500 ವರ್ಷಗಳ ಹಿಂದಿನ ಕಥೆ ಹೇಳಲಿದೆ ದೇಯಿ ಬೈದೆತಿ


Team Udayavani, Jan 17, 2019, 7:03 AM IST

17-january-8.jpg

ಐತಿಹಾಸಿಕ ತುಳು ಚಲನಚಿತ್ರ ದೇಯಿಬೈದೆತಿ 1.15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಫೆಬ್ರವರಿಯಲ್ಲಿ ಬಿಡುಗಡೆಗೊಳಿಸಲು ತೀರ್ಮಾನಿಸಲಾಗಿದೆ. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲಿ ಈ ಚಿತ್ರವನ್ನು ತಯಾರಿಸಲಾಗಿದ್ದು, ಮೊದಲು ತುಳು ಸಿನೆಮಾ ರಿಲೀಸ್‌ ಆದ ಬಳಿಕ ಕನ್ನಡ ಸಿನೆಮಾ ರಿಲೀಸ್‌ ಮಾಡುವ ಸಿದ್ಧತೆ ನಡೆಯಲಿದೆ ಎಂಬುದು ಚಿತ್ರದ ನಿರ್ದೇಶಕ ಸೂರ್ಯೋದಯ್‌ ಪೆರಂಪಳ್ಳಿ ಅವರ ಅಭಿಪ್ರಾಯ. ತುಳುನಾಡಿನಲ್ಲಿ ಬಲ್ಲಿದರ ಪರವಾಗಿ ಪರಾಕ್ರಮ ತೋರಿದ ರಣರಂಗದಲ್ಲಿಯೇ ಪ್ರಾಣಾರ್ಪಣೆ ಮಾಡಿದ ವೀರಪುರುಷರಾದ ಕೋಟಿ- ಚೆನ್ನಯರ ತಾಯಿ ದೇಯಿಬೈದೆತಿಯ ಜೀವನಗಾಥೆ ಈ ಚಿತ್ರದ ಕಥೆ.

ವಿಶೇಷ ಅಂದರೆ, ಸಿನೆಮಾ ಬಿಡುಗಡೆಗೆ ಇನ್ನೂ ಒಂದು ತಿಂಗಳು ಬಾಕಿ ಇರುವ ಸಂದರ್ಭದಲ್ಲಿಯೇ ಆನ್‌ಲೈನ್‌ ಮೂಲಕ ಟಿಕೆಟ್ ಪಡೆಯುವವರ ಸಂಖ್ಯೆ ಅಧಿಕವಿದೆ. ನೂರಾರು ಟಿಕೆಟ್‌ಗಳನ್ನು ಈಗಾಗಲೇ ಕಾಯ್ದಿರಿಸಲಾಗಿದೆ ಎಂಬುದನ್ನು ಚಿತ್ರತಂಡ ಸಂತಸದಿಂದ ಹಂಚಿಕೊಳ್ಳುತ್ತಿದೆ.

ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿ 500 ವರ್ಷಗಳ ಹಿಂದಿನ ಕಾಲಕ್ಕೆ ಸರಿ ಹೊಂದುವ ಅದ್ದೂರಿ ಸೆಟ್ ಹಾಕಿ ಚಿತ್ರದ ಮುಖ್ಯ ಭಾಗಗಳನ್ನು ಚಿತ್ರೀಕರಿಸಲಾಗಿದೆ. ಹಾಗೆಯೇ ಪಡುಮಲೆ ಪರ್ಕಳದ ಶೆಟ್ಟಿಬೆಟ್ಟಿನ ಅರಮನೆ ಹಾಗೂ ಉಳಿದ ಭಾಗಗಳನ್ನು ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ. 2 ಗಂಟೆ 50 ನಿಮಿಷಗಳ ಈ ಐತಿಹಾಸಿಕ ಸಿನೆಮಾ ಪ್ರೇಕ್ಷಕರನ್ನು 500 ವರ್ಷ ಹಿಂದೆ ಕೊಂಡೊಯ್ಯಲಿದೆ. ಈ ಕಥೆಯನ್ನು ಎರಡು ವರ್ಷಗಳ ಕಾಲ ಅಧ್ಯಯನ ಮಾಡಿ ಸಂಶೋಧಕರಲ್ಲಿ ಚರ್ಚಿಸಿ ಚಿತ್ರಕಥೆಯನ್ನು ರಚಿಸಲಾಗಿದೆ. ಈಗಾಗಲೇ ದೇಯಿಬೈದೆತಿಯ ಕುರಿತಂತೆ ತುಳುನಾಡಿನ ಪಾಡ್ದನಗಳಲ್ಲಿ ಇರುವ ಕೆಲವು ಗೊಂದಲಗಳಿಗೆ ಆಕೆಯ ಹುಟ್ಟಿಗೆ ಸಂಬಂಧಿಸಿದಂತೆ ಕೇಳಿ ಬರುವ ಪ್ರಶ್ನೆಗಳಿಗೆ ಈ ಚಿತ್ರದ ಮೂಲಕ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಲಾಗಿದೆ ಎಂಬುದು ಅವರ ಅಭಿಪ್ರಾಯ. ಬಿ. ಭಾಸ್ಕರ ರಾವ್‌ ಸಂಗೀತ ನೀಡಿದ್ದು, ಮಣಿಕಾಂತ್‌ ಕದ್ರಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ರವಿ ಸುವರ್ಣ ಹಾಗೂ ಹರೀಶ್‌ ಪೂಜಾರಿ ಅವರ ಛಾಯಾಗ್ರಹಣವಿದೆ. ಮೋಹನ್‌ ಎಲ್‌. ಸಂಕಲನದ ಜವಾಬ್ದಾರಿ ನಿರ್ವಹಿಸಿದ್ದಾರೆ. ದೇವರಾಜ್‌ ಪಾಲನ್‌ ರಾಜ್‌ಕೃಷ್ಣ, ಅಮಿತ್‌ ರಾವ್‌ ಅವರು ಸಹನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸೀತಾಕೋಟೆ, ಚೇತನ್‌ ರೈ ಮಾಣಿ, ಸೌಜನ್ಯಾ ಹೆಗ್ಡೆ, ಅಮಿತ್‌ ರಾವ್‌ ಮುಂತಾದವರು ಸಿನೆಮಾದಲ್ಲಿದ್ದಾರೆ.

ದಿನೇಶ್‌ ಇರಾ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.