‘ಇಂಗ್ಲೀಷ್‌’ ಪಾಠ ಹೇಳುವ ಅನಂತ್‌ನಾಗ್‌!


Team Udayavani, Jan 31, 2019, 7:18 AM IST

31-january-13.jpg

ಅಕ್ಮೆ ಮೂವೀಸ್‌ ಇಂಟರ್‌ನ್ಯಾಶನಲ್‌ ಲಾಂಛನದಲ್ಲಿ ತಯಾರಾಗುತ್ತಿರುವ ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಾಣದ ಕೆ. ಸೂರಜ್‌ ಶೆಟ್ಟಿ ನಿರ್ದೇಶನದ ‘ಇಂಗ್ಲಿಷ್‌’ ತುಳು ಸಿನೆಮಾ ಮುಹೂರ್ತ ಆಗುತ್ತಿದ್ದಂತೆ ಒಂದೊಂದೇ ವಿಶೇಷತೆಗಳ ಮೂಲಕ ಸುದ್ದಿಗೆ ಬಂದಿದೆ. ಸ್ಯಾಂಡಲ್‌ವುಡ್‌ ಲೋಕದಲ್ಲಿ ಪ್ರಚಲಿತದಲ್ಲಿರುವ ಅನಂತ್‌ನಾಗ್‌ ಇದೇ ಮೊದಲ ಬಾರಿಗೆ ತುಳು ಸಿನೆಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಹರೀಶ್‌ ಶೇರಿಗಾರ್‌ ನಿರ್ಮಾಣದ ‘ಮಾರ್ಚ್‌ 22’, ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಸಿನೆಮಾದಲ್ಲಿ ಮುಖ್ಯ ರೋಲ್‌ನಲ್ಲಿಯೇ ಕಾಣಿಸಿಕೊಂಡ ಅನಂತ್‌ನಾಗ್‌ ಅವರು ಶೇರಿಗಾರ್‌ ಅವರ ಕೋರಿಕೆಯ ಮೇರೆಗೆ ಅವರದ್ದೇ ತುಳು ಸಿನೆಮಾದಲ್ಲಿಯೂ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಕೆಲವೇ ದಿನದ ಹಿಂದೆ ಮಂಗಳೂರಿನಲ್ಲಿ ಮುಹೂರ್ತ ಕಂಡಿರುವ ಈ ಸಿನೆಮಾದ ಶೂಟಿಂಗ್‌ ಸದ್ಯ ನಗರ ವ್ಯಾಪ್ತಿಯಲ್ಲಿ ನಡೆಯುತ್ತಿದೆ.

ಅಂದಹಾಗೆ, ‘ಇಂಗ್ಲೀಷ್‌’ನ ಕಥೆ ಏನು ಗೊತ್ತಾ? ಹೀರೋ ಮಾಲ್‌ ಒಂದರಲ್ಲಿ ಗೊಂಬೆ ವೇಷ ಹಾಕಿ ಕುಣಿಯುವ ಕೆಲಸ ಮಾಡುತ್ತಿರುತ್ತಾನೆ. ಅಲ್ಲಿಗೆ ಹೀರೋಯಿನ್‌ ತನ್ನ ಗೆಳತಿಯ ಜತೆ ಬರುತ್ತಿರುತ್ತಾಳೆ. ಹೀರೋಗೆ ಹೀರೋಯಿನ್‌ ಅನ್ನು ಕಂಡು ಇಷ್ಟವಾಗುತ್ತದೆ. ಒಂದು ದಿನ ಹೀರೋಹಿನ್‌ ಬಳಿ ತನ್ನ ಪ್ರೀತಿ ವಿಷಯ ತಿಳಿಸುತ್ತಾನೆ. ಹೀರೋಯಿನ್‌ ಆತನಿಗೆ ಇಂಗ್ಲೀಷ್‌ ಬರುವುದಿಲ್ಲವೆಂದೂ ತಾನು ಮದುವೆ ಆದರೆ ಇಂಗ್ಲೀಷ್‌ ಗೊತ್ತಿರುವವನನ್ನು ಮಾತ್ರ ಆಗುವುದೆಂದೂ ನಾಯಕನನ್ನು ನಿರಾಕರಿಸುತ್ತಾಳೆ. ಅಂದಿನಿಂದ ಹೀರೋ ತನ್ನ ಫ್ರೆಂಡ್ಸ್‌ ಜತೆ ಸೇರಿ ‘ಇಂಗ್ಲೀಷ್‌’ ಕಲಿಯಲು ಶುರು ಮಾಡುತ್ತಾನೆ. ಅಲ್ಲಿಂದ ಕಥೆ ಮುಂದುವರಿಯುತ್ತದೆ. ಪೃಥ್ವಿ ಅಂಬರ್‌, ನವ್ಯ ಪೂಜಾರಿ, ನವೀನ್‌ ಡಿ. ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್‌, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿರಾಮಕುಂಜ ಮುಂತಾದವರಿದ್ದಾರೆ. ಕೃಷ್ಣ ಸಾರಥಿ ಛಾಯಾಗ್ರಹಣ, ಮನು ಶೇಡ್‌ಗಾರ್‌ ಸಂಕಲನ ಹಾಗೂ ಸಂಗೀತ ಮಣಿಕಾಂತ್‌ ಕದ್ರಿ ನೀಡಲಿದ್ದಾರೆ.

ದಿನೇಶ್‌ ಇರಾ

ಟಾಪ್ ನ್ಯೂಸ್

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

UV Fusion: ಮಕ್ಕಳ ಕೈಗೊಂದು ಪುಸ್ತಕ ಕೊಡಿ

11

UV Fusion: ಜೀವನವೆಂಬ ನಿಜವಾದ ಪರೀಕ್ಷೆ

10-uv-fusion

UV Fusion: ಲಜ್ಜೆಯ  ಹೆಜ್ಜೆಯೊಂದಿಗೆ ಜತೆಯಾದ ಗೆಜ್ಜೆ

9-fusion

UV Fusion: ಉರಿ ಬಿಸಿಲೂ, ಮೊದಲ ಮಳೆಗೇ ಶಾಪವಿಡುವ ನಾವೂ!

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.