ಮಕ್ಕಳ ಮನಸ್ಸಿನಾಟ


Team Udayavani, Mar 22, 2019, 12:30 AM IST

manasina-aata-copy-copy.jpg

“ಬ್ಲೂ ವೇಲ್‌ ಗೇಮ್‌’ ಕುರಿತಂತೆ ಮಕ್ಕಳ ಮನಸ್ಸಿನ ಮೇಲೆ ಅದು ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತೆ ಎಂಬ ಅಂಶಗಳೊಂದಿಗೆ ಹೀಗೊಂದು ಚಿತ್ರ ಮೂಡಿಬಂದಿದೆ. ಅದಕ್ಕೆ ಇಟ್ಟ ಹೆಸರು “ಮನಸ್ಸಿನಾಟ’. “ನೀಲಿ ತಿಮಿಂಗಿಲ’ ಎಂಬ ಅಡಿಬರಹವೂ ಇದೆ. ಈ ಚಿತ್ರವನ್ನು ಆರ್‌.ರವೀಂದ್ರ ನಿರ್ದೇಶನ ಮಾಡಿದ್ದಾರೆ. 

ಬಿಡುಗಡೆಗೆ ಸಿದ್ಧವಾಗಿರುವ “ಮನಸ್ಸಿನಾಟ’ ಬಗ್ಗೆ ಹೇಳಲೆಂದೇ ಚಿತ್ರತಂಡದೊಂದಿಗೆ ಆಗಮಿಸಿದ್ದರು ನಿರ್ದೇಶಕ ರವೀಂದ್ರ.

“ಈ ಚಿತ್ರದಲ್ಲಿರುವುದು ಹೊಸ ಕಥೆ ಅಲ್ಲ. ಎಲ್ಲರಿಗೂ  ತಿಳಿದಿರುವಂಥದ್ದು. ಶೇ.90 ರಷ್ಟು ವಿದ್ಯಾರ್ಥಿಗಳು ಈ ಬ್ಲೂ ವೇಲ್‌ ಗೇಮ್‌ ಆಡುತ್ತಿದ್ದಾರೆ ಎಂಬ ಬಗ್ಗೆ ಸಂಶೋಧನೆಯಿಂದ ತಿಳಿದುಕೊಂಡು ಇದರ ಮೇಲೊಂದು ಚಿತ್ರ ಮಾಡಿ, ಮುಗ್ಧ ವಿದ್ಯಾರ್ಥಿಗಳಿಗೂ ಮತ್ತು ಪೋಷಕರಿಗೊಂದು ಸಂದೇಶ ಕೊಡಬೇಕೆಂಬ ನಿಟ್ಟಿನಲ್ಲಿ ಚಿತ್ರ ಮಾಡಲಾಗಿದೆ. ಮಕ್ಕಳ ಕೈಯಲ್ಲಿ ಮೊಬೈಲ್‌ ಕೊಡಬೇಡಿ. ಕೊಟ್ಟರೆ, ಅವರ ಮನಸ್ಸು ಹೇಗೆಲ್ಲಾ ಪರಿವರ್ತನೆಯಾಗುತ್ತೆ. ಕೆಲವೊಂದು ಆಟಗಳಿಂದ ಅವರು ಹೇಗೆ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುತ್ತಾರೆ ಎಂಬ ಅಂಶಗಳಿವೆ. ಟೀನೇಜ್‌ ಮನಸ್ಸಿನವರಿಗೆ ಮೊಬೈಲ್‌ ಎಷ್ಟು ಅಪಾಯಕಾರಿ ಎಂಬುದು ಚಿತ್ರದ ಮುಖ್ಯ ಉದ್ದೇಶ’ ಅಂದರು ರವೀಂದ್ರ.

ಮಾ.ಹರ್ಷಿತ್‌ ಇಲ್ಲಿ ಪ್ರಮುಖ ಆಕರ್ಷಣೆ. 9 ನೇ ತರಗತಿ ಓದುತ್ತಿರುವ ಹರ್ಷಿತ್‌, “ಇದೊಂದು ಜಾಗೃತಿ ಮೂಡಿಸುವ ಚಿತ್ರ. ಮೊಬೈಲ್‌ಗೆ ಜೋತು ಬಿದ್ದಿರುವ ಹುಡುಗರು ಈ ಚಿತ್ರ ನೋಡಬೇಕು. ಇದರಿಂದ ಸಾಕಷ್ಟು ಸಂದೇಶವಿದೆ’ ಎಂದರು. ಪ್ರೀತಿಕಾ ಕೂಡ ಇಲ್ಲಿ ಅರ್ಪಿತಾ ಎಂಬ ಪಾತ್ರ ಮಾಡಿದ್ದು, ಅವರಿಲ್ಲಿ ಡ್ರಗ್ಸ್‌ ಸೇವಿಸುವ ಹುಡುಗಿಯಾಗಿ ಕಾಣಸಿಕೊಂಡಿದ್ದಾರಂತೆ. ದತ್ತಣ್ಣ ಇಲ್ಲಿ ತಾತನ ಪಾತ್ರ ಮಾಡಿದ್ದಾರಂತೆ. ಅವರಿಗೆ ಈ ಬ್ಲೂ ವೇಲ್‌ ಗೇಮ್‌ ಬಗ್ಗೆ ಗೊತ್ತಿಲ್ಲವಂತೆ. ಅಷ್ಟಕ್ಕೂ ಅವರು ಈಗಲೂ ಸರಿಯಾಗಿ ಮೊಬೈಲ್‌ ಬಳಸುವುದಿಲ್ಲವಂತೆ. ಒಂದು ದಿನದ ಪಾತ್ರ ಅಂದರು. ಹೋದೆ, ಒಂದು ದಿನದಲ್ಲಿ ನಾಲ್ಕು ಲೊಕೇಷನ್‌ಗೆ ಹೋಗಿ 8 ಸೀನ್‌ ಚಿತ್ರೀಕರಿಸಿದರು. 14 ವರ್ಷದ ಒಳಗಿರುವ ಮಕ್ಕಳು ಮೊಬೈಲ್‌ ಹಿಡಿದರೆ, ಆಗುವ ದುಷ್ಪರಿಣಾಮಗಳ ಕುರಿತಾದ ಚಿತ್ರವಿದು. ಪೋಷಕರು ಸಹ ಚಿತ್ರ ನೋಡಬೇಕು. ಸರ್ಕಾರ ಇಂತಹ ಚಿತ್ರವನ್ನು ಎಲ್ಲಾ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ವೀಕ್ಷಿಸುವಂತೆ ಮಾಡಬೇಕು’ ಎಂದರು ದತ್ತಣ್ಣ.

ಇದಕ್ಕೂ ಮುನ್ನ ಚಿತ್ರದ ಟ್ರೇಲರ್‌ ಮತ್ತು ಹಾಡು ತೋರಿಸಲಾಯಿತು. ಉಮೇಶ್‌ ಬಣಕಾರ್‌ ಹಾಗು ಭಾ.ಮ.ಗಿರೀಶ್‌ ಟ್ರೇಲರ್‌, ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ನಿರ್ಮಾಪಕದ್ವಯರಾದ ಮಂಜುನಾಥ್‌ ಮತ್ತು ಹನುಮೇಶ್‌ ಪಾಟೀಲ್‌ಗೆ ಇದು ಮೊದಲ ಅನುಭವ. ಸಚಿನ್‌, ಹನುಮೇಶ್‌ ಸಂಗೀತವಿದೆ. ಮಂಜುನಾಥ್‌ ಬಿ.ನಾಯ್ಕ ಛಾಯಾಗ್ರಹಣವಿದೆ. ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಯಮುನಾ ಶ್ರೀನಿಧಿ, ರಾಮಸ್ವಾಮಿ, ಚಂದನ್‌, ಮಂಜುನಾಥ್‌ ಹೆಗಡೆ ಇದ್ದಾರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.