ಕ್ವಿಝ್  ಜ್ಞಾನವೃದ್ಧಿಗೆ ಪೂರಕ


Team Udayavani, Feb 20, 2019, 8:00 AM IST

20-february-9.jpg

ಜ್ಞಾನವೃದ್ಧಿಗೆ ಪೂರಕವಾಗುವ ಕ್ವಿಝ್ ಸ್ಪರ್ಧೆಗಳಲ್ಲಿ ಎಲ್ಲರೂ ಮುಖ್ಯವಾಗಿ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಕೊಳ್ಳುವಂತೆ ಮಾಡಬೇಕು. ಇದರಿಂದ ಸ್ಪರ್ಧಾತ್ಮಕ ಜಗತ್ತಿಗೆ ನಮ್ಮನ್ನು ನಾವು ಸಿದ್ಧಪಡಿಸಲು ಸಾಕಷ್ಟು ನೆರವಾಗುವುದು. ಜತೆಗೆ ಹೆಚ್ಚಿನ ಅಂಕಗಳಿಕೆಗೆ, ಕಲಿತ ವಿಷಯವನ್ನು ಹೆಚ್ಚು ಕಾಲ ಸ್ಮರಣೆಯಲ್ಲಿರುವಂತೆ ಮಾಡಲು ಇದು ಪೂರಕವಾಗಿದೆ. ಆಧುನಿಕ ತಂತ್ರಜ್ಞಾನಗಳಿಂದ ಸಾಕಷ್ಟು ಅವಕಾಶಗಳನ್ನು ಮಾಡಿಕೊಟ್ಟಿದ್ದೇವೆ. ಇದರ ಸದ್ಬಳಕೆ ಮಾಡಿಕೊಂಡು ಕ್ವಿಝ್  ಬಿಡುಸುವಂಥ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು. ಇದು ನಮ್ಮ ಸುಂದರ ಭವಿಷ್ಯ ನಿರ್ಮಾಣ ಮಾಡುವಲ್ಲಿ ಪೂರಕವಾಗಿದೆ.

ಬೌ ದ್ಧಿಕ ಸಾಮರ್ಥ್ಯವನ್ನು ಬೆಳೆಸುವ ಮತ್ತು ಜ್ಞಾನದ ಮಟ್ಟವನ್ನು ಪರೀಕ್ಷಿಸುವ ಸ್ಪರ್ಧೆಗಳಲ್ಲಿ ರಸಪ್ರಶ್ನೆ (ಕ್ವಿಝ್) ಸ್ಪರ್ಧೆಯೂ ಒಂದು. ಗ್ರಹಿಸಿದ ಮಾಹಿತಿ, ಓದಿ ತಿಳಿದುಕೊಂಡ ವಿಚಾರಗಳು, ಸ್ಮರಣೆಯಲ್ಲಿ ಉಳಿದ ವಿಚಾರಗಳು ಪ್ರಶ್ನೆಯನ್ನು ಕೇಳಿದ ತತ್‌ಕ್ಷಣ ಸಕಾಲಕ್ಕೆ ನೆನಪಾಗಿ ಉತ್ತರಿಸುವ ಚಾಣಾಕ್ಷತನಕ್ಕೆ ಈ ರಸಪ್ರಶ್ನೆ ಸ್ಪರ್ಧೆ ನಮ್ಮನ್ನು ಒಡ್ಡುತ್ತದೆ.

ಇತ್ತೀಚಿನ ದಿನಗಳಲ್ಲಿ ಶಾಲೆ-ಕಾಲೇಜುಗಳಲ್ಲಿ ಪಠ್ಯಕ್ರಮವನ್ನು ಮುಗಿಸುವುದೇ ಸವಾಲಾಗಿರುವಾಗ ರಸಪ್ರಶ್ನೆಯಂತಹ ಸ್ಪರ್ಧೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಗಳು ಕಡಿಮೆಯಾಗಿವೆ. ಆಗಾಗ ರಸಪ್ರಶ್ನೆ ಕೇಳುವಿಕೆಯನ್ನು ಸ್ಪರ್ಧಾ ರೂಪದಲ್ಲಿ ಆಯೋಜಿಸುವುದರಿಂದ ಇದು ವಿದ್ಯಾರ್ಥಿಗಳನ್ನು ಒತ್ತಡದಿಂದ ಮುಕ್ತಗೊಳಿಸಿ ಮನರಂಜನೆಗೂ ಒಡ್ಡುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಅಧ್ಯಾಪಕರು ಹಮ್ಮಿಕೊಳ್ಳುವ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳೂ ಮುಕ್ತವಾಗಿ ಭಾಗವಹಿಸುತ್ತಾರೆ. ಏಕೆಂದರೆ, ಇದು ಕುತೂಹಲದ ಮತ್ತು ಬುದ್ಧಿಗೆ ಕಸರತ್ತು ನೀಡುವ ಆಟವಾಗಿರುವುದರಿಂದ ವಿದ್ಯಾರ್ಥಿಗಳು ಈ ಸ್ಪರ್ಧೆಯನ್ನು ಆಟವಾಗಿಯೇ ಹೆಚ್ಚು ಸಂಭ್ರಮಿಸುತ್ತಾರೆ.

ಜ್ಞಾನವರ್ಧನೆ
ಮೊದಲೇ ಹೇಳಿದಂತೆ ರಸಪ್ರಶ್ನೆ ಆಗಾಗ ಹಮ್ಮಿಕೊಳ್ಳುವುದರಿಂದ ಇದು ವಿದ್ಯಾರ್ಥಿಗಳ ಜ್ಞಾನವರ್ಧನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪಠ್ಯದಲ್ಲಿನ ಅಂಶಗಳನ್ನೇ ರಸಪ್ರಶ್ನೆ ರೂಪದಲ್ಲಿ ಕೇಳಿದರೆ, ಒಂದು ವೇಳೆ ಆತ ತಪ್ಪು ಉತ್ತರ ನೀಡಿದರೂ, ಮುಂದೆ ಸರಿ ಉತ್ತರ ತಿಳಿಸಿದ ಮೇಲೆ ಆ ಉತ್ತರ ಆತನ ನೆನಪಿನಲ್ಲಿ ಸದಾ ಕಾಲ ಉಳಿಯುವಂತಾಗುತ್ತದೆ. ಸ್ಪರ್ಧಿಗಳಲ್ಲದ ವಿದ್ಯಾರ್ಥಿಗಳೂ ಇದನ್ನು ನೆನಪಿನಲ್ಲಿ ಉಳಿದುಕೊಳ್ಳುವಂತೆ ವೇದಿಕೆ ಸೃಷ್ಟಿಸಿಕೊಡುತ್ತದೆ. ಪರೀಕ್ಷೆಯ ದೃಷ್ಟಿಯಿಂದ ಪಠ್ಯಾಧಾರಿತ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಂಡರೆ, ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ವರ್ಧನೆಗೆ ಪಠ್ಯರಹಿತ, ಪ್ರಪಂಚದ ಆಗುಹೋಗುಗಳನ್ನು ತಿಳಿದುಕೊಳ್ಳುವ ಅವಕಾಶ ಲಭ್ಯವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ತೆರನಾದ ಸ್ಪರ್ಧೆ ಹಮ್ಮಿಕೊಳ್ಳುವುದು ಕಡಿಮೆಯಾಗುತ್ತಿದೆ.

ಕ್ವಿಜ್‌ ವೀಕ್ಷಣೆಯಿಂದ ಜ್ಞಾನವರ್ಧನೆ
ಟಿವಿ, ಪತ್ರಿಕೆಗಳಲ್ಲಿ ಮೆದುಳಿಗೆ ಕೆಲಸ ಕೊಡುವ ರಸಪ್ರಶ್ನೆಗಳು ಪ್ರಕಟವಾಗುತ್ತಲೇ ಇರುತ್ತವೆ. ಇವನ್ನೇ ಆಯ್ದುಕೊಂಡು ವಿದ್ಯಾರ್ಥಿಗಳ ಚುರುಕುತನಕ್ಕೆ ಕೆಲಸ ಕೊಡುವ ಕೆಲಸವನ್ನು ಅಧ್ಯಾಪಕರು ಮಾಡಬಹುದು. ಶಾಲೆ, ಕಾಲೇಜು, ಅಂತರ್‌ ಶಾಲಾ, ಕಾಲೇಜು ಮಟ್ಟಗಳಲ್ಲಿ, ತಾಲೂಕು, ಜಿಲ್ಲಾ, ರಾಜ್ಯ ಮಟ್ಟಗಳಲ್ಲಿ ರಸಪ್ರಶ್ನೆ ಸ್ಪರ್ಧೆಗಳು ನಡೆಯುತ್ತಲಿರುತ್ತವೆ. ಇಂಥವುಗಳಿಗೆ ಆಯ್ದ ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವ ಮೂಲಕವೂ ಅವರ ಜ್ಞಾನ ವೃದ್ಧಿಗೆ ಶಿಕ್ಷಕರು ಪ್ರಯತ್ನಿಸಬಹುದು.

ಪಠ್ಯೇತರ ಆಸಕ್ತಿ
ತರಗತಿಗಳಲ್ಲೂ ಆಯಾ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿ, ಸಣ್ಣ ಬಹುಮಾನವನ್ನು ನೀಡುವ ಕೆಲಸ ಅಧ್ಯಾಪಕರು ಮಾಡಬೇಕು. ಬಹುಮಾನ ನಗದು ಆದರೂ ಸರಿಯೇ, ಚಾಕಲೇಟ್‌ ಆದರೂ ಸರಿಯೇ.. ಇವೆಲ್ಲ ವಿದ್ಯಾರ್ಥಿಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿ ನೀಡುತ್ತದೆ. ಶಾಲಾ ಹಂತದಲ್ಲಿ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ವಿದ್ಯಾರ್ಥಿಯೊಬ್ಬ ಸಾಮಾನ್ಯ ಜ್ಞಾನ ಬೆಳೆಸಿಕೊಂಡು ಮುಂದೆ ಐಎಎಸ್‌ ಅಧಿಕಾರಿಯಾಗಿ ಬೆಳೆಯುವ ಅವಕಾಶವನ್ನೂ ಪಡೆದುಕೊಳ್ಳಬಹುದು. ಪಠ್ಯೇತರ ಆಸಕ್ತಿಯನ್ನೂ ಈ ರಸಪ್ರಶ್ನೆ ಸ್ಪರ್ಧೆಗಳು ಬೆಳೆಸುತ್ತವೆ.

ಕೌಶಲಾಭಿವೃದ್ಧಿಗೆ ಪೂರಕ
ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಸೃಜನಶೀಲ ಪ್ರತಿಭೆಗಳು ರಸಪ್ರಶ್ನೆಯ ಮೂಲಕ ಹೊರ ಬರಬಹುದು. ಹಾಡಿನ ಮೂಲಕ, ಪ್ರಶ್ನೆಯ ಮೂಲಕ ಹೀಗೆ ನಾನಾ ಮಾದರಿಯಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಪ್ರಯೋಗಿಸಿ ನೋಡಬಹುದು. ದಡ್ಡ ವಿದ್ಯಾರ್ಥಿಯೋರ್ವನನ್ನೂ ಸರಾಸರಿ ಅಂಕ ಪಡೆಯುವ ನಿಟ್ಟಿನಲ್ಲಿ ತಯಾರುಗೊಳಿಸುವ ಶಕ್ತಿ ರಸಪ್ರಶ್ನೆಗಿದೆ ಎನ್ನುತ್ತಾರೆ ಶಿಕ್ಷಕಿ ಅಮಿತಾ ಚಿದಾನಂದ್‌. ಕ್ವಿಝ್ ಎನ್ನುವುದು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅವರಿಗೆ ಹೊಸ ಹೊಸ ಅವಕಾಶಗಳನ್ನು ತೆರೆದಿಡು ತ್ತದೆ. ಹೀಗಾಗಿ ತರಗತಿಯ ಪ್ರತಿಯೊಬ್ಬ ವಿದ್ಯಾರ್ಥಿಗಳೂ ಇಂಥ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಬೇಕಾಗಿದೆ.

ಹೊರೆಯಾಗದಿರಲಿ
ವಿದ್ಯಾರ್ಥಿಗಳ ಪ್ರತಿಭೆಯನ್ನು ಒರೆಗೆ ಹಚ್ಚುವ ಅಥವಾ ಅವರ ಬುದ್ಧಿಶಕ್ತಿಗೆ ಯಾವುದೇ ಕೆಲಸ ಕೊಡುವ ಮೊದಲು ಅದು ಆ ವಿದ್ಯಾರ್ಥಿಗೆ ಹೊರೆಯಾಗದಂತೆ ನೋಡಿಕೊಳ್ಳುವುದೂ ಅಷ್ಟೇ ಮುಖ್ಯ.
ಈಗಾಗಲೇ ಶೈಕ್ಷಣಿಕ ಪಠ್ಯಗಳನ್ನು ಓದುವುದನ್ನೇ ವಿದ್ಯಾರ್ಥಿಗಳಿಗೆ ಹಿಂಸೆಯಾಗುವ ರೀತಿಯಲ್ಲಿ ನಮ್ಮ ಶಿಕ್ಷಣ ವ್ಯವಸ್ಥೆ ಇರುವಾಗ, ಅವರ ಮಾನಸಿಕ ತಾಕತ್ತಿಗೆ ಇನ್ನಷ್ಟು ಕಠಿನ ಪರಿಸ್ಥಿತಿಗಳನ್ನು ಸೃಷ್ಟಿಸುವುದು ತಪ್ಪು. ಹಾಗಾಗಿ ರಸಪ್ರಶ್ನೆಯಲ್ಲಿ ತೊಡಗಿಸಿಕೊಳ್ಳುವಂತೆ ಹೇರಿಕೆ ಮಾಡದೆ, ವಿದ್ಯಾರ್ಥಿಗಳೇ ಇಷ್ಟಪಟ್ಟು ತೊಡಗಿಸಿಕೊಳ್ಳುವಂತೆ ಮಾಡುವ ಚಾಣಾಕ್ಷತನ ಅಧ್ಯಾಪಕರಲ್ಲಿರಬೇಕು. ಇದಕ್ಕೆ ಅಂಕ ನೀಡಲಾಗುತ್ತದೆ ಎಂದು ಹೆದರಿಸದೆ, ಜ್ಞಾನವರ್ಧನೆಗೆ ಉತ್ತಮ ಎಂದು ಪ್ರೀತಿಯಿಂದ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ಮಾಡಬೇಕಾದ ಗುರುತರ ಜವಾಬ್ದಾರಿಯೂ ಅಧ್ಯಾಪಕರಿಗಿದೆ.

 ಧನ್ಯಾ ಬಾಳೆಕಜೆ 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.