ಲಂಬೋದರ ಹಾಸ್ಯಪ್ರಸಂಗ


Team Udayavani, Mar 22, 2019, 12:30 AM IST

londonalli-lambodhara.jpg

ಲಂಬೋದರನಿಗೂ ಲಂಡನ್‌ಗೂ ಎತ್ತಣಿಂದೆತ್ತ ಸಂಬಂಧ … ಈಗ ಆ ಸಂಬಂಧವನ್ನು ಬಿಚ್ಚಿಡಲು ಸಿನಿಮಾವೊಂದು ಬರುತ್ತಿದೆ. ಅದು “ಲಂಡನ್‌ನಲ್ಲಿ ಲಂಬೋದರ’. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ “ಲಂಡನ್‌ನಲ್ಲಿ ಲಂಬೋದರ’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ನಿರ್ದೇಶಕ ರಿಷಭ್‌ ಶೆಟ್ಟಿ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದರು. ಜೊತೆಗೊಂದು ಕಿವಿಮಾತು ಹೇಳಿದರು. “ಸಿನಿಮಾದ ಟ್ರೇಲರ್‌ ಚೆನ್ನಾಗಿದೆ. ಇಲ್ಲಿಂದ ಲಂಡನ್‌ಗೆ ಹೋಗಿ ಅರ್ಧ ಸಿನಿಮಾ ಚಿತ್ರೀಕರಣ ಮಾಡುವುದು ಸುಲಭವಲ್ಲ. ಅಂತಹ ಕೆಲಸವನ್ನು ಈ ಚಿತ್ರತಂಡ ಮಾಡಿದೆ. ಈ ತರಹದ ಚಿತ್ರಗಳನ್ನು ಇಷ್ಟಪಡುವ ವರ್ಗವೇ ಬೇರೆ ಇದೆ. ಹಾಗಾಗಿ, ಸಿನಿಮಾ ತಂಡ ಪ್ರಮೋಶನ್‌ನಲ್ಲಿ ಹಿಂದೆ ಬೀಳಬಾರದು. ಕಷ್ಟಪಟ್ಟು ಮಾಡಿದ ಕೆಲಸವನ್ನು ಜನರಿಗೆ ತಲುಪಿಸಬೇಕಾದರೆ ಸಿನಿಮಾದ ಪ್ರಮೋಶನ್‌ ಮುಖ್ಯ. ಆ ನಿಟ್ಟಿನಲ್ಲಿ ಚಿತ್ರತಂಡ ಪ್ರಯತ್ನಿಸಬೇಕು’ ಎಂದರು. 

ಈ ಚಿತ್ರದಲ್ಲಿ ಸಂತೋಷ್‌ ನಾಯಕರಾಗಿ ನಟಿಸಿದ್ದಾರೆ. ಐಟಿ ಕ್ಷೇತ್ರದಿಂದ ಬಂದಿರುವ ಸಂತೋಷ್‌ ಅವರಿಗೆ “ಲಂಡನ್‌ನಲ್ಲಿ ಲಂಬೋದರ’ ಚಿತ್ರ ಒಳ್ಳೆಯ ಅನುಭವ ಕೊಟ್ಟಿದೆಯಂತೆ. ಏನಾದರೂ ಸಾಧಿಸಬೇಕೆಂದು ಲಂಡನ್‌ಗೆ ಹೋಗಿ ಅಲ್ಲಿ ಪರದಾಡುವ ಸ್ಥಿತಿಯ ಸುತ್ತ ಇವರ ಪಾತ್ರ ಸಾಗುತ್ತದೆಯಂತೆ. “ಚಿತ್ರದಲ್ಲಿ ನಾನು ಬಿಟ್ಟರೆ ಉಳಿದವರೆಲ್ಲರೂ ಅನುಭವಸ್ಥರು. ಹಾಗಾಗಿ, ಅವರಿಂದ ಸಾಕಷ್ಟು ಕಲಿತೆ’ ಎಂದರು. ಚಿತ್ರದಲ್ಲಿ ಶೃತಿ ಪ್ರಕಾಶ್‌ ನಾಯಕಿ. ಅವರಿಲ್ಲಿ ಕನ್ನಡ, ಕರ್ನಾಟಕವನ್ನು ಪ್ರೀತಿಸುವ ಪ್ರತಿಭಾವಂತ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರವನ್ನು ರಾಜ್‌ಸೂರ್ಯ ನಿರ್ದೇಶಿಸಿದ್ದಾರೆ. ಇವರಿಗಿದು ಮೊದಲ ಚಿತ್ರ. ಬೆಂಗಳೂರಿನ ಯುವಕನೊಬ್ಬ ಹಲವು ನಂಬಿಕೆಗಳನ್ನು ಹೊತ್ತು, ಲಂಡನ್‌ಗೆ ಹಾರುತ್ತಾನೆ. ಅಲ್ಲಿ ಹೋದವನಿಗೆ ಎದುರಾಗುವ ಕಷ್ಟಗಳು ಮತ್ತು ಒಂದಷ್ಟು ಸಮಸ್ಯೆಗಳು ಹೇಗೆ ಹಾಸ್ಯರೂಪ ಪಡೆಯುತ್ತವೆ ಎಂಬುದನ್ನು ಇಲ್ಲಿ ತೋರಿಸಲಾಗಿದೆ ಎಂಬುದು ನಿರ್ದೇಶಕರ ಮಾತು. ವಿದೇಶದಲ್ಲಿರುವ ಸಿನಿಮಾ ಪ್ರೀತಿಸುವ ಕೆಲವು ಕನ್ನಡಿಗರು ಪ್ರೀತಿಯಿಂದಲೇ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗ ಪ್ರಣವ್‌ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.