ಕೆಮರಾಮ್ಯಾನ್‌ ಆಗಿದ್ದ ಹುಡುಗ ಈಗ ಹೀರೋ!


Team Udayavani, Aug 9, 2018, 2:29 PM IST

9-agust-14.jpg

ನಿಜಕ್ಕೂ ಇದೊಂದು ವಿಶೇಷ ಹಾಗೂ ಆಸಕ್ತಿಯ ವಿಚಾರ. ವೃತ್ತಿಯಲ್ಲಿ ಕೆಮರಾಮ್ಯಾನ್‌ ಆಗಿದ್ದ ಒಬ್ಬ ಹುಡುಗ ಇಂದು ತುಳು ಚಲನಚಿತ್ರ ನಟನಾಗಿ ಬೆಳೆದು ನಿಂತಿದ್ದಾರೆ.ಕೆಮರಾದ ಹಿಂದೆ ನಿಂತು, ಮುಂದೆ ನಡೆಯುವ ಘಟನೆಯನ್ನು ಚಿತ್ರೀಕರಿಸುತ್ತಿದ್ದ ಅವರು ಈಗ ಕೆಮರಾದ ಮುಂಭಾಗದಲ್ಲಿ ನಿಂತು ಸಖತ್‌ ಫೇಮಸ್‌ ಆಗಿದ್ದಾರೆ. ಅಂದಹಾಗೆ ಇದಿಷ್ಟು ಮೋಹನ್‌ ಶೇಣಿ ಎಂಬ ನವ ತರುಣನ ವೃತ್ತಾಂತ.

ಭೋಜ ಹಾಗೂ ಭವಾನಿ ದಂಪತಿಯ ಪುತ್ರ ಮೋಹನ್‌ ಮಂಗಳೂರಿನ ‘ದಾಸ್‌- ಪ್ರಕಾಶ್‌’ ಎಂಬ ಸ್ಥಳೀಯ ಸುದ್ದಿವಾಹಿನಿಯಲ್ಲಿ ಕೆಮರಾಮ್ಯಾನ್‌ ಆಗಿ ಸುಮಾರು 10- 12 ವರ್ಷದ ಹಿಂದೆ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಿನೆಮಾ ಸಹಿತ ಎಲ್ಲ ರೀತಿಯ ಪತ್ರಿಕಾಗೋಷ್ಠಿಗಳಿಗೆ ಕೆಮರಾಮ್ಯಾನ್‌ ಆಗಿ ಬರುತ್ತಿದ್ದ ಮೋಹನ್‌ ಈಗ ಪತ್ರಿಕಾಗೋಷ್ಠಿಯಲ್ಲಿ ಕುಳಿತು ತನ್ನ ಅಭಿನಯದ ಸಿನೆಮಾದ ಬಗ್ಗೆ ಮಾಧ್ಯಮದವರ ಮುಂದೆ ಮಾತನಾಡುತ್ತಿದ್ದಾರೆ. ಮೊನ್ನೆ ಮೊನ್ನೆ ತೆರೆಗೆ ಬಂದು ರಾಷ್ಟ್ರಪ್ರಶಸ್ತಿ ಗಿಟ್ಟಿಸಿಕೊಂಡ ‘ಪಡ್ಡಾಯಿ’ ಸಿನೆಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡ ಮೋಹನ್‌ ಈಗ ‘ಪತ್ತೀಸ್‌ ಗ್ಯಾಂಗ್‌’ ತುಳು ಸಿನೆಮಾದಲ್ಲಿಯೂ ಲೀಡ್‌ ರೋಲ್‌ನಲ್ಲಿದ್ದಾರೆ.

ಇನ್ನೂ ಒಂದೆರಡು ಸಿನೆಮಾ ಕೈಯಲ್ಲಿ ಇಟ್ಟಿರುವ ಮೋಹನ್‌ ಸದ್ಯ ಕೋಸ್ಟಲ್‌ವುಡ್‌ನ‌ಲ್ಲಿ ಭರವಸೆಯ ಬೆಳಕು ಹರಿಸಿದ್ದಾರೆ. ಬೀದಿ ನಾಟಕ ಮಾಡುತ್ತಿದ್ದ ಮೋಹನ್‌ ಅವರಿಗೆ ಮೊದಲಿಗೆ ‘ನಿನಾಸಂ’ ರಂಗಶಾಲೆಯ ಪರಿಚಯವಾಯಿತು. ಅಲ್ಲಿ ಕಲಿಯಬೇಕು ಎಂಬ ಹಂಬಲ ಬೆಳೆಯಿತು. ಅಲ್ಲಿಂದ ರಂಗಭೂಮಿಯ ಒಡನಾಟ ಬೆಳೆಸಿಕೊಂಡು ಟ್ರೈನರ್‌ ಆಗಿ, ಫಿಲ್ಮ್ ಮೇಕರ್‌ ಆಗಿ ಮುಂದುವರಿದರು. ನೀನಾಸಂನಲ್ಲಿ ಇರುವಾಗಲೇ ಅಭಯಸಿಂಹರ ಪರಿಚಯವಾಗಿ ‘ಪಡ್ಡಾಯಿ’ಯಲ್ಲಿ ಅವಕಾಶ ದೊರೆಯಿತು. ನೀನಾಸಂನಲ್ಲಿ ಕಲಿತ ಎಲ್ಲ ರಂಗ ಶಿಕ್ಷಣವೂ ಈ ಸಿನೆಮಾದಲ್ಲಿ ಫಲ ನೀಡಿತು. ರಾಷ್ಟ್ರೀಯ ಪ್ರಶಸ್ತಿ ಪಡೆಯಿತು. ಈಗ ‘ಪತ್ತೀಸ್‌ ಗ್ಯಾಂಗ್‌’ನಲ್ಲೂ ಮೋಹನ್‌ ಸೌಂಡ್‌ ಮಾಡಲು ಹೊರಟಿದ್ದಾರೆ. ಅಂತೂ ಕೆಮರಾಮ್ಯಾನ್‌ ಆಗಿದ್ದ ಹುಡುಗ ಈಗ ಸಿನೆಮಾದಲ್ಲಿ ಇಷ್ಟರ ಮಟ್ಟಿಗೆ ಸಾಧನೆ ತೋರಿರುವುದು ನಿಜಕ್ಕೂ ವಿಶೇಷ.

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.