ಅಣ್ಣಪ್ಪ ನೊಟ್ಟುಗು ಏರಾ ಉಲ್ಲೆರ್‌ಗೆ…!


Team Udayavani, Sep 6, 2018, 12:21 PM IST

6-september-10.jpg

ತುಳು ಸಿನೆಮಾ ಪ್ರೇಮಿಗಳಿಗೆ ಮಾ. 23 ನೆನಪಿರಬಹುದು. ತುಳು ಚಿತ್ರರಂಗದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ‘ಅಪ್ಪೆ ಟೀಚರ್‌’ ಮತ್ತು ‘ತೊಟ್ಟಿಲು’ ಸಿನೆಮಾಗಳು ಒಂದೇ ದಿನ ಬಿಡುಗಡೆಯಾಗುವ ಮೂಲಕ ಸಾಕಷ್ಟು ಚರ್ಚೆಗೆ ಕಾರಣವಾದ ದಿನವದು.

ಅಂದು ಯಾರಿಗೆ ಲಾಭವಾಯಿತು? ಯಾರಿಗೆ ನಷ್ಟವಾಯಿತು? ಎಂಬ ಲೆಕ್ಕಾಚಾರಕ್ಕಿಂತಲೂ ತುಳು ಪ್ರೇಕ್ಷಕ ವರ್ಗ ಗೊಂದಲಕ್ಕೆ ಒಳಗಾಗಿ ನಮ್ಮಲ್ಲೂ ಹೀಗೆ ಯಾಕಾಯಿತು? ಎಂದು ಪ್ರಶ್ನಿಸುವ ಹಾಗಾಯಿತು. ಜತೆಗೆ, ಒಂದೇ ದಿನ ಎರಡು ಸಿನೆಮಾ ರಿಲೀಸ್‌ ಆಗುವ ಸನ್ನಿವೇಶಗಳು ತುಳುವಿನಲ್ಲಿ ಮುಂದೆಂದೂ ನಡೆಯಕೂಡದು ಎಂದು ತುಳು ಚಲನಚಿತ್ರ ಲೋಕವೇ ಅಂದು ಅಭಿಪ್ರಾಯಪಟ್ಟಿತ್ತು. ಆದರೆ, ಕೋಸ್ಟಲ್‌ವುಡ್‌ನ‌ಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೆ ಈಗ ಸಾಬೀತಾಗುತ್ತಿದೆ. ಯಾಕೆಂದರೆ ಮತ್ತೆ ಈಗ ಎರಡು ಸಿನೆಮಾ ಒಟ್ಟೊಟ್ಟಿಗೆ ರಿಲೀಸ್‌ ಆಗಲಿದೆ.

ಬಹುನಿರೀಕ್ಷಿತ ದೇವದಾಸ್‌ ಕಾಪಿಕಾಡ್‌ ಅವರ ‘ಏರಾ ಉಲ್ಲೆರ್‌ಗೆ’ ಹಾಗೂ ಕುತೂಹಲ ಮೂಡಿಸಿದ ಮಯೂರ್‌ ಶೆಟ್ಟಿ ನಿರ್ದೇಶನದ ‘ಮೈ ನೇಮ್‌ ಈಸ್‌ ಅಣ್ಣಪ್ಪ’ ಸಿನೆಮಾವು ಹೆಚ್ಚಾ ಕಡಿಮೆ ಒಂದೇ ದಿನ ತೆರೆಕಾಣುವ ನಿರೀಕ್ಷೆ ಇದೆ. ಎರಡೂ ಚಿತ್ರತಂಡ ಒಂದೇ ದಿನ ಸಿನೆಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ತುಳು ಚಲನಚಿತ್ರ ನಿರ್ಮಾಪಕರ ಸಂಘ ಹಾಗೂ ಹೊಸದಾಗಿ ಆರಂಭಿಸಲಾದ ಸ್ಕ್ರೀನಿಂಗ್‌ ಕಮಿಟಿಯು ಈ ‘ಡೇಟ್‌ ಪ್ರಾಬ್ಲೆಮ್‌’ ಅನ್ನು ಸರಿಪಡಿಸುವ ನೆಲೆಯಲ್ಲಿ ಮಾತುಕತೆಗೆ ಮುಂದಾಗಿದೆ.

ಅಂದಹಾಗೆ, ಕಳೆದ ಎರಡು ವರ್ಷಗಳ ಹಿಂದೆ ತುಳು ಚಲನಚಿತ್ರ ನಿರ್ಮಾಪಕರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಈಗಾಗಲೇ ಅನೇಕ ಮಂದಿ ನಿರ್ದೇಶಕರು ಸದಸ್ಯರಾಗಿದ್ದಾರೆ. ಸಂಘದ ಅನೇಕ ಮಂದಿ ಹಿರಿಯರು ಈಗಾಗಲೇ ಕೆಲ ನಿಯಮಗಳನ್ನು ರೂಪಿಸಿದ್ದಾರೆ. ಇದರ ಪ್ರಕಾರವು ತುಳು ಭಾಷೆಯಲ್ಲಿ ಮೂರು ವಾರಕ್ಕೊಂದು ಸಿನೆಮಾ ಬಿಡುಗಡೆಯಾಗಲಿ ಎಂಬ ನಿಯಮ ಮಾಡಲಾಗಿತ್ತು. ಯಾವ ಚಲನಚಿತ್ರ ಮೊದಲು ಸೆನ್ಸಾರ್‌ ಆಗಿದೆಯೋ ಆ ಚಿತ್ರ ಬಿಡುಗಡೆಗೆ ಪ್ರಾಶಸ್ತ್ಯ ನೀಡಬೇಕು ಎಂಬ ನಿಯಮ ಮಾಡಿತ್ತು. ಪ್ರಸ್ತುತ ತುಳುವಿನಲ್ಲಿ ಹಲವು ಸಿನೆಮಾ ತಯಾರಾಗುತ್ತಿರುವ ಕಾರಣದಿಂದ ಮೂರು ವಾರದ ಗಡುವು ಸಮಸ್ಯೆ ಆಗಲಿದೆ ಎಂದು ತಿಳಿದುಕೊಂಡ ಸಂಘ ಎರಡು ವಾರಕ್ಕೊಮ್ಮೆ ಎಂದು ತನ್ನ ನಿಯಮವನ್ನು ಇಳಿಸಿತ್ತು. ಜತೆಗೆ ಖ್ಯಾತ ನಿರ್ಮಾಪಕರಾದ ದೇವದಾಸ್‌ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ಸ್ಕ್ರೀನಿಂಗ್‌ ಕಮಿಟಿ ಮಾಡಿ ಅಲ್ಲಿ ಸಿನೆಮಾ ಬಿಡುಗಡೆಯ ದಿನಾಂಕದ ಬಗ್ಗೆ ಫಿಕ್ಸ್‌ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಏರಾ ಉಲ್ಲೆರ್‌ಗೆ ಹಾಗೂ ಮೈ ನೇಮ್‌ ಈಸ್‌ ಅಣ್ಣಪ್ಪ ಸಿನೆಮಾ ಬಿಡುಗಡೆಯ ದಿನಾಂಕ ಚರ್ಚೆಗೆ ಬಂದಿದೆ. ಮೊನ್ನೆ ರವಿವಾರ ಈ ಕುರಿತು ಎರಡೂ ಚಿತ್ರತಂಡದವರನ್ನು ಕರೆದು ಸ್ಕ್ರೀನಿಂಗ್‌ ಕಮಿಟಿಯಲ್ಲಿ ಸಭೆ ನಡೆಸಿ ಮಾತುಕತೆ ನಡೆಸಲಾಗಿತ್ತು.

ಈ ಬಗ್ಗೆ ‘ಕುಡ್ಲ ಟಾಕೀಸ್‌’ ಜತೆಗೆ ಮಾತನಾಡಿದ ಕಮಿಟಿ ಅಧ್ಯಕ್ಷ ದೇವದಾಸ್‌ ಪಾಂಡೇಶ್ವರ, ‘ಮೊದಲು ಸೆನ್ಸಾರ್‌ ಯಾರಿಗೆ ಆಗಿದೆ ಎಂಬುದನ್ನಷ್ಟೇ ಮುಖ್ಯ ನೆಲೆಯಲ್ಲಿ ಪರಿಗಣಿಸಿ ಸಿನೆಮಾ ಬಿಡುಗಡೆಗೆ ಕಮಿಟಿಯು ನಿರ್ಧಾರ ತೆಗೆದುಕೊಳ್ಳಲಿದೆ. ಈ ಸಂಬಂಧ ಮೈ ನೇಮ್‌ ಈಸ್‌ ಅಣ್ಣಪ್ಪ ಹಾಗೂ ಏರಾ ಉಲ್ಲೆರ್‌ಗೆ ಸಿನೆಮಾ ತಂಡವನ್ನು ಕರೆದು ಸೌಹಾರ್ದಯುತವಾಗಿ ಮಾತುಕತೆ ನಡೆಸಲಾಗಿದೆ. ತುಳು ಚಲನಚಿತ್ರ ಕ್ಷೇತ್ರಕ್ಕೆ ಯಾವುದೇ ಸಮಸ್ಯೆ ಆಗದಂತೆ ಹಾಗೂ ಸೆನ್ಸಾರ್‌ ಪ್ರಕಾರವಾಗಿ ಸಿನೆಮಾ ಬಿಡುಗಡೆಗೆ ಅವಕಾಶ ಕಲ್ಪಿಸುವಂತೆ ಮಾತುಕತೆ ನಡೆಸಲಾಗಿದೆ. ನಿಯಮದ ಪ್ರಕಾರ ಏರಾ ಉಲ್ಲೆರ್‌ಗೆ ಸಿನೆಮಾಕ್ಕೆ ಮೊದಲು ಸೆನ್ಸಾರ್‌ ಆಗಿದೆ. ಹೀಗಾಗಿ ಎರಡೂ ಚಿತ್ರತಂಡದ ಜತೆಗೆ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದಿದ್ದಾರೆ.

ಮೈ ನೇಮ್‌ ಈಸ್‌ ಅಣ್ಣಪ್ಪ ಚಿತ್ರದ ನಿರ್ಮಾಪಕರಾದ ರೋಹನ್‌ ಶೆಟ್ಟಿ ಮಾತನಾಡಿ, ‘ಲಕುಮಿ ಬ್ಯಾನರ್‌ನಡಿಯಲ್ಲಿ ಸಿದ್ಧವಾಗಿರುವ ಮೈ ನೇಮ್‌ ಈಸ್‌ ಅಣ್ಣಪ್ಪೆ ಸಿನೆಮಾವನ್ನು ರಿಲೀಸ್‌ ಮಾಡುವ ದಿನದ ಬಗ್ಗೆ ಈ ಹಿಂದೆಯೇ ನಿರ್ಧರಿಸಲಾಗಿತ್ತು. ಅದರಂತೆ ಸಿದ್ಧತೆ ನಡೆಸಲಾಗಿದೆ. ಮುಂದೆ ಚಿತ್ರತಂಡದ ಜತೆಗೆ ಮಾತನಾಡಿ, ಶೀಘ್ರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಏರಾ ಉಲ್ಲೆರ್‌ಗೆ ಸಿನೆಮಾ ನಿರ್ದೇಶಕ ದೇವದಾಸ್‌ ಕಾಪಿಕಾಡ್‌, ನಮ್ಮ ಸಿನೆಮಾ ಬಿಡುಗಡೆಯ ಬಗ್ಗೆ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ವಿವರ ನೀಡಿ ದಿನಾಂಕ ಫಿಕ್ಸ್‌ ಮಾಡಲಾಗಿದೆ. ಸೆನ್ಸಾರ್‌ನ ಎಲ್ಲ ಪ್ರಕ್ರಿಯೆಯನ್ನು ಮೊದಲು ನಮ್ಮ ಸಿನೆಮಾವೇ ಮಾಡಿದೆ. ಹೀಗಾಗಿ ನಮಗೆ ಅವಕಾಶ ದೊರೆಯುವ ವಿಶ್ವಾಸವಿದೆ ಎನ್ನುತ್ತಾರೆ.

ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ ಮಾತನಾಡಿ, ಎರಡೂ ಸಿನೆಮಾದ ಬಿಡುಗಡೆ ದಿನಾಂಕದ ಬಗ್ಗೆ ಸ್ವಲ್ಪ ಗೊಂದಲ ಆಗಿದೆ. ಆದರೆ, ಇದನ್ನು ಸಂಘ ಹಾಗೂ ಸ್ಕ್ರೀನಿಂಗ್‌ ಕಮಿಟಿ ನೇತೃತ್ವದಲ್ಲಿ ಸೌಹಾರ್ದಯುತವಾಗಿ ಬಗೆಹರಿಸಲಿದ್ದೇವೆ. ಕಿಶೋರ್‌ ಡಿ. ಶೆಟ್ಟಿ ಅವರು ತುಳು ಚಲನಚಿತ್ರ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದು, ದೇವದಾಸ್‌ ಕಾಪಿಕಾಡ್‌ ಅವರು ಕೂಡ ತುಳು ಚಿತ್ರರಂಗಕ್ಕೆ ಮಹತ್ತರವಾದ ಸೇವೆ ನೀಡಿದ್ದಾರೆ. ಎರಡೂ ಚಿತ್ರತಂಡಗಳ ಮೂಲಕವಾಗಿ ತುಳು ಚಿತ್ರರಂಗ ಇನ್ನಷ್ಟು ಸಾಧನೆಯನ್ನ ಕಾಣುವ ನಿರೀಕ್ಷೆಯಿದೆ. ಹೀಗಾಗಿ ಸೌಹಾದರ್ತೆಯುತವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದಿದ್ದಾರೆ.

 ದಿನೇಶ್‌ ಇರಾ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.