ನಿರೂಪಣೆ, ಮಾತೇ ಬಂಡವಾಳ


Team Udayavani, Aug 22, 2018, 2:55 PM IST

22-agust-13.jpg

ಮಾತನಾಡುವುದು ಒಂದು ಕಲೆ. ಎಲ್ಲರಿಗೂ ಇದು ಸಿದ್ಧಿಸುವುದಿಲ್ಲ. ಆದರೆ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡವರೂ ಇದ್ದಾರೆ. ಇವರಲ್ಲಿ ಮುಖ್ಯವಾಗಿ ಮನೀಷ್‌ ಪೌಲ್‌, ಕಪಿಲ್‌ ಶರ್ಮಾ, ಜಯ ಬಾನು ಶಾಲಿ, ಮಂದಿರಾ ಬೇಡಿ, ಮಿನಿ ಮಾಥೂರ್‌, ಅನುಶ್ರೀ, ಸೃಜನ್‌ ಲೋಕೇಶ್‌, ಅಕುಲ್‌ ಬಾಲಾಜಿ ಮತ್ತಿತರರ ಹೆಸರು ಕೂಡಲೇ ನೆನಪಾಗುತ್ತದೆ. ಹೆಚ್ಚು ಮಾತನಾಡುವವರನ್ನು ಕೆಲವರು ವಾಚಾಳಿ ಎಂದರೂ ಈ ಅಭ್ಯಾಸವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡರೆ ಒಂದೊಳ್ಳೆ ಸ್ಥಾನವನ್ನು ಗಿಟ್ಟಿಸಿಕೊಳ್ಳಲು ಸಾಧ್ಯವಿದೆ.

ಮಾತು ಬಲ್ಲವರಿಗೆ ಜಗಳವಿಲ್ಲ. ಊಟ ಬಲ್ಲವನಿಗೆ ರೋಗವಿಲ್ಲ ಎನ್ನುವಂತೆ ಮಾತು ಎಲ್ಲವನ್ನೂ ನೀಡುತ್ತದೆ. ವಾಕ್ಚಾತುರ್ಯವನ್ನು ಬಂಡವಾಳ ಮಾಡಿಕೊಂಡು ಕಾರ್ಯಕ್ರಮಗಳ ನಿರೂಪಣೆ ಮಾಡುವುದನ್ನು ಕಲಿತರೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಬೇಡಿಕೆಯನ್ನು ಪಡೆಯಬಹುದು. ಒಂದು ಕಾರ್ಯಕ್ರಮದ ಜೀವಾಳವೇ ನಿರೂಪಣೆ. ಇಲ್ಲಿ ವ್ಯಕ್ತಿತ್ವದಷ್ಟೇ ಮುಖ್ಯವಾಗಿರುವುದು ಸ್ಪಷ್ಟ ಉಚ್ಛಾರ, ಎಲ್ಲರನ್ನೂ ಸೆಳೆಯಬಲ್ಲ ಕಂಠ, ನಿರೂಪಣೆ ಶೈಲಿ.

ನಿರೂಪಣೆಗೆ ಯಾವುದೇ ವಯಸ್ಸಿನ ಹಂಗಿಲ್ಲ. ಫ‌ುಲ್‌ ಟೈಮ್‌, ಪಾರ್ಟ್‌ಟೈಮ್‌ ಆಗಿ ಇದರಲ್ಲಿ ತೊಡಗಿಸಿಕೊಳ್ಳಬಹುದು. ಇದಕ್ಕೆ ಬೇಕಿರುವುದು ಆಸಕ್ತಿ ಹಾಗೂ ಚಾಕಚಕ್ಯತೆ. ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಸ್ವಲ್ಪ ತಯಾರಿಮಾಡಿಕೊಂಡು, ವ್ಯಾಪ್ತಿಗನುಗುಣವಾಗಿ ಜನರನ್ನು ಮಾತಿನ ಮೂಲಕ ರಂಜಿಸುವ ಕಲೆ ಇದ್ದರೆ ಸಾಕು ಎಲ್ಲರೂ ನಿಮ್ಮ ಮಾತಿಗೆ ಮೋಡಿಯಾಗುವರು.

ಇತ್ತೀಚಿನ ದಿನಗಳಲ್ಲಿ ಕಾರ್ಯಕ್ರಮ ನಿರೂಪಕರಿಗೆ ಅವಕಾಶಗಳು ಹೆಚ್ಚಾಗಿವೆ. ಕಾರಣ ಟಿವಿ ಮಾಧ್ಯಮಗಳಲ್ಲಿ ಇಂದು ರಿಯಾಲಿಟಿ ಶೋಗಳು ಹೆಚ್ಚಿವೆ. ಹೀಗಾಗಿ ಉತ್ತಮ ಮಾತುಗಾರರಿಗೆ ಅವಕಾಶಗಳು ಎಲ್ಲೆಡೆಯೂ ತೆರೆದಿವೆ. ಆ್ಯಂಕರ್‌ ಆಗಬೇಕು, ಟಿವಿಯಲ್ಲಿ ಕಾಣಿಸಿಕೊಳ್ಳಬೇಕು ಎನ್ನುವಂಥ ಹಂಬಲ ಇರುವವರು ನಿರೂಪಣಾ ಶೈಲಿ ಮತ್ತು ಭಾಷೆಯನ್ನು ತಿಳಿದುಕೊಂಡಿರುವುದು ಅತೀ ಅಗತ್ಯ. ಶಾಲೆ, ಕಾಲೇಜುಗಳಲ್ಲಿ ಭಾಷಣ, ಸಂವಾದ, ಡಿಬೇಟ್‌ ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ಮೆಚ್ಚುಗೆ ಗಳಿಸಿದ್ದರೆ ಮುಂದೆ ಇಂತಹ ಕ್ಷೇತ್ರದಲ್ಲೂ ಉದ್ಯೋಗ ಕಂಡುಕೊಳ್ಳಲು ಸಾಧ್ಯವಿದೆ.

ತರಬೇತಿಗಳು
ನಿರೂಪಣೆ ಶೈಲಿ, ಮಾತಿನ ಮೇಲೆ ನಿಯಂತ್ರಣ ಸಾಧಿಸಲು, ಸಮಯ ಮೀರದೆ ಮಾತನಾಡುವ ವಿಧಾನ ಕಲಿಯಬೇಕೆಂದರೆ ಹೆಚ್ಚಿನ ಖರ್ಚಿಲ್ಲ. ಕೆಲವು ಸಂಸ್ಥೆಗಳು ಇಂತಹ ತರಬೇತಿಯನ್ನು ನೀಡುತ್ತಿರುತ್ತವೆ. ಜತೆಗೆ ಟಿವಿ ರಿಯಾಲಿಟಿ ಶೋ, ಆ್ಯಂಕರ್‌ ಗಳಿಗೆ ಪ್ರತ್ಯೇಕ ತರಬೇತಿ, ಕೋರ್ಸ್‌ಗಳಿವೆ. ಈ ಕುರಿತು ಆನ್‌ ಲೈನ್‌, ಯುಟ್ಯೂಬ್‌ ಚಾನೆಲ್‌ ಮೂಲಕವೂ ಕಲಿತುಕೊಳ್ಳಬಹುದಾಗಿದೆ.

ಉತ್ತಮ ನಿರೂಪಕನ ಜವಾಬ್ದಾರಿಗಳು
ಆರಂಭದಲ್ಲಿ ಕೃತಜ್ಞತೆ ಸಲ್ಲಿಸುವುದು, ಎಲ್ಲರೊಂದಿಗೂ ಪ್ರೀತಿಯಿಂದ ವರ್ತಿಸುವುದು, ನಿಮ್ಮ ಅತ್ಯುತ್ತಮ ಸಂಗತಿಯನ್ನು ಹಂಚಿಕೊಳ್ಳುವುದು, ಏನು ಮಾತನಾಡುತ್ತಿದ್ದೀರಿ ಎಂಬ ಅರಿವು, ಕೇಳುಗರ ಕುರಿತು ಅಧ್ಯಯನ, ಕೇಳಗರಿಗೆ ಗೌರವ ಕೊಡುವುದು, ಆಯಾಸ ತೋರ್ಪಡಿಸದಿರುವುದು, ವೇದಿಕೆ ಖಾಲಿಯಾಗದಂತೆ ನೋಡಿಕೊಳ್ಳುವುದು.

 ಭರತ್‌ ರಾಜ್‌ ಕರ್ತಡ್ಕ                     

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.