ತಿಗೂ ಕನ್ನಡ ಸಿನಿಮಾವನ್ನು ಹಳ್ಳಿ ಜನರೇ ಹೆಚ್ಚು ನೋಡುತ್ತಿದ್ದಾರೆ. ಹಳ್ಳಿಗಳಲ್ಲೇ ಕನ್ನಡ ಚಿತ್ರ ಹೆಚ್ಚು ಪ್ರದರ್ಶನ ಕಾಣುತ್ತದೆ. ಇಲ್ಲಿ ರೈತರ ಸಮಸ್ಯೆ ಕುರಿತ ಅಂಶಗಳು ಹೈಲೈಟ್‌. ಒಂದೊಳ್ಳೆಯ ಚಿತ್ರದಲ್ಲಿ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ’ ಅಂದರು ಮನೋಹರ್‌. ನಿರ್ಮಾಪಕ ಸುರೇಶ್‌ ಅವರಿಗೆ ಇದು ಎರಡನೇ ಸಿನಿಮಾವಂತೆ. ಕಥೆ ಇಂಟ್ರೆಸ್ಟ್‌ ಆಗಿದ್ದರಿಂದಲೇ ನಾನು ಚಿತ್ರ ನಿರ್ಮಾಣಕ್ಕೆ ಮುಂದಾದೆ, ಒಳ್ಳೆಯ ತಂಡದ ಸಹಕಾರ, ಪ್ರೋತ್ಸಾಹದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇಷ್ಟರಲ್ಲೇ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿಕೊಂಡರು ಸುರೇಶ್‌.

ನಾಯಕಿ ಐಶ್ವರ್ಯ ರಾವ್‌ ಅವರಿಲ್ಲಿ ಬಳ್ಳಾರಿಯಿಂದ ಮಂಡ್ಯಕ್ಕೆ ಕಬ್ಬು ಕಡಿಯಲು ವಲಸೆ ಬಂದ ಕೂಲಿ ಹುಡುಗಿ ಪಾತ್ರ ನಿರ್ವಹಿಸಿದ್ದಾರಂತೆ. ರೈತನ ಹೆಂಡತಿ ಪಾತ್ರ ಮಾಡಿದ್ದು, ಅದೊಂದು ಹೊಸ ಅನುಭವ ಕಟ್ಟಿಕೊಟ್ಟಿದೆ ‘ ಎಂಬುದು ಅವರ ಮಾತು. ಚಿತ್ರದ ಬಗ್ಗೆ ಸಂಕಲನಕಾರ ನಾಗೇಂದ್ರ ಅರಸ್‌, ರಾಘವೇಂದ್ರ ಶೆಟ್ಟಿ, ರಘುಪಾಂಡೆ, ಆಶಾಲತಾ, ಛಾಯಾಗ್ರಾಹಕ ಕುಮಾರ್‌ಗೌಡ, ಖಳನಟ ಸತೀಶ್‌, ಗಾಯಕ ಮಳವಳ್ಳಿ ನಾಗೇಂದ್ರ ಮಾತನಾಡಿದರು.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.