ಜ್ಞಾನವೃದ್ಧಿಗೆ  ಸಮೂಹ ಮಾಧ್ಯಮ


Team Udayavani, Dec 26, 2018, 12:54 PM IST

26-december-6.gif

ಟಿವಿ, ಮೊಬೈಲ್‌ ಬಳಕೆಯಿಂದ ಮಕ್ಕಳು ಹಾಳಾಗುತ್ತಾರೆ ಎಂಬ ಆತಂಕ ಬಹುತೇಕ ಹೆತ್ತವರು, ಶಿಕ್ಷಕರಲ್ಲಿದೆ. ಇದನ್ನು ಬಿಟ್ಟು ಅವರು ಅದನ್ನುಸರಿಯಾಗಿ ಬಳಸಿಕೊಳ್ಳುವಂತೆ ಮಾರ್ಗದರ್ಶನ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಟಿವಿ, ರೇಡಿಯೋ ಮೂಲಕ ಪಠ್ಯಗಳ ಬೋಧನೆಯ ಜತೆಗೆ ಸಾಮಾನ್ಯ ಜ್ಞಾನ ಹೆಚ್ಚಿಸ ಬಲ್ಲ ಕೆಲವೊಂದು ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿದೆ. ಇದರ ಪ್ರಯೋಜನ ಪಡೆದರೆ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಸಾಮಾನ್ಯ ಜ್ಞಾನ ಹೆಚ್ಚಿಸುವುದರೊಂದಿಗೆ ಪರೀಕ್ಷೆ ತಯಾರಿಯೂ ಸುಲಭವಾಗುವುದು.

ಪುಸ್ತಕದಲ್ಲಿರುವ ವಿಷಯಗಳನ್ನು ಓದಿ, ಅಧ್ಯಾಪಕರು ತರಗತಿಯಲ್ಲಿ ಮಾಡಿದ ಪಾಠವನ್ನು ಕೇಳಿ ಪರೀಕ್ಷೆ ಬರೆಯುವ ಕಾಲ ಬದಲಾಗಿದೆ. ಮುಂದುವರಿದ ತಂತ್ರಜ್ಞಾನದ ಪರಿಣಾಮ ನೆಟ್‌ನಿಂದ ವಿಷಯಗಳನ್ನು ಆಯ್ದು ನೀವೇ ಮಾಹಿತಿ ಪಡೆದುಕೊಳ್ಳಿ ಎಂಬುದಾಗಿ ಅಧ್ಯಾಪಕರು ಕೈ ಚೆಲ್ಲಿ ಬಿಡುತ್ತಾರೆ. ಇದಕ್ಕೆ ವಿದ್ಯಾರ್ಥಿಗಳು ಕೂಡ ಒಗ್ಗಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳೇ ಹೆಚ್ಚು ಪ್ರಾಮುಖ್ಯ ಪಡೆದಿರುವ ಈ ಕಾಲಘಟ್ಟದಲ್ಲಿ ಅದರಿಂದ ಒಳಿತು ಹಾಗೂ ಕೆಡುಕುಗಳಾದ ಅನೇಕ ಉದಾಹರಣೆಗಳಿವೆ. ಆದರೆ ಅದನ್ನು ಪ್ರಬುದ್ಧತೆಯಿಂದ ಬಳಸುವ ಜವಾಬ್ದಾರಿ ಬಳಸುವವರ ಮೇಲಿದೆ. ಫೇಸ್‌ಬುಕ್‌, ಟ್ವಿಟರ್‌ ಸಹಿತ ಟಿವಿ, ರೇಡಿಯೋಗಳಲ್ಲೂ ಶೈಕ್ಷಣಿಕವಾಗಿ ಆಯಾಯ ವಿಷಯಗಳಿಗೆ ಸಂಬಂಧಿಸಿದ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುತ್ತಿದೆ. ಅದನ್ನು ನಮ್ಮ ಒಳಿತಿಗಾಗಿ ಬಳಸಿಕೊಳ್ಳುವುದು ನಮ್ಮ ವಿವೇಚನೆಗೆ ಬಿಟ್ಟಿದ್ದು.

ಟಿವಿ ರೇಡಿಯೋಗಳ ಬಳಕೆ
ಮಕ್ಕಳು ಟಿವಿ ನೋಡುತ್ತಾರೆ ಎಂಬುದನ್ನು ಗಮನಿಸುವ ಹೆತ್ತವರು ಅವರು ಯಾವ ಕಾರ್ಯಕ್ರಮ ನೋಡುತ್ತಾರೆ. ಅದು ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಗಮನಿಸುವುದಿಲ್ಲ. ಹೀಗಾಗಿ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ.

ಮನೆಯಲ್ಲಿ ಟಿವಿ ಇರಬೇಕು, ಮಕ್ಕಳಿಗೆ ಅದನ್ನು ನೋಡಲು ಬಿಡಬೇಕು. ಆದರೆ ಯಾವುದನ್ನು ನೋಡಬೇಕು ಎಂಬುದರ ವಿವೇಚನೆಯನ್ನು ಮಕ್ಕಳಲ್ಲಿ ಬೆಳೆಸಬೇಕು. ಇದರಿಂದ ಮಕ್ಕಳಲ್ಲಿ ಸಂಯಮ ಬೆಳೆಯುತ್ತದೆ. ಮೂರ್ಖರ ಪೆಟ್ಟಿಗೆ ಎಂದು ಕರೆಯುವ ಟಿವಿಯನ್ನು ಜಾಣತನದಿಂದ ಬಳಸಬೇಕು. ಟಿವಿಗಿಂತ ಮೊದಲೇ ಕಂಪ್ಯೂಟರ್‌ ಮತ್ತು ಇಂಟರ್‌ನೆಟ್‌ನ ಗೀಳು ಹತ್ತಿಕೊಂಡರೆ ಮಕ್ಕಳಿಗೆ ಅನಾವಶ್ಯಕ ವಿಚಾರಗಳ ಪರಿಚಯವಾಗುತ್ತದೆ.

ಪರಿಣಾಮಕಾರಿ ಬಳಕೆ
ಟಿವಿ, ರೇಡಿಯೋಗಳಲ್ಲೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾಹಿತಿ ನೀಡುವ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಕೆಲವೊಂದು ಚಾನೆಲ್‌ ಗಳು  ಕಠಿಣವಾದ ವಿಷಯಗಳ ಕುರಿತು ತರಗತಿಯನ್ನೇ ನಡೆಸುತ್ತದೆ. ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸುಲಭ ವಿಧಾನಗಳನ್ನು ಪರಿಚಯಿಸುತ್ತದೆ. ಡಿಸ್ಕವರಿ, ನ್ಯಾಶನಲ್‌ ಜಿಯೋಗ್ರಫಿ ಚಾನೆಲ್‌ಗ‌ಳ ಮೂಲಕ ಜೀವ ವೈವಿಧ್ಯಗಳ ಕುರಿತಾದ ಸಾಕಷ್ಟು ವಿಷಯಗಳನ್ನು ಅರಿಯಲು ಅವಕಾಶ ಇದೆ. ಇನ್ನೂ ಕೆಲವು ಚಾನೆಲ್‌ಗ‌ಳಲ್ಲಿ ಕ್ವಿಜ್‌ ಸ್ಪರ್ಧೆ, ವಿದ್ಯಾರ್ಥಿಗಳ ಪಠ್ಯೇತರ ಜ್ಞಾನವನ್ನು ನೀಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ.

ಇನ್ನೂ ರೇಡಿಯೋದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿವಿಧ ಕಾರ್ಯಕ್ರಮ ಆಯೋಜನೆಗೊಳ್ಳುತ್ತದೆ. ಉದಾಹರಣೆಗೆ ಮಂಗಳೂರು ಆಕಾಶವಾಣಿಯಲ್ಲಿ ರೇಡಿಯೋ ಪಾಠ ಆರಂಭಿಸಲಾಗಿದ್ದು, ಇದು ವಾರದಲ್ಲಿ ಮೂರು ದಿನ ಪ್ರಸಾರವಾಗಲಿದೆ. ದ್ವಿತೀಯ ಭಾಷೆ ಇಂಗ್ಲಿಷ್‌, ಗಣಿತ ಹಾಗೂ ವಿಜ್ಞಾನ ವಿಷಯದ ಪಾಠಗಳಲ್ಲಿ ಪರೀಕ್ಷಾ ದೃಷ್ಟಿಯಿಂದ  ಮುಖವಾದ ಅಂಶಗಳನ್ನು 21 ಅನುಭವಿ ವಿಷಯ ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಸರಳವಾಗಿ ಅರ್ಥವಾಗುವಂತೆ ಬೋಧಿಸಲಾಗುತ್ತಿದೆ. ಪ್ರತಿ ಶಾಲೆಯಲ್ಲಿ ಇದನ್ನು ಕೇಳುವ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದರಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಆದೇಶ ಕೂಡ ಮಾಡಲಾಗಿದೆ. ಸರಕಾರ, ಟಿವಿ ಚಾನೆಲ್‌ಗ‌ಳು ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ. ಈ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ಶಿಕ್ಷಕರು ಮಾಡಬೇಕಾಗಿದೆ.

ಸಾಮಾನ್ಯ ಜ್ಞಾನ ಹೆಚ್ಚಳ
ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ದೊರೆಯುವ ವಿಚಾರಗಳನ್ನು ಮಾತ್ರ ತಿಳಿಸುವುದು ಶಿಕ್ಷಕರ ಕರ್ತವ್ಯವಲ್ಲ. ಪಠ್ಯೇತರ ವಿಷಯ ಹಾಗೂ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳುವಂತೆ ಮಾಡುವುದು ಕೂಡ ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಟಿವಿ, ರೇಡಿಯೋ ಹಾಗೂ ಇನ್ನಿತರ ಮಾಧ್ಯಮಗಳ ಮಿತ ಬಳಕೆ ಅವಶ್ಯ. ಪಠ್ಯದಿಂದ ಹೊರಗಿನ ವಿಚಾರಗಳನ್ನು ತಿಳಿದುಕೊಳ್ಳಲು ಇದು ಸಹಕಾರಿ. ನ್ಯೂಸ್‌ ಚಾನೆಲ್‌ಗ‌ಳನ್ನು ನೋಡಿದರೆ ಜಗತ್ತಿನ ವಿವಿಧ ದೇಶಗಳ ಸ್ಥಿತಿ, ಆಡಳಿತ ಇತ್ಯಾದಿ, ವಿವಿಧ ಇಲಾಖೆಗಳು, ಹುದ್ದೆಗಳು ಬಗ್ಗೆ ಜ್ಞಾನ ದೊರೆಯುತ್ತದೆ. ಆದರೆ ಎಲ್ಲವೂ ಇತಿಮಿತಿಯಲ್ಲಿದ್ದರೆ ಉತ್ತಮ. 

ಪಠ್ಯೇತರ ಚಟುವಟಿಕೆಗೆ ಸಹಕಾರಿ
ಟಿವಿ ಹಾಗೂ ರೇಡಿಯೋಗಳಲ್ಲಿ ಬರುವ ಉತ್ತಮ ಕಾರ್ಯಕ್ರಮಗಳನ್ನು ವೀಕ್ಷಿಸುವುದರಿಂದ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಹೆಚ್ಚುತ್ತದೆ. ಕ್ವಿಜ್‌ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಶ್ಯವಿರುವ ಜ್ಞಾನ ಲಭಿಸುತ್ತದೆ. ಆದರೆ ಅದನ್ನು ಸರಿಯಾಗಿ ಬಳಸುವಂತೆ ನೋಡಿಕೊಳ್ಳುವುದು ಹೆತ್ತವರು ಹಾಗೂ ಶಿಕ್ಷಕರ ಕರ್ತವ್ಯ. ಶಾಲೆಗಳಲ್ಲಿ ಶಿಕ್ಷಕರು ಇಂತಹ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಯಾವ ಕಾರ್ಯಕ್ರಮಗಳನ್ನು ಕೇಳುವುದು ಹಾಗೂ ನೋಡುವುದರಿಂದ ನಮ್ಮ ವಿಷಯಗಳಿಗೆ ಪೂರಕ ಎಂಬುದಾಗಿ ಮಾಹಿತಿ ನೀಡಬೇಕು.

ಪ್ರಜ್ಞಾ  ಶೆಟ್ಟಿ 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.