ಸೇವಾ ಮನೋಭಾವ ನಾಯಕತ್ವ ಬೆಳೆಸುವ ಎನ್ನೆಸ್ಸೆಸ್‌


Team Udayavani, Feb 13, 2019, 7:14 AM IST

13-february-9.jpg

Qವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎನ್ನೆಸ್ಸೆಸ್‌ ಹೇಗೆ ಪೂರಕ?
ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ನಮ್ಮ ಧ್ಯೇಯ ವಾಕ್ಯವೇ ‘ನನಗಲ್ಲ; ನಿನಗೆ’ ಎಂಬುದಾಗಿ. ಈಗ ಕೂಡು ಕುಟುಂಬ ಭಾಗ್ಯ ಕಡಿಮೆಯಾಗಿ ನಾನು; ನನ್ನದು ಎಂಬ ಸ್ವಾರ್ಥವೇ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಜನರೊಂದಿಗೆ ಸೇರಿಕೊಂಡು ನನಗಲ್ಲ; ನಿನಗೆ ಎಂಬ ಘೋಷದೊಡನೆ ನಮ್ಮ ಜನ, ನಮ್ಮ ದೇಶ, ನಮ್ಮ ಸಮಾಜಕ್ಕಾಗಿ ದುಡಿಯಬೇಕು ಎಂಬ ಭಾವನೆಯನ್ನು ಎನ್ನೆಸ್ಸೆಸ್‌ ಕಲಿಸಿಕೊಡುತ್ತದೆ.

Qಎನ್ನೆಸ್ಸೆಸ್‌ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುತ್ತದೆ ಹೇಗೆ?
ಸಣ್ಣ ಸಣ್ಣ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಎನ್ನೆಸ್ಸೆಸ್‌ ಸೃಷ್ಟಿಸಿ ಕೊಡುತ್ತದೆ. ಕಾರ್ಯಕ್ರಮ ಸಂಘಟನೆ, ಶ್ರಮದಾನ ತಂಡಗಳಿಗೆ ನಾಯಕತ್ವ ಇದೆಲ್ಲ ವಿದ್ಯಾರ್ಥಿಗಳನ್ನು ಬೆಳೆಸುವ ವೇದಿಕೆಗಳಾಗಿವೆ. ಇಂತಹ ಬೇರೆ ಬೇರೆ ಸಂದರ್ಭದಲ್ಲಿ ನಾಯಕತ್ವ ತೆಗೆದುಕೊಂಡು ಮುಂದೆ ಆತ ಉತ್ತಮ ನಾಯಕನಾಗಿ ರೂಪುಗೊಳ್ಳುವಲ್ಲಿ ಉತ್ತೇಜನ ನೀಡುತ್ತದೆ.

Qಎನ್ನೆಸ್ಸೆಸ್‌ನಲ್ಲಿ ಜೀವನ ಪಾಠವೇನಿದೆ?
ಸಂಬಂಧಗಳನ್ನು ಬೆಳೆಸಿಕೊಳ್ಳುವುದು, ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವುದು, ಹೊಂದಾಣಿಕೆ, ಸಹಬಾಳ್ವೆಯ ಜೀವನ ಸಹಿತ ಸ್ವಾವಲಂಬಿ ಹಾಗೂ ಸ್ವತಂತ್ರ ಬದುಕು ರೂಪಿಸುವ ಜೀವನಪಾಠ ಎನ್ನೆಸ್ಸೆಸ್‌ ಕಲಿಸುತ್ತದೆ. ಕರ್ತವ್ಯ ಅರ್ಥ ಮಾಡಿಕೊಂಡು, ಮೌಲ್ಯಾಧಾರಿತ ಬದುಕನ್ನು ರೂಪಿಸಲು ಇದೊಂದು ವೇದಿಕೆ. ವೃತ್ತಿ ಗೌರವ, ವ್ಯಕ್ತಿ ಗೌರವ ಬೆಳೆಸಿಕೊಳ್ಳುವುದು, ಸಾಮುದಾಯಿಕ, ಪರಿಸರ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ಅದನ್ನು ಪರಿಹರಿಸುವ ಪ್ರಯತ್ನಕ್ಕೆ ಮುಂದಾಗುವುದನ್ನು ತಿಳಿಸಿಕೊಡುತ್ತದೆ. ಪ್ರಾಕೃತಿಕ ವಿಕೋಪ ಘಟಿಸಿದಾಗ ಯಾವ ರೀತಿಯಲ್ಲಿ ತಯಾರಾಗಬೇಕು ಎಂಬ ತರಬೇತಿಯೂ ಸಿಗುತ್ತದೆ.

Qಮನೆ ಭೇಟಿಯಿಂದ ಕಲಿಯುವುದೇನಿದೆ?
ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಗಳು ಹೆಚ್ಚಾಗಿ ಗ್ರಾಮೀಣ ಭಾಗ ಗಳಲ್ಲೇ ನಡೆಯುತ್ತದೆ. ಮನೆ ಭೇಟಿ ಕಾರ್ಯಕ್ರಮದಿಂದ ಅಲ್ಲಿನ ಸಮಸ್ಯೆ, ವಿದ್ಯಾಭ್ಯಾಸ, ಉದ್ಯೋಗಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಸಮಸ್ಯೆ ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಲಾಗುತ್ತದೆ.

Q ಶುಚಿತ್ವ, ಪರಿಸರ ಸಂರಕ್ಷಣೆಗೆ ಎನ್ನೆಸ್ಸೆಸ್‌ ಹೇಗೆ ಸಹಕಾರಿ?
 ವೈಯಕ್ತಿಕ ಸ್ವಚ್ಛತೆ ಬಗ್ಗೆ ಶಿಬಿರದ ಆರಂಭದಲ್ಲಿಯೇ ಹೇಳಿಕೊಡಲಾಗುತ್ತದೆ. ವಿದ್ಯಾರ್ಥಿಗಳ ತಂಡ ರಚನೆ ಮಾಡುವಾಗ ಸ್ವಚ್ಛತೆಗೇ ಒಂದು ತಂಡವನ್ನು ನೇಮಿಸಲಾಗುತ್ತದೆ. ಅದನ್ನು ವಿದ್ಯಾರ್ಥಿಗಳು ಜವಾಬ್ದಾರಿ ತೆಗೆದುಕೊಂಡು ನಿರ್ವಹಿಸುತ್ತಾರೆ. ಅಷ್ಟೇ ಅಲ್ಲದೆ, ಸ್ವಚ್ಛತಾ ಸೇವೆ ಕೆಲವೊಮ್ಮ ಹಲವರ ಮನಃಪರಿವರ್ತನೆಗೂ ಕಾರಣವಾಗುತ್ತದೆ.

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.