ಸ್ಯಾಂಡಲ್‌ವುಡ್‌ನ‌ಲ್ಲಿ ತುಳುವರ ಕೆಮರಾ, ಆ್ಯಕ್ಷನ್‌, ಸ್ಟಾರ್ಟ್‌..!


Team Udayavani, Mar 27, 2017, 2:37 AM IST

Arjun-Weds-26-3.jpg

ಕೋಸ್ಟಲ್‌ವುಡ್‌ ಶೈನಿಂಗ್‌ನಲ್ಲಿದೆ. ಇಲ್ಲಿನ ಒಂದೊಂದು ಸಿನೆಮಾಗಳು ಒಂದೊಂದು ರೂಪದಲ್ಲಿ ಸುದ್ದಿಯಾಗುತ್ತಿದೆ. ವಿಶೇಷವೆಂದರೆ ಕೋಸ್ಟಲ್‌ವುಡ್‌ ಸಿನೆಮಾಗಳು ಸ್ಯಾಂಡಲ್‌ವುಡ್‌ನ‌ಲ್ಲೂ ಚರ್ಚೆಗೆ ವೇದಿಕೆ ಒದಗಿಸುತ್ತಿದೆ. ಹೀಗಾಗಿಯೇ ಇಲ್ಲಿನ ಸಿನೆಮಾ ನಿರ್ದೇಶಕರಿಗೆ ಸ್ಯಾಂಡಲ್‌ವುಡ್‌ ಆಫರ್‌ಗಳು ಭರ್ಜರಿಯಾಗಿ ಸಿಗುತ್ತಿವೆ. ಕರಾವಳಿ ಭಾಗದಲ್ಲಿ ವಿಭಿನ್ನ ಟೈಟಲ್‌ಗ‌ಳ ಮೂಲಕ ಸೃಷ್ಟಿಯಾಗುತ್ತಿರುವ ತುಳು ಸಿನೆಮಾಗಳು ತುಳುವೇತರರಲ್ಲಿ ಕುತೂಹಲ ಮೂಡಿಸಿವೆೆ. ಅವರನ್ನು ಇತ್ತ ಆಕರ್ಷಿಸುವಂತೆ ಮಾಡಿದೆ. ಕೆಲವು ನಿರ್ಮಾಪಕರು ತುಳು ಚಿತ್ರ ನಿರ್ಮಾಣಕ್ಕೂ ಮುಂದಾಗಿದ್ದಾರೆ. ಇದರ ಮಧ್ಯೆ ತುಳುವರನ್ನೇ ಆಯ್ಕೆ ಮಾಡಿ ಅವರ ನಿರ್ದೇಶನದಲ್ಲಿಯೇ ಕನ್ನಡ ಸಿನೆಮಾ ಮಾಡಲು ನಿರ್ಮಾಪಕರ ದೊಡ್ಡ ತಂಡ ಸ್ಯಾಂಡಲ್‌ವುಡ್‌ನ‌ಲ್ಲಿ ಸಿದ್ಧವಾಗಿದೆ.

‘ಷಟರ್‌ದುಳಯಿ’ ಚಿತ್ರ ನಿರ್ದೇಶಕ ಶಶಿಕಾಂತ್‌ ಗಟ್ಟಿ ಕನ್ನಡದಲ್ಲಿ ‘ಎಕ್ಕ ರಾಜ ರಾಣಿ’ ಎಂಬ ಸಿನೆಮಾ ನಿರ್ದೇಶಿಸುತ್ತಿದ್ದಾರೆ. ‘ಮಾರ್ನೆಮಿ’ಯ ಮಿಥುನ್‌ ಸುವರ್ಣ ‘ರೂಟ್‌ ನಂ.3’ ಎಂಬ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ‘ಗುಡ್ಡೆದ ಭೂತ’ದ ಮೂಲಕ ಅಚ್ಚರಿ ಮೂಡಿಸಿದ ಸಂದೀಪ್‌ ‘ನಾನು ಮತ್ತು ನನ್ನ ದೇವರು’ ಎಂಬ ಮಕ್ಕಳ ಸಿನೆಮಾದಲ್ಲಿ ತಲ್ಲೀನರಾಗಿದ್ದಾರೆ. ‘ರಂಬಾರೊಟ್ಟಿ’, ‘ತೊಟ್ಟಿಲ್‌’ ಚಿತ್ರದ ಪ್ರಜ್ವಲ್‌ ಕೂಡ ಕನ್ನಡ ಸಿನೆಮಾ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ‘ಎಕ್ಕಸಕ’ ಮೂಲಕ ಸ್ಟಾರ್‌ ಗಿರಿ ಪಡೆದು, ‘ಪಿಲಿಬೈಲ್‌ ಯಮುನಕ್ಕ’ ಮೂಲಕ ಎವರ್‌ಗ್ರೀನ್‌ ಸ್ಟಾರ್‌ ಮಾನ್ಯತೆ ಗಳಿಸಿದ ಸೂರಜ್‌ ಶೆಟ್ಟಿ ಸ್ಯಾಂಡಲ್‌ವುಡ್‌ ಲೋಕದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. 

ಈಗಾಗಲೇ ಕನ್ನಡ ಚಿತ್ರದ ನಿರ್ಮಾಪಕರು ಇವರ ಜತೆಗೆ ಒಂದು ಹಂತದ ಮಾತುಕತೆ ನಡೆಸಿದ್ದು, ಅಂತಿಮ ನಿರ್ಧಾರ ಆಗಿಲ್ಲ. ‘ಚಾಲಿಪೋಲಿಲು’ ಚಿತ್ರದ ನಿರ್ದೇಶಕ ವೀರೇಂದ್ರ ಶೆಟ್ಟಿಯವರೂ ಕನ್ನಡ ಚಿತ್ರದ ಸಿದ್ಧತೆಯಲ್ಲಿದ್ದಾರಂತೆ.! ಈ ಮಧ್ಯೆ ಕನ್ನಡದ ನಿರ್ದೇಶಕರು ಕೂಡ ತುಳುವಿನತ್ತ ಬರಲಾರಂಭಿಸಿದ್ದಾರೆ. ಹಿಂದಿನಿಂದಲೂ ಈ ಪರಿಪಾಠ ಇತ್ತಾದರೂ, ಈಗ ಸ್ವಲ್ಪ ಅಧಿಕವೇ ಇದೆ. ಇನ್ನೇನು ಕೆಲವೇ ದಿನದಲ್ಲಿ ತೆರೆ ಕಾಣುವ ‘ಚಾಪ್ಟರ್‌’ ಚಿತ್ರದ ನಿರ್ದೇಶಕ ಮೋಹನ್‌ ಭಟ್ಕಳ್‌, ‘ಕಟಪಾಡಿ ಕಟ್ಟಪ್ಪೆ’ ನಿರ್ದೇಶಕ ಚೇತನ್‌ ಕುಮಾರ್‌, ‘ಸುಗ್ಗಿ’ ಚಿತ್ರದ ಎಸ್‌.ರಾಜು ಕೋಸ್ಟಲ್‌ವುಡ್‌ಗೆ ಬಂದವರು. 

ಕಲೆ ಒಂದು ಧರ್ಮ. ಧರ್ಮದ ಮೂಲಕ ಕಲೆ ಎಂಬ ವಿಶಿಷ್ಟ ಗ್ರಹಿಕೆಯ ಮಂದಿಯ ನಡುವೆ ನಡೆಯುವ ಮನೋಜ್ಞ ಕಥಾನಕ ‘ಮದಿಪು’ ಚಿತ್ರ ಈಗಾಗಲೇ ಸ್ಯಾಂಡಲ್‌ವುಡ್‌ನ‌ಲ್ಲಿ ಗಮನಸೆಳೆದಿದೆ. ಶೀಘ್ರದಲ್ಲಿಯೇ ಬಿಡುಗಡೆಯಾಗುವ ಈ ಚಿತ್ರ ಈಗಾಗಲೇ ಸ್ಯಾಂಡಲ್‌ವುಡ್‌ ಶ್ರೇಷ್ಠ ಕಲಾವಿದರ ಮೂಲಕ ಮೆಚ್ಚುಗೆ ಪಡೆದು, ಕನ್ನಡದಲ್ಲೂ ಅವತರಿಸುವ ಸೂಚನೆ ದೊರಕಿದೆ. ಖ್ಯಾತ ನಿರ್ದೇಶಕ ಚೇತನ್‌ ಮುಂಡಾಡಿ ಈ ಮೂಲಕ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಹೆಸರು ಪಡೆದಿದ್ದಾರೆ. ‘ಚಾವಡಿ’ ಎನ್ನುವ ಸಿನೆಮಾ ಇವರ ಕೈಯಲ್ಲಿದೆ. 

ಮಂಗಳೂರು ಬಂದರ್‌ನಲ್ಲಿ ‘ನಿಶ್ಶಬ್ದ’
ಡೇಂಜರ್‌ ಝೋನ್‌ ಚಿತ್ರದ ಮೂಲಕ ಹಾರರ್‌ ಕಥೆ ಕಟ್ಟಿಕೊಟ್ಟ ದೇವರಾಜ್‌ ಕುಮಾರ್‌ ಈಗ ಮಂಗಳೂರಿನ ರೂಪ್‌ ಶೆಟ್ಟಿ ಮೂಲಕ ಇನ್ನೊಂದು ಕನ್ನಡ ಚಿತ್ರದ ಬ್ಯುಸಿಯಲ್ಲಿದ್ದಾರೆ. ‘ನಿಶ್ಶಬ್ದ-2’ ಚಿತ್ರ ಫಟಾಫಟ್‌ ಶೂಟಿಂಗ್‌ ಪೂರ್ಣಗೊಳಿಸುತ್ತಿದೆ. ಮಂಗಳೂರು, ಬೆಂಗಳೂರು ಸಹಿತ ಬೇರೆ ಬೇರೆ ಭಾಗದಲ್ಲಿ ಚಿತ್ರದ ಶೂಟಿಂಗ್‌ ಲೋಕೇಶನ್‌ಗಳು ಇವೆ. ಅದರಲ್ಲೂ ವಿಲನ್‌ಗಳ ಜತೆ ಕಾದಾಡುವ ಒಂದು ಸೀನ್‌ ಮಂಗಳೂರಿನ ಜನನಿಬಿಡ ಬಂದರ್‌ನಲ್ಲಿ ಇತ್ತೀಚೆಗೆ ನಡೆದಿದೆ.

‘ಪತ್ತನಾಜೆಡ್‌ ಪತ್ತ್ ಪೋಂಡು’
‘ಪತ್ತನಾಜೆಡ್‌ ಪತ್ತ್ ಪೋಂಡಲ, ಬಿತ್ತ್ ಕೊಡಿಪುಂಡು ಎಂಚನಾ.. ಮಿತ್ತ ಲೋಕೋದ ಸೊತ್ತು ಭೂಮಿಡ್‌, ಗತ್ತ್ಡೇ ನಿಲೆ ಆಪುಂಡು…’ ಈ ಪದಗಳಲ್ಲಿ ಹಿಡಿದಿಡುವ ಈ ಗಟ್ಟಿ ಮುಟ್ಟಾದ ಹಾಡು ತುಳು ಚಿತ್ರ ಜಗತ್ತಿನಲ್ಲಿ ಹೊಸ ಸಾಧ್ಯತೆಗಳನ್ನು ಬರೆದಂತಿದೆ. ಬಿಡುಗಡೆಗೆ ಸಿದ್ಧವಾಗಿರುವ ‘ಪತ್ತನಾಜೆ’ ತುಳು ಚಿತ್ರದ ಟೈಟಲ್‌ ಸಾಂಗ್‌ ಇದು. ಬರೆದವರು ಕವಿ- ಸಾಹಿತಿ- ಪ್ರಾಧ್ಯಾಪಕ ಭಾಸ್ಕರ್‌ ರೈ ಕುಕ್ಕುವಳ್ಳಿ. ತೋನ್ಸೆ ವಿಜಯ್‌ ಕುಮಾರ್‌ ಶೆಟ್ಟಿಯವರ ಸಾರಥ್ಯದ ಈ ಚಿತ್ರದ ಹಾಡನ್ನು ಅಜಯ್‌ ವಾರಿಯರ್‌ ಹಾಡಿದ್ದಾರೆ. ವಿ. ಮನೋಹರ್‌ ಸಂಗೀತ, ಕೋಕಿಲ ವಿಜಯ್‌ ಅವರ ಸಂಯೋಜನೆ ಇದೆ. ಕುಕ್ಕುವಳ್ಳಿ ಬರೆದ ‘ಭಾವರಂಗಿತ ಪದೊತ ಪುತೊ§ಳಿ’ ಹಾಡನ್ನು ಪಟ್ಲ ಸತೀಶ್‌ ಶೆಟ್ಟಿ ಹಾಡಿದ್ದಾರೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.