ಕಾಡುವ ಕಥೆ ನೋಡುವ ಸಮಯ


Team Udayavani, Mar 15, 2019, 12:30 AM IST

6.jpg

ನೈಜ ಘಟನೆಯನ್ನಾಧರಿಸಿ ಬರುತ್ತಿರುವ “ಮಿಸ್ಸಿಂಗ್‌ ಬಾಯ್‌’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಸುದೀಪ್‌ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಈ ಚಿತ್ರವನ್ನು ರಘುರಾಮ್‌ ನಿರ್ದೇಶಿಸುತ್ತಿದ್ದಾರೆ. ಅಂದು ಕಾರ್ಯಕ್ರಮಕ್ಕೆ ಸುದೀಪ್‌ ಅತಿಥಿಯಾಗಿ ಬರಲು ಕಾರಣ, ರಘುರಾಮ್‌ ಮಾಡಿದ ಸಹಾಯವಂತೆ. ಅದು ಸುದೀಪ್‌ ಅವರ “ಮೈ ಆಟೋಗ್ರಾಫ್’ ಚಿತ್ರಕ್ಕೆ ಒಳ್ಳೆಯ ಸ್ಯಾಟ್‌ಲೆçಟ್‌ ಬೆಲೆ ಕೊಡಿಸಿದ್ದು. ಆಗ ವಾಹಿನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಘುರಾಮ್‌, ಸುದೀಪ್‌ ಅವರ ಸಿನಿಮಾಕ್ಕೆ ಒಳ್ಳೆಯ ಬೆಲೆ ಕೊಡಿಸುವ ಮೂಲಕ ಆ ಸಮಯದಲ್ಲಿ ಸಹಾಯಕ್ಕೆ ಬಂದರಂತೆ. ಅದನ್ನು ತಾನು ಯಾವತ್ತಿಗೂ ಮರೆಯಲ್ಲ ಎನ್ನುತ್ತಾ, “ಮಿಸ್ಸಿಂಗ್‌ ಬಾಯ್‌’ಗೆ ಶುಭಕೋರಿದರು. “ನನಗೆ ಈ ಸಿನಿಮಾದ ಕಥೆ ಬಗ್ಗೆ ಗೊತ್ತಿಲ್ಲ. ಆದರೆ, ಟ್ರೇಲರ್‌ ತುಂಬಾ ಚೆನ್ನಾಗಿದೆ. ಇವತ್ತು ಕಂಟೆಂಟ್‌ ಸಿನಿಮಾಗಳು ಚೆನ್ನಾಗಿ ಹೋಗುತ್ತವೆ. ಕಂಟೆಂಟ್‌ ಸಿನಿಮಾಗಳ ಮುಂದೆ ಸ್ಟಾರ್‌ಡಮ್‌ ಕೂಡಾ ಅಲ್ಲಾಡ್ತಾ ಇದೆ. ಇದು ಕೂಡಾ ಕಂಟೆಂಟ್‌ ಸಿನಿಮಾ ಎಂದು ಕೇಳಿ ಖುಷಿಯಾಯಿತು’ ಎಂದರು ಸುದೀಪ್‌.

ನಿರ್ದೇಶಕ ರಘುರಾಮ್‌ ಕೊಂಚ ಭಾವುಕರಾಗಿದ್ದರು. ಏಕೆಂದರೆ ಈ ಚಿತ್ರದ ಚಿತ್ರೀಕರಣ ಸಮಯದಲ್ಲಿ ರಘುರಾಮ್‌ ಅವರ ತಾಯಿ ತೀರಿಕೊಂಡರಂತೆ. ಈ ಸಿನಿಮಾದ ಕಥೆ ಕೂಡಾ ತಾಯಿಯನ್ನು ಹುಡುಕಿಕೊಂಡು ಬರುವ ಮಗನದ್ದು. “ಈ ಸಿನಿಮಾ ಮೂಲಕ ನನ್ನ ತಾಯಿಯನ್ನು ನೋಡುತ್ತೇನೆ. ನಾನು ತುಂಬಾ ಖುಷಿಪಟ್ಟು ಮಾಡಿದ ಸಿನಿಮಾವಿದು. ಈ ಸಿನಿಮಾ ನಂತರ ನಾನು ಮುಂದೆ ಸಿನಿಮಾ ಮಾಡುತ್ತೇನೋ, ಬಿಡುತ್ತೇನೋ. ಆದರೆ, ಈ ಕಥೆಯಂತೂ ನನಗೆ ತೃಪ್ತಿ ಕೊಟ್ಟಿದೆ’ ಎಂದರು. ಚಿತ್ರದ ಪ್ರಮೋಶನ್‌ಗಾಗಿ, ಕ್ಯೂಆರ್‌ ಕೋಡ್‌ ಎಂಬ ತಂತ್ರಜ್ಞಾನವನ್ನು ಬಳಸಿದ್ದು, ಆ ಮೂಲಕ ಸಿನಿಮಾದ ಎಲ್ಲಾ ವಿವರಗಳನ್ನು ನೋಡಬಹುದು ಎಂದು ಮಾಹಿತಿ ನೀಡಿದರು ರಘು. ಚಿತ್ರವನ್ನು ಕೊಲ್ಲ ಪ್ರವೀಣ್‌ ನಿರ್ಮಿಸಿದ್ದು, ಅವರಿಗೆ ಒಳ್ಳೆಯ ಸಿನಿಮಾ ನಿರ್ಮಾಣ ಮಾಡಿದ ಖುಷಿ ಇದೆ. ಚಿತ್ರದಲ್ಲಿ ಗುರುನಂದನ್‌ ನಾಯಕರಾಗಿ ನಟಿಸಿದ್ದಾರೆ. “ತಾಯಿಯನ್ನು ಹುಡುಕಿಕೊಂಡು ಬರುವ ಮಗನ ಘಟನೆಯನ್ನು ನಾನು ಕೇಳಿದ್ದೆ. ಆದರೆ, ಆ ಕಥೆಯೇ ನನಗೆ ಸಿನಿಮಾವಾಗಿ ಸಿಕ್ಕಿದೆ. ನನ್ನನ್ನು ತುಂಬಾ ಕಾಡಿದ ಕಥೆ’ ಎಂದರು. ನಾಯಕಿ ಅರ್ಚನಾ ಜಯಕೃಷ್ಣ, ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ರವಿಶಂಕರ್‌ ಗೌಡ ಹಾಗೂ ರಂಗಾಯಣ ರಘು ಕೂಡಾ ತಮ್ಮ ಅನುಭವ ಹಂಚಿಕೊಂಡರು. ರಂಗಾಯಣ ರಘು ಅವರು ಇಲ್ಲಿ ಪೊಲೀಸ್‌ ಆಫೀಸರ್‌ ಆಗಿ ನಟಿಸಿದ್ದಾರೆ. ಅಂದಹಾಗೆ, ಚಿತ್ರ ಮಾರ್ಚ್‌ 22 ರಂದು ತೆರೆಕಾಣಲಿದೆ. 

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.