ಕನಸಲೂ ಕಾಡುವ ಕವಲೇ ದುರ್ಗ


Team Udayavani, Nov 22, 2018, 1:19 PM IST

22-november-13.gif

ಅದು ಬೇಸಗೆ ಸಮಯ. ದಿನನಿತ್ಯದ ಕೆಲಸದ ಜಂಜಾಟಕ್ಕೆ ವಿಶ್ರಾಂತಿ ನೀಡಿ ಪ್ರವಾಸ ಕೈಗೊಳ್ಳುವ ಬಗ್ಗೆ ಯೋಚಿಸತೊಡಗಿದೆವು. ಹಲವಾರು ಸ್ಥಳಗಳ ಬಗ್ಗೆ ಚರ್ಚಿಸಿ ಕೊನೆಗೆ ನಾವು ಆಯ್ಕೆ ಮಾಡಿಕೊಂಡ ಸ್ಥಳ ಶಿವಮೊಗ್ಗದಲ್ಲಿರುವ ಕವಲೇದುರ್ಗದಕೋಟೆ.

ದೀರ್ಘ‌ ಪ್ರಯಾಣ
6 ಮಂದಿಯ ನಮ್ಮ ತಂಡ ಬೆಳಗ್ಗೆ 7-15ಕ್ಕೆ ಸರಿಯಾಗಿ ಗೆಳೆಯನ ಕಾರು ಹತ್ತಿ ಮಂಗಳೂರಿನಿಂದ ಸುಮಾರು 133 ಕಿ.ಮೀ. ದೂರದಲ್ಲಿರುವ ಕವಲೇದುರ್ಗಕೋಟೆಗೆ ಹೊರಟೆವು. ದೀರ್ಘ‌ಕಾಲದ ಪ್ರಯಾಣದ ಅನಂತರ ಸಮಯ 10-15ಕ್ಕೆ ಕೋಟೆಯ ಮುಂದೆ ನಾವೆಲ್ಲರೂ ಹಾಜರಾಗಿದ್ದೆವು.

ಸೂರ್ಯಾಸ್ತಮಾನ
ಅನಂತರ ಅಲ್ಲಿಯೇ ಸ್ವಲ್ಪ ಹೊತ್ತು ಕಳೆದು, ಕೋಟೆಯ ಒಳಕ್ಕೆ ಹೋಗಿ ಅಲ್ಲಿನ ಸೌಂದರ್ಯವನ್ನು ಅನುಭವಿಸಿದೆವು. ಗೆಳೆಯರೊಂದಿಗೆ ಕೂಡಿ ಹತ್ತಾರು ಆಟಗಳನ್ನು ಆಡಿ ತಮ್ಮ ಬಾಲ್ಯವನ್ನು ಮತ್ತೊಮ್ಮೆ ನೆನಪಿಸಿಕೊಂಡೆವು. ಸಂಜೆಯ ಸೂರ್ಯಾಸ್ತಮಾನವನ್ನು ಕೋಟೆಯ ಮಧ್ಯೆ ನಿಂತು ನೋಡಿದ ಅನುಭವ ಮನೋಹರವಾಗಿತ್ತು.

ಕೋಟೆಯ ವಿಶೇಷತೆ
ಪ್ರಕೃತಿ ರಮಣೀಯ, ಇತಿಹಾಸ ಸ್ಮರಣೀಯ ಕವಲೇ ದುರ್ಗಕೋಟೆ ಅಂತಾರಾಷ್ಟ್ರೀಯ ಪ್ರವಾಸಿ ತಾಣಗಳಲ್ಲಿ ಒಂದು. ಹೆಜ್ಜೆ ಮೇಲೆ ಹೆಜ್ಜೆಯಿಟ್ಟರೂ ಸದ್ದು ಪ್ರತಿಧ್ವನಿಸುವಷ್ಟು ಪ್ರಶಾಂತ ಹಾಗೂ ಮೌನದ ಪರಿಸರ. ಹಸಿರನ್ನು ಕಣ್ತುಂಬಿಕೊಳ್ಳುವುದು ಮಾತ್ರವಲ್ಲ ಇತಿಹಾಸದ ಅರಿವನ್ನು ಮನದುಂಬಿಕೊಳ್ಳಬಹುದು. ಕವಲೇದುರ್ಗದ ಕೋಟೆಯ ತುತ್ತತುದಿಯಲ್ಲಿ ನಿಂತು ಮೇಲೆ ನೋಡಿದರೆ ಕಣ್ಣಿಗೆ ಕಾಣುವ ಕೊನೆ ಇಲ್ಲದ ಆಕಾಶ, ಬಿಸಿಲಿಗೆ ಪಳಪಳ ಹೊಳೆಯುತ್ತಿದ್ದ ವರಾಹಿ ನೀರಿನ ಚೆಲುವು, ಹಾಗೆ ಹೊರಳಿ ನೋಡಿದರೆ ಕಾಣುವ ಕುಂದಾದ್ರಿ ಬೆಟ್ಟ ನಮ್ಮ ಮನಸ್ಸನ್ನು ಸರೆ ಹಿಡಿದಿತ್ತು. ಇಲ್ಲಿನ ಆಕರ್ಷಣೆಗಳಲ್ಲಿ ತಿಮ್ಮಣ್ಣನಾಯಕನ ಕೆರೆಯೂಒಂದು. 18 ಎಕರೆ ವಿಸ್ತೀರ್ಣದ ಈ ಕೆರೆ, ಹಕ್ಕಿಗಳ ಚಿಲಿಪಿಲಿ ಕಲರವ, ಮೀನುಗಳ ಮುಳುಗಾಟದಿಂದ, ಬೆಳ್ಳಕ್ಕಿಯ ಹಿಂಡಿನಿಂದ ಗಮನ ಸೆಳೆಯಿತು. ಕರೆಯ ಮೇಲಿನಿಂದ ತೇಲಿ ಬರುವ ತಂಗಾಳಿಗೆ ನಾವೆಲ್ಲರೂ ಮೈಯೊಡ್ಡಿ ನಿಂತು ಜಲಚರಗಳ ದನಿ ಕೇಳಿಸಿಕೊಂಡು ಮುಂದಕ್ಕೆ ನಡೆದೆವು.

ಮನ ಮೋಹಕ
ಕೋಟೆಯ ತುದಿಯಲ್ಲಿನ ಒಂದು ಬೃಹತ್‌ ಬಂಡೆಯ ಮೇಲಿನ ಶಿವನ ಗುಡಿ ಪೂಜ್ಯಾರ್ಹವಾಗಿದ್ದು ಗಾಳಿಯ ಹೊಡೆತಕ್ಕೂ ಮುಕ್ಕಾಗದೇ ಗಟ್ಟಿಯಾಗಿತ್ತು. ಪ್ರಕೃತಿಯ ವೈಪರಿತ್ಯಕ್ಕೆ ಶಿಲಾ ಸ್ಮಾರಕಗಳು ನಾಶವಾಗಿದ್ದಕ್ಕಿಂತಲೂ, ದಾಳಿಯಲ್ಲಿಯೇ ನಾಶವಾದೆವು ಎಂದು ಅಲ್ಲಿನ ಕಲ್ಲು ಕಲ್ಲುಗಳು ಹೇಳುತ್ತಿತ್ತು. ಪಶ್ಚಿಮ ಘಟ್ಟಗಳ ಸೌಂದರ್ಯವನ್ನೆಲ್ಲ ಮೀರಿ ನಿಂತಿದ್ದ ಕವಲೇದುರ್ಗ ದುರ್ಗಮವಾಗಿರದೆ ಮನೋಹರವಾಗಿತ್ತು.

ಇತಿಹಾಸ
ಕವಲೇದುರ್ಗ ತೀರ್ಥಹಳ್ಳಿ ತಾಲೂಕಿನ ಹಸುರು ಸಿರಿಯಿಂದ ಸಮೃದ್ಧವಾದ ಮೋಹಕ ತಾಣ. ತೀರ್ಥಹಳ್ಳಿ-ಸಾಲೂರು ಮಾರ್ಗವಾಗಿ ದಟ್ಟ ಕಾಡುಗಳಿಂದ ಕೂಡಿದ ಸಹ್ಯಾದ್ರಿ ಶ್ರೇಣಿಯ ಮಡಿಲಲ್ಲಿ ಸಾಗಿದಾಗ ಸಿಗುತ್ತದೆ. ಇದೊಂದು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವದ ನೈಸರ್ಗಿಕ ಸುಂದರತಾಣ. ಕವಲೇದುರ್ಗಎನ್ನುವುದು ಕಾವಲು ದುರ್ಗ ಎಂಬ ಹೆಸರಿನ ಅಪಭ್ರಂಶ. ಕರ್ನಾಟಕದ ಇತಿಹಾಸದಲ್ಲಿ ನಾಗರ ಖಂಡ ಬನವಾಸಿ ನಾಡೆಂದು ಖ್ಯಾತಿಗೊಂಡಿದ್ದ ಮಲೆನಾಡು ಪ್ರದೇಶದ ಕವಲೇದುರ್ಗ ಒಂದು ಐತಿಹಾಸಿಕ ತಾಣ. 

ರೂಟ್‌ ಮ್ಯಾಪ್‌
·ಮಂಗಳೂರಿನಿಂದ-ಕವಲೇದುರ್ಗ ಕೋಟೆಗೆ ಸುಮಾರು 133 ಕಿ.ಮೀ. ದೂರ.
· ಇಲ್ಲಿಗೆ ಬಸ್ಸು ಸಂಚಾರ ಇಲ್ಲ; ಪ್ರವಾಸಿಗರು ಕಾರು, ಬೈಕ್‌ನಲ್ಲಿ ಹೋಗಬೇಕು.
· ಕೋಟೆಯ ಒಳಗಡೆ ಅಂದರೆ, ಹತ್ತಿರದಲ್ಲಿಯಾವುದೇ ಬಗೆಯ ತಿಂಡಿ-ಸಿನಿಸುಗಳು ಲಭ್ಯರುವುದಿಲ್ಲ.
· ಕೋಟೆಯಿಂದ ಸುಮಾರು 2ಕಿ.ಮೀ. ದೂರದಲ್ಲಿ ನೀರು, ಸ್ನಾಕ್ಸ್‌ ಸಹಿತ ತಿಂಡಿ ತಿನಿಸುಗಳು ಸಿಗುತ್ತವೆ.

 ಅಭಿಲಾಷ್‌ ಬಿ.ಸಿ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.