ಕೆಟ್ಟೋರ ಜಗತ್ತಲ್ಲಿ ಮತ್ತೆ ಡಾಲಿ


Team Udayavani, Feb 22, 2019, 12:30 AM IST

32.jpg

ಪ್ರಭು ಶ್ರೀನಿವಾಸ್‌ ನಿರ್ದೇಶನದ “ಗಣಪ’ ಸಿನಿಮಾ ನೋಡಿದ ಧನಂಜಯ್‌ ಫೋನ್‌ ಮಾಡಿ, ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರಂತೆ. ಕಟ್‌ ಮಾಡಿದರೆ, ಮೈಸೂರಿನಲ್ಲಿ ಧನಂಜಯ್‌ ಹಾಗೂ ಪ್ರಭು ಶ್ರೀನಿವಾಸ್‌ ಭೇಟಿಯಾಗಿ ಕಥೆಯೊಂದರ ಬಗ್ಗೆ ಚರ್ಚಿಸಿ, ಮುಂದೊಂದು ದಿನ ಸಿನಿಮಾ ಮಾಡುವ ಬಗ್ಗೆ ಮಾತುಕತೆ ಮಾಡಿದ್ದಾರೆ. ಇತ್ತ ಕಡೆ “ಟಗರು’ ಚಿತ್ರದ ಡಾಲಿ ಪಾತ್ರದ ಮೂಲಕ ನೆಗೆಟಿವ್‌ ಪಾತ್ರಗಳಲ್ಲಿ ಮಿಂಚುತ್ತಿರುವ ಧನಂಜಯ್‌ಗೆ ಡಾಲಿ ಎಂಬ ಟೈಟಲ್‌ನಡಿ ಸಿನಿಮಾ ಮಾಡಲು ಒಂದೊಳ್ಳೆಯ ಕಥೆ ಬೇಕಿತ್ತು. ಅಂದು ಪ್ರಭು ಶ್ರೀನಿವಾಸ್‌ ಹೇಳಿದ ಕಥೆಯನ್ನು ಇಷ್ಟಪಟ್ಟಿದ್ದ ಧನಂಜಯ್‌ ಈಗ ಆ ಕಥೆಗೆ ನಾಯಕರಾಗಿದ್ದಾರೆ. ಹೌದು, ಧನಂಜಯ್‌ “ಡಾಲಿ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. “ಎ ಬ್ಯಾಡ್‌ ಮೆನ್ಸ್‌ ವರ್ಲ್ಡ್’ ಎಂಬ ಟ್ಯಾಗ್‌ಲೈನ್‌ ಇದೆ.  

ಸೂರಿ ನಿರ್ದೇಶನದ “ಟಗರು’ ಚಿತ್ರದ ಡಾಲಿ ಪಾತ್ರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸ್ವತಃ ಸೂರಿಯೇ ಡಾಲಿ ಟೈಟಲ್‌ ಅನ್ನು ರಿಜಿಸ್ಟರ್‌ ಮಾಡಿಸಿದ್ದರಂತೆ. ಜೊತೆಗೆ ಯಾರಾದರೂ ಈ ಟೈಟಲ್‌ಗೆ ಹೊಂದಿಕೆಯಾಗುವಂತಹ ಸಿನಿಮಾ ಮಾಡುವವರಿದ್ದರೆ ಟೈಟಲ್‌ ಕೊಡುವುದಾಗಿಯೂ ಹೇಳುತ್ತಿದ್ದರಂತೆ. ಇತ್ತ ಕಡೆ ಪ್ರಭು ಶ್ರೀನಿವಾಸ್‌ ಅವರ ಕಥೆ ಕೇಳಿದ ಧನಂಜಯ್‌ಗೆ ಇದು ಡಾಲಿ ಟೈಟಲ್‌ಗೆ ಹೊಂದುತ್ತದೆ ಎನಿಸಿ, ಸೂರಿಯವರಲ್ಲಿ ಟೈಟಲ್‌ ಕೇಳಿ ಪಡೆದಿದ್ದಾರೆ. “ಡಾಲಿ’ ಎಂಬ ಟೈಟಲ್‌ ಇದ್ದ ಮೇಲೆ ಸಿನಿಮಾದ ಕಥೆ ಹೇಗಿರಬಹುದು ಎಂದು ಊಹಿಸಿಕೊಳ್ಳೋದು ಸುಲಭ. “ಟಗರು’ ಚಿತ್ರದ ಡಾಲಿ ಪಾತ್ರವೇ ಇಲ್ಲಿ ಮುಂದುವರೆಯುತ್ತದೆಯಂತೆ. ಚಿತ್ರತಂಡ ಹೇಳುವಂತೆ ಇದು ಸೆಲೆಬ್ರೇಶನ್‌ ಆಫ್ ಡಾಲಿ ಆಗಲಿದೆಯಂತೆ. ಡಾಲಿ ಪಾತ್ರವನ್ನು ಇಷ್ಟಪಟ್ಟ ಮಂದಿಗೆ ಈ ಸಿನಿಮಾವೂ ಇಷ್ಟವಾಗಲಿದೆ ಎನ್ನುವುದು ನಿರ್ದೇಶಕ ಪ್ರಭು ಶ್ರೀನಿವಾಸ್‌ ಮಾತು. ಈ ಚಿತ್ರವನ್ನು ಯೋಗೇಶ್‌ ನಾರಾಯಣ್‌ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಧನಂಜಯ್‌ ಅವರ “ಎರಡನೇ ಸಲ’ ಚಿತ್ರವನ್ನು ನಿರ್ಮಿಸಿದ್ದು, ಇದೇ ಯೋಗೇಶ್‌. ಆದರೆ, ಆ ಚಿತ್ರ ವಿವಾದಗಳಿಂದಲೇ ಹೆಚ್ಚು ಸುದ್ದಿಯಾಯಿತು. ಜೊತೆಗೆ ಸಾಕಷ್ಟು ತಡವಾಯಿತು ಕೂಡಾ. “ಡಾಲಿ’ ಚಿತ್ರದ ಬಗ್ಗೆ ಮಾತನಾಡುವ ಯೋಗೇಶ್‌ ನಾರಾಯಣ್‌, “ಕಥೆ ತುಂಬಾ ಚೆನ್ನಾಗಿದೆ. ಸಿನಿಮಾ ಕೂಡಾ ಅದ್ಧೂರಿಯಾಗಿ ಮೂಡಿಬರಲಿದೆ. ಇದು ಪಂಚವಾರ್ಷಿಕ ಯೋಜನೆ ಆಗಲ್ಲ. ಈ ವರ್ಷವೇ ಬಿಡುಗಡೆ ಮಾಡುತ್ತೇವೆ’ ಎಂದರು. 

ತಮ್ಮ ಹೊಸ ಚಿತ್ರದ ಬಗ್ಗೆ ಮಾತನಾಡುವ ಧನಂಜಯ್‌, “ಪ್ರಭು ಶ್ರೀನಿವಾಸ್‌ ಅವರ ಹಿಂದಿನ ಸಿನಿಮಾಗಳನ್ನು ನೋಡಿದ್ದೇನೆ. ತುಂಬಾ ಚೆನ್ನಾಗಿ ಕಟ್ಟಿಕೊಡುತ್ತಾರೆ. ಈ ಕಥೆ ಕೂಡಾ ಚೆನ್ನಾಗಿದೆ. ಇಲ್ಲಿ ಕೆಟ್ಟೋರ ಜಗತ್ತನ್ನು ತೋರಿಸಲಿದ್ದೇವೆ. ವಿಲನ್‌ಗಳ ನಡುವಿನ ಹೊಡೆದಾಟ ಸೇರಿದಂತೆ ಹಲವು ಅಂಶಗಳು ಇಲ್ಲಿವೆ. ಆ್ಯಕ್ಷನ್‌ ಜೊತೆಗೆ ಸಾಕಷ್ಟು ಫ‌ನ್‌ ಅಂಶಗಳು ಕೂಡಾ ಈ ಚಿತ್ರದಲ್ಲಿದೆ’ ಎನ್ನುತ್ತಾ “ಡಾಲಿ’ ಟೈಟಲ್‌ ಕೊಟ್ಟ ಸೂರಿಗೊಂದು ಥ್ಯಾಂಕ್ಸ್‌ ಹೇಳಿದರು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.