ಸಬ್ಬಸಿಗೆ ಸೊಪ್ಪಿನಿಂದ ಹಬ್ಬದ ಅಡುಗೆ 


Team Udayavani, Oct 6, 2018, 3:08 PM IST

6-october-11.gif

ಸುವಾಸನೆಯಿಂದ ಕೂಡಿದ ಸಬ್ಬಸಿಗೆ ಸೊಪ್ಪು, ಅಧಿಕ ತೇವಾಂಶ, ನಾರಿನಂಶ, ಕ್ಯಾಲ್ಸಿಯಂ, ಕಬ್ಬಿಣ ಹಾಗೂ ಸಿ ಜೀವಸತ್ವವನ್ನು ಒಳಗೊಂಡಿದೆ. ಸಬ್ಬಸಿಗೆ ಸೊಪ್ಪನ್ನು ಬಳಸಿ ಸುಲಭವಾಗಿ ಮಾಡಬಹುದಾದ ಕೆಲವೊಂದು ಅಡುಗೆ ವಿಧಾನಗಳು ಇಲ್ಲಿವೆ. 

ಸೂಪ್‌
ಬೇಕಾಗುವ ಸಾಮಗ್ರಿಗಳು
ಸಣ್ಣಗೆ ಹೆಚ್ಚಿದ ಸಬ್ಬಸಿಗೆ ಸೊಪ್ಪು- 2 ಕಪ್‌, ಕ್ಯಾರೆಟ್‌ ತುರಿ- ಅರ್ಧ ಕಪ್‌, ಟೊಮೆಟೊ- ಅರ್ಧ ಕಪ್‌, ಆಲೂಗಡ್ಡೆ ತುರಿ- ಅರ್ಧ ಕಪ್‌, ಕಾಳು ಮೆಣಸಿನಪುಡಿ- ಅರ್ಧ ಚಮಚ, ಶುಂಠಿ- ಸಣ್ಣ ತುಂಡು, ಸಕ್ಕರೆ- ಅರ್ಧ ಚಮಚ, ಉಪ್ಪು ರುಚಿಗೆ, ತುಪ್ಪ- 1 ಚಮಚ, ಬೆಣ್ಣೆ ಸ್ವಲ್ಪ. 

ಮಾಡುವ ವಿಧಾನ
ಬಾಣಲೆಗೆ ತುಪ್ಪ ಹಾಕಿ, ಟೊಮೆಟೊ, ಈರುಳ್ಳಿ, ಕ್ಯಾರೆ ಟ್‌, ಆಲೂಗಡ್ಡೆಯನ್ನು ಚೆನ್ನಾಗಿ ಬಾಡಿಸಿ. ಅನಂತರ ಶುಂಠಿ, ಸಬ್ಬಸಿಗೆ ಸೊಪ್ಪು, ಕಾಳು ಮೆಣಸು, ಸಕ್ಕರೆ, ಉಪ್ಪು ಸೇರಿಸಿ ಅರೆಯಿರಿ. ಅರೆದ ಮಿಶ್ರಣವನ್ನು ಚೆನ್ನಾಗಿ ಕುದಿಸಿದರೆ ಸಬ್ಬಸಿಗೆ ಸೂಪ್‌ ರೆಡಿ. ಅದಕ್ಕೆ ಬೆಣ್ಣೆ ಸೇರಿಸಿ ಸವಿಯಿರಿ. 

ಚಟ್ನಿ ಪುಡಿ
ಬೇಕಾಗುವ ಸಾಮಗ್ರಿಗಳು
ಹೆಚ್ಚಿದ ಸಬ್ಬಸಿಗೆ ಸೊಪ್ಪು- 2 ಕಪ್‌, ಕರಿಬೇವಿನ ಎಲೆ-1 ಕಪ್‌, ಕಡಲೆಬೇಳೆ- ಅರ್ಧ ಕಪ್‌, ಉದ್ದಿನಬೇಳೆ- ಕಾಲು ಕಪ್‌, ಒಣಕೊಬ್ಬರಿ ತುರಿ- 1 ಕಪ್‌, ಅಚ್ಚ ಖಾರದ ಪುಡಿ- ಅರ್ಧ ಕಪ್‌, ಹುಣಸೆಹಣ್ಣು- 1 ಇಂಚು, ಸಕ್ಕರೆ- 1 ಚಮಚ, ಉಪ್ಪು-ರುಚಿಗೆ, ಎಣ್ಣೆ- ಕಾಲು ಕಪ್‌, ಸಾಸಿವೆ- 1 ಚಮಚ, ಇಂಗು- ಕಾಲು ಚಮಚ. 

ಮಾಡುವ ವಿಧಾನ
ಸಬ್ಬಸಿಗೆ ಸೊಪ್ಪು, ಕರಿಬೇವು, ಕಡಲೆಬೇಳೆ, ಉದ್ದಿನಬೇಳೆ, ಒಣಕೊಬ್ಬರಿ ತುರಿ, ಖಾರದ ಪುಡಿಯನ್ನು ಬೇರೆಬೇರೆಯಾಗಿ ಹುರಿದು, ಒಟ್ಟಿಗೆ ಸೇರಿಸಿಡಿ. ಆ ಮಿಶ್ರಣಕ್ಕೆ ಹುಣಸೆಹಣ್ಣು, ಸಕ್ಕರೆ, ಉಪ್ಪು ಸೇರಿಸಿ ನುಣ್ಣಗೆ ಪುಡಿ ಮಾಡಿ. ಆ ಪುಡಿಗೆ ಸಾಸಿವೆ- ಇಂಗಿನ ಒಗ್ಗರಣೆ ಸೇರಿಸಿದರೆ ಚಟ್ನಿ ಪುಡಿ ಸಿದ್ಧ. 

ಸಬ್ಬಸಿಗೆ ದಾಲ್‌
ಬೇಕಾಗುವ ಸಾಮಗ್ರಿಗಳು
ಹೆಚ್ಚಿದ ಸಬ್ಬಸಿಗೆ ಸೊಪ್ಪು- 2 ಕಪ್‌, ತೊಗರಿಬೇಳೆ- 1 ಕಪ್‌, ಅರಿಸಿನ- ಅರ್ಧ ಚಮಚ, ಜೀರಿಗೆ ಪುಡಿ- 1 ಚಮಚ, ಕಾಳು ಮೆಣಸಿನಪುಡಿ- ಅರ್ಧ ಚಮಚ, ಉಪ್ಪು, ತೆಂಗಿನತುರಿ- 3 ಚಮಚ, ಹಸಿಮೆಣಸು- 3, ಎಣ್ಣೆ- 3 ಚಮಚ, ಸಾಸಿವೆ- 1ಚಮಚ.

ಮಾಡುವ ವಿಧಾನ
ತೊಗರಿಬೇಳೆಗೆ ಚಿಟಿಕೆ ಅರಿಸಿನ, ಅರ್ಧ ಚಮಚ ಎಣ್ಣೆ ಹಾಕಿ ಕುಕ್ಕರ್‌ನಲ್ಲಿ ಬೇಯಿಸಿ. ಸಾಸಿವೆ ಒಗ್ಗರಣೆ ಮಾಡಿ, ಹಸಿಮೆಣಸು ಹಾಗೂ ಸಬ್ಬಸಿಗೆ ಸೊಪ್ಪು ಹಾಕಿ ಚೆನ್ನಾಗಿ ಬಾಡಿಸಿ. ಅದಕ್ಕೆ ಬೇಯಿಸಿದ ಬೇಳೆ, ಜೀರಿಗೆ, ಕಾಳುಮೆಣಸು, ಉಪ್ಪು, ತೆಂಗಿನತುರಿ ಹಾಕಿ ಕುದಿಸಿ.  

ಪರೋಟಾ
ಬೇಕಾಗುವ ಸಾಮಗ್ರಿ

ಗೋಧಿ ಹಿಟ್ಟು- 2 ಕಪ್‌, ಹೆಚ್ಚಿದ ಸಬ್ಬಸಿಗೆ ಸೊಪ್ಪು- 1ಕಪ್‌, ಗರಂ ಮಸಾಲೆ ಪುಡಿ- 2 ಚಮಚ, ಹೆಚ್ಚಿದ ಕೊತ್ತಂಬರಿ ಸೊಪ್ಪು- ಅರ್ಧ ಕಪ್‌, ಜೀರಿಗೆ ಪುಡಿ- 1 ಚಮಚ, ಎಣ್ಣೆ- ಅರ್ಧ ಕಪ್‌, ಉಪ್ಪು- ರುಚಿಗೆ.

ಮಾಡುವ ವಿಧಾನ
ಗೋಧಿ ಹಿಟ್ಟಿಗೆ ಸ್ವಲ್ಪ ಎಣ್ಣೆ, ಉಪ್ಪು, ಗರಂ ಮಸಾಲೆ ಪುಡಿ, ಜೀರಿಗೆ ಪುಡಿ, ಸಬ್ಬಸಿಗೆ ಸೊಪ್ಪು, ಕೊತ್ತಂಬರಿ ಸೊಪ್ಪು ಹಾಕಿ, ನೀರಿನಲ್ಲಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಎರಡು ಗಂಟೆ ಬಿಟ್ಟು ಕಲಸಿದ ಹಿಟ್ಟಿನಿಂದ ಉಂಡೆ ಮಾಡಿ, ಚಪಾತಿಯ ಆಕಾರದಲ್ಲಿ ಲಟ್ಟಿಸಿ, ಕಾವಲಿ ಮೇಲೆ ಎರಡೂ ಬದಿ ಬೇಯಿಸಿದರೆ ರುಚಿಯಾದ ಪರೋಟಾ ರೆಡಿ.

ಕಟ್ಲೆಟ್‌
ಬೇಕಾಗುವ ಸಾಮಗ್ರಿಗಳು

ಕತ್ತರಿಸಿದ ಸಬ್ಬಸಿಗೆ ಸೊಪ್ಪು- 1 ಕಪ್‌, ಆಲೂಗಡ್ಡೆ- 2, ಈರುಳ್ಳಿ- ಅರ್ಧ ಕಪ್‌, ಕೊತ್ತಂಬರಿ ಸೊಪ್ಪು- 4 ಚಮಚ, ಪುದಿನಾ ಸೊಪ್ಪು- 2 ಚಮಚ, ಖಾರದ ಪುಡಿ-1 ಚಮಚ, ಎಣ್ಣೆ- 1 ಕಪ್‌, ಅರಿಸಿನ- ಅರ್ಧ ಚಮಚ, ಉಪ್ಪು- ರುಚಿಗೆ, ಜೀರಿಗೆ- 1 ಚಮಚ, ಬಟಾಣಿ- ಅರ್ಧ ಕಪ್‌, ಅಕ್ಕಿ ಹಿಟ್ಟು- ಅರ್ಧ ಕಪ್‌.

ಮಾಡುವ ವಿಧಾನ
ಆಲೂಗಡ್ಡೆಯನ್ನು ಬೇಯಿಸಿ, ಸಿಪ್ಪೆ ತೆಗೆದು ತುರಿಯಿರಿ. ಬಾಣಲೆಯಲ್ಲಿ ನಾಲ್ಕು ಚಮಚ ಎಣ್ಣೆ ಕಾಯಿಸಿ, ಕ್ರಮವಾಗಿ ಅರಿಸಿನ, ಜೀರಿಗೆ, ಖಾರದ ಪುಡಿ, ಈರುಳ್ಳಿ, ಬಟಾಣಿ ಹಾಕಿ ಬಾಡಿಸಿ. ಈ ಮಿಶ್ರಣಕ್ಕೆ, ಬೇಯಿಸಿದ ಆಲೂಗಡ್ಡೆ, ಸಬ್ಬಸಿಗೆ, ಕೊತ್ತಂಬರಿ, ಪುದೀನಾ ಸೊಪ್ಪು, ಉಪ್ಪು ಸೇರಿಸಿ ಕಲಸಿ ಒಲೆಯಿಂದ ಕೆಳಗಿರಿಸಿ. ತಣಿದ ಮೇಲೆ, ಅಕ್ಕಿ ಹಿಟ್ಟು ಸೇರಿಸಿ, ವಡೆಯ ಹದಕ್ಕೆ ಕಲಸಿ. ಈ ಮಿಶ್ರಣದಿಂದ ಚಿಕ್ಕ ಉಂಡೆಗಳನ್ನು ಮಾಡಿ, ವಡೆಯಾಕಾರದಲ್ಲಿ ತಟ್ಟಿ.ಎಣ್ಣೆ ಸವರಿದ ಕಾವಲಿಯ ಮೇಲೆ, ಎರಡೂ ಬದಿಗಳನ್ನು ಹೊಂಬಣ್ಣ ಬರುವವರೆಗೆ ಕಾಯಿಸಿ.

ಜಯಶ್ರೀ ಕಾಲ್ಕುಂದ್ರಿ 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.