ಕುಡ್ಲದಲ್ಲಿ ಜಬರ್ದಸ್ತ್  ಫೈಟ್‌!


Team Udayavani, Mar 21, 2019, 7:35 AM IST

21-march-11.jpg

ಸಾಮಾನ್ಯವಾಗಿ ತುಳು ಸಿನೆಮಾ ಅಂದಾಗ ಅಲ್ಲಿ ಕಾಮಿಡಿಯೇ ಮುಖ್ಯವಾಗಿರುತ್ತದೆ. ಅದರಲ್ಲಿಯೂ ದೇವದಾಸ್‌ ಕಾಪಿಕಾಡ್‌ ಅವರ ಸಿನೆಮಾ ಅಂದಾಗ ಕಾಮಿಡಿ ಅಗ್ರಪಂಕ್ತಿಯಲ್ಲಿರುತ್ತದೆ. ಜತೆಗೆ ಜನರಿಗೆ ಒಪ್ಪುವಂತಹ ಕತೆ ಕೂಡ ಕಾಮಿಡಿಯಲ್ಲಿ ಮಿಕ್ಸ್‌ ಆಗಿರುತ್ತದೆ. ವಿಶೇಷವೆಂದರೆ ಕಾಪಿಕಾಡ್‌ ಅವರ ಈ ಬಾರಿಯ ಸಿನೆಮಾ ಮಾತ್ರ ಇದಕ್ಕಿಂತ ಸ್ವಲ್ಪ ಭಿನ್ನ. ಇಲ್ಲಿ ಕಾಮಿಡಿ- ಕಥೆಯ ಜತೆಗೆ ಫೈಟ್‌ ವೆರೈಟಿಯಾಗಿ ಇದೆ ಎಂಬುದು ಸದ್ಯದ ಮಾಹಿತಿ.

‘ಜಬರ್ದಸ್ತ್ ಶಂಕರ’ ಸಿನೆಮಾ ಅಷ್ಟರಮಟ್ಟಿಗೆ ಮಾಸ್‌ ಸಿನೆಮಾವಾಗಿ ಮೂಡಿಬಂದಿದೆ ಎಂಬುದು ಅಭಿಪ್ರಾಯ. ಯಾಕೆಂದರೆ 28 ದಿನಗಳ ಜಬರ್ದಸ್ತ್ ಶೂಟಿಂಗ್‌ನಲ್ಲಿ ಬರೋಬ್ಬರಿ 11 ದಿನಗಳ ಶೂಟಿಂಗ್‌ ಅನ್ನು ಕೇವಲ ಫೈಟ್‌ ಗಾಗಿಯೇ ಮೀಸಲಿಡಲಾಗಿದೆ. ಚಿತ್ರದಲ್ಲಿ ನಾಲ್ಕು ಫೈಟ್‌ಗಳು ಕೋಸ್ಟಲ್‌ವುಡ್‌ ನಲ್ಲಿಯೇ ಮೊದಲ ಬಾರಿಗೆ ಅತ್ಯಂತ ಅದ್ದೂರಿಯಾಗಿ ಮೂಡಿಬಂದಿದೆ. ಒಂದು ಫೈಟ್‌ಗಾಗಿ ಸಿನೆಮಾದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ಮಾಡಲಾಗಿದೆ.

ಪುಟ್ಟಣ ಕಣಗಾಲ್‌ ಸ್ಟುಡಿಯೋದಲ್ಲಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆದಿತ್ತು. ಖ್ಯಾತ ಸಾಹಸ ನಿರ್ದೇಶಕ ಮಾಸ್‌ ಮಾದ ನಿರ್ದೇಶನದಲ್ಲಿ ಸಾಹಸ ದೃಶ್ಯಗಳನ್ನು ಪರಿಚಯಿಸಲಾಗಿದೆ. ಅದರಲ್ಲಿಯೂ ಕ್ಲೈಮ್ಯಾಕ್ಸ್‌ನಲ್ಲಿ ಬರುವ ಒಂದು ಫೈಟ್‌ಗಾಗಿ ಐದೂವರೆ ದಿನ ಶೂಟಿಂಗ್‌ ಮಾಡಲಾಗಿದೆ. ಇನ್ನೊಂದು ವಿಶೇಷವೆಂದರೆ ಶೂಟಿಂಗ್‌ ಸಮಯದಲ್ಲಿ ಮೂರು ಕೆಮರಾಗಳನ್ನು ಬಳಸಲಾಗಿದೆ. ಅಂದಹಾಗೆ ಸಿನೆಮಾದ 1 ಡ್ನೂಯೆಟ್‌ ಸಾಂಗ್‌ ಶೂಟಿಂಗ್‌ ಬಾಕಿ ಇದ್ದು, ಅದನ್ನು ಅದ್ದೂರಿಯಾಗಿ ಮಾಡಬೇಕು ಎಂಬುದು ಚಿತ್ರತಂಡದ ಅಭಿಪ್ರಾಯ.

10 ನುರಿತ ಡ್ಯಾನ್ಸರ್‌ನವರನ್ನು ಇದಕ್ಕಾಗಿ ಬಳಸಲಾಗುತ್ತದೆ. ಎರಡೂವರೆ ದಿನ ಶೂಟಿಂಗ್‌ನ ಯೋಚನೆಯಿದೆ. ‘ಶಿವನಾಮದ ಮೈಮೆನೇ’ ಎಂಬ ಹಾಡಿನ ಚಿತ್ರೀಕರಣಕ್ಕೆ ಮೂರು ದಿನ ತೆಗೆದುಕೊಳ್ಳಲಾಗಿದೆ. ಹೆಚ್ಚಾ ಕಡಿಮೆ 250 ಜನ ಈ ಹಾಡಿನಲ್ಲಿ ಇದ್ದರು. ಜಲನಿಧಿ ಪ್ರೊಡಕ್ಷನ್‌ ಲಾಂಛನದಲ್ಲಿ ತಯಾರಾಗುತ್ತಿರುವ ಈ ಸಿನೆಮಾವನ್ನು ಅನಿಲ್‌ ಕುಮಾರ್‌, ಲೋಕೇಶ್‌ ಕೋಟ್ಯಾನ್‌, ರಾಜೇಶ್‌ ಕುಡ್ಲ ನಿರ್ಮಿಸುತ್ತಿದ್ದು, ದೇವದಾಸ್‌ ಕಾಪಿಕಾಡ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಸದ್ಯ ಚಿತ್ರದ ಡಬ್ಬಿಂಗ್‌ ಕೆಲಸ ನಡೆಯುತ್ತಿದೆ. ತುಳುನಾಡಿನ ಸಂಸ್ಕೃತಿ, ಆಚಾರ- ವಿಚಾರ, ಸಂಪ್ರದಾಯ ಎಲ್ಲವೂ ಇಲ್ಲಿದೆ. ಸಿನೆಮಾವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ ಹಿಂದಿ, ತಮಿಳು, ತೆಲುಗಿಗೆ ಡಬ್ಬಿಂಗ್‌ ಹಕ್ಕು ಮಾರಾಟ ಮಾಡುವ ಕುರಿತು ಮಾತುಕತೆ ನಡೆದಿದೆ ಎಂದು ರಾಜೇಶ್‌ ಕುಡ್ಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.