ಅಂಬೋಲಿ ಅಂಬರಧಾರೆ 


Team Udayavani, Aug 9, 2018, 3:34 PM IST

9-agust-19.jpg

ಈ ಬಾರಿಯ ನಮ್ಮ ವೀಕೆಂಡ್‌ ವಿತ್‌ ಗೈಸ್‌ನಲ್ಲಿ ನಾವು ನೋಡಹೊರಟಿದ್ದು ಅಂಬೋಲಿ ಫಾಲ್ಸ್  ಅನ್ನು. ನನ್ನ ರೂಮ್‌ ಮೇಟ್‌ಗಳನ್ನು ಹುರಿದುಂಬಿಸಿ, ಜಲಪಾತ ನೋಡಲು ಹೊರಟಿದ್ದೆ. ಈ ಫಾಲ್ಸ್‌ನ ಸೌಂದರ್ಯ ವರ್ಣನೆ ಬಗ್ಗೆ ಕೇಳಿ ಕೇಳಿ ನನಗೆ ಹುಚ್ಚೇ ಹಿಡಿದಂತಾಗಿತ್ತು. ನನಗೂ ಅದನ್ನು ನೋಡುವ ಆಸೆ ಇಮ್ಮಡಿಯಾಗಿ, ಗೆಳೆಯರನ್ನೂ ಜತೆಗೂಡಿಸಿಕೊಂಡೆ. ಮುಂಜಾನೆಯ ಚುಮು ಚುಮು ಚಳಿಯನ್ನು ಸೀಳಿ ನಮ್ಮ ಎರಡು ಎನ್‌ ಫೀಲ್ಡ್‌ ಗಳು ಡಬ ಡಬ ಎಂದು ಸದ್ದುಮಾಡುತ್ತಾ, ಇಬ್ಬನಿಯಲ್ಲಿ ಮಿಂದು ಹೊರಟವು.

ಹಚ್ಚ ಹಸುರಿನ ಮಡಿಲು…
ಗಡಿ ದಾಟಿ ಸ್ವಲ್ಪ ದಾರಿ ಕ್ರಮಿಸಿದೆವು. ಪ್ರಕೃತಿಯ ಆ ಸೌಂದರ್ಯ ಸವಿಯುವುದೇ ಒಂದು ರೀತಿಯ ಆನಂದ. ಹಚ್ಚ ಹಸುರಿನ ಕಂಗೊಳಿಸುವ ಆ ರಮಣೀಯ ದೃಶ್ಯ ಕಣ್ಮನಗಳಿಗೆ ಹಿತ. ಪಶ್ಚಿಮ ಘಟ್ಟಗಳ ಸಾಲಿನಂತೆ ಭಾಸವಾಗುವ ಆ ನಿಸರ್ಗ ಸೌಂದರ್ಯ ನೋಡುತ್ತಿದ್ದರೆ, ಎಲ್ಲೋ ಕಳೆದುಹೋದಂಥ ಅನುಭವ. ನಳ ನಳಿಸುವ ಆ ಬೆಟ್ಟದ ನಿಸರ್ಗದ ಮಡಿಲಲ್ಲಿ ಸಾಗುವಾಗ ಹಕ್ಕಿಗಳ ಇಂಪಾದ ಸ್ವರ ಎದೆಗೂಡಿನಲ್ಲಿ ಪುಟ್ಟ ನಾದ ಜಲಪಾತವನ್ನೇ ಸೃಷ್ಟಿಸಿತ್ತು. ಹಕ್ಕಿಗಳಂತೆ ನಾವೂ ಹಾರಾಡಬೇಕೆನಿಸಿತು.

ದೊಡ್ಡ ಬೆಟ್ಟ ಗುಡ್ಡಗಳ ಭವ್ಯವಾದ ಹಸುರು, ಮಳೆಯಲ್ಲಿ ಇನ್ನೂ ಆಕರ್ಷಕವಾಗಿ ತೋರುತ್ತಿತ್ತು. ಸುಂಯ್ಯನೆ ಬೀಸುವ ತಣ್ಣನೆ ಗಾಳಿ, ಸಣ್ಣನೆ ಮಳೆ ಮೈಯಲ್ಲಿ ನಡುಕ ಹುಟ್ಟಿಸಿತು. ಚಲಿಸುವ ದಾರಿ ಮಧ್ಯದಲ್ಲಿ ಒಂದು ಚಿಕ್ಕ ಟೀ- ಕಾಫೀ ಸ್ಟಾಲ್‌ ನಮ್ಮನ್ನು ಸೆಳೆಯಿತು. ಅಲ್ಲಿಯ ತನಕ ಓಡುತ್ತಿದ್ದ ಗಾಡಿ ಕೂಲ್‌ ಆಯಿತು. ನಮ್ಮ ದೇಹ ಆ ಕಾಫಿಯಿಂದ ಬೆಚ್ಚಗಾಯಿತು. ಕಾಫಿಯ ಸ್ವಾದ ಅನುಭವಿಸುತ್ತಾ, ಮಳೆಯಲಿ ಜತೆಯಲಿ ಎನ್ನುತ್ತಾ ನಮ್ಮ ಪಯಣ ಫಾಲ್ಸ್‌ನತ್ತ ಸಾಗಿತು.

ಮಂಜಿನ ಪರದೆ…
ಅಂಬೋಲಿಯ ಆ ಹಾದಿ ಸಂಪೂರ್ಣವಾಗಿ ದಟ್ಟ ಮಂಜಿನಿಂದ ಆವೃತವಾಗಿತ್ತು. ಆ ಮಂಜಿನ ಪರದೆಯೊಳಗೆ ನುಸಳಿಕೊಂಡು ಸಾಗುವುದೇ ಒಂದು ಸಾಹಸ. ಬೈಕಿನ ಹೆಡ್‌ಲೈ ಟ್‌ ಮುಂದೆ ದಾರಿ ತೋರಲು ಹರಸಾಹಸಪಡುತ್ತಿತ್ತು. ಮುಂದೆ ಬರುತ್ತಿದ್ದ ಗಾಡಿಗಳು ಕಣ್ಣಿಗೆ ಕಾಣಿಸುತ್ತಲೇ ಇರಲಿಲ್ಲ. ನಿಧಾನವಾಗಿ ಚಲಿಸುವುದು ಅನಿವಾರ್ಯವೇ ಆಯಿತು. ರೈಡಿಂಗ್‌ ಅಂತ ಹುಚ್ಚು ಸಾಹಸ ಮಾಡಲು ಹೋದರೆ ಅಷ್ಟೇ ಗತಿ.

ಅದು ಅಮೃತಧಾರೆ…
ಸ್ವಲ್ಪ ದೂರದಿಂದಲೇ ನೀರಿನ ಜುಳು ಜುಳು ನಾದ ನಮ್ಮ ಕಿವಿಗೆ ಅಂಬೋಲಿಗೆ ಆಹ್ವಾನ ನೀಡಿತು. ಬಹುದಿನಗಳ ಮಹದಾಸೆ ಈಡೇರುವ ಕ್ಷಣ ಬಂದೇಬಿಟ್ಟಿತ್ತು. ಈ ಎರಡು ಕಣ್ಣಿನಲ್ಲಿ ಆ ಅಗಾಧ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದು ಕಷ್ಟದ ಮಾತೇ ಆಯಿತು. ವರುಣದೇವ ನಿಜಕ್ಕೂ ಜಲವರ್ಣದಲ್ಲಿ ಚಿತ್ತಾರ ಬಿಡಿಸಿದ್ದ. ಮೈಮನದಲ್ಲಿ ರೋಮಾಂಚನದ ಪುಳಕ. ಮಿಟುಕಿಸುವ ಕ್ರಿಯೆಯನ್ನೇ ಕಣ್ರೆಪ್ಪೆ ಮರೆತುಬಿಟ್ಟಿತು. ಮನಸ್ಸಂತೂ ಸಂತನಂತೆ ಧ್ಯಾನಸ್ಥ. ಧುಮ್ಮಿಕ್ಕುವ ನೀರು ಕೆಳಗೆ ಮೆಟ್ಟಿಲುಗಳ ಮೂಲಕ ರಸ್ತೆಯತ್ತ ಹರಿಯುತ್ತಿತ್ತು. ಜಲಪಾತವನ್ನು ಕಣ್ತುಂಬಾ ಸವಿಯಲು, ಮೆಟ್ಟಿಲುಗಳಿಗೆ ಗ್ಯಾಲರಿ ಮಾಡಿದ್ದಾರೆ. ಅಲ್ಲಿ ನಿಂತು ಸ್ನಾನ ಮಾಡುತ್ತಾ, ಹಿಗ್ಗಿದೆವು.

ಅದು ಸಾವಿರಾರು ಸೆಲ್ಫಿಗಳ ಜನ್ಮಸ್ಥಳ!
ಅಂಬೋಲಿ ಜಲಪಾತವು ಮಹಾರಾಷ್ಟ್ರ ಹಾಗೂ ಕರ್ನಾಟಕದ ಮಧ್ಯೆ ಇರುವ ಕಾರಣ, ಎರಡೂ ರಾಜ್ಯಗಳ ಪ್ರವಾಸಿಗರು, ಪ್ರಕೃತಿ ಪ್ರೇಮಿಗಳು ಅಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಈ ಬಾರಿ ಮಳೆಯೂ ಹೆಚ್ಚು ಬಂದಿದ್ದರಿಂದ, ಅಂಬೋಲಿ ಮೈತುಂಬಿ, ದಿನದಲ್ಲಿ ಸಾವಿರಾರು ಫೋಟೋಗಳಿಗೆ ಪೋಸು ಕೊಡುತ್ತಿತ್ತು. ಸೂರ್ಯಾಸ್ತದ ವರೆಗೂ ಎಂಜಾಯ್‌ ಮಾಡುತ್ತಾ, ಕತ್ತಲು ಆವರಿಸುತ್ತಾ ಬಂದಹಾಗೆ, ಸೆಲ್ಫಿಗಳನ್ನು ತೆಗೆಯುತ್ತಾ, ವಿದಾಯ ಹೇಳಿದೆವು. ಮರಳಿ, ಅದೇ ಮಳೆಯನ್ನೇ ಸೀಳಿಕೊಂಡು ನಮ್ಮ ಗೂಡನ್ನು ತಲುಪಿದೆವು.

ರೂಟ್‌ ಮ್ಯಾಪ್‌
· ಮಂಗಳೂರಿನಿಂದ 460 ಕಿ.ಮೀ. ದೂರದಲ್ಲಿದೆ.

· 30 ಕಿ.ಮೀ. ದೂರದಲ್ಲಿದೆ ಸಾವಂತ್‌ ವಾಡಿ ರೈಲು ನಿಲ್ದಾಣ.

· ಖಾಸಗಿ ವಾಹನ ಮಾಡಿಕೊಂಡು ಹೋದರೆ ಉತ್ತ ಮ.

· ಹತ್ತಿರದಲ್ಲಿದೆ ಸನ್‌ ಸೆಟ್‌ ಪಾಯಿಂಟ್‌, ಮಾಧವ ಗಡ್‌ ಪೋರ್ಟ್‌.

· ಊಟ, ವಸತಿಗೆ ಸಮಸ್ಯೆಯಿಲ್ಲ.

 ಲೋಕನಗೌಡ ಎಸ್‌.ಡಿ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.