ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Team Udayavani, Jan 13, 2018, 12:19 PM IST
ಕಂದಾವರ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ ಸುರಕ್ಷೆ ಮತ್ತು ಅದರ ಮುಕ್ತಾಯದ ಸುರಕ್ಷೆ ಪ್ರದೇಶಕ್ಕಾಗಿ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಹಾಗೂ ಕೊಳಂಬೆ ಗ್ರಾಮಗಳ 32 ಎಕರೆ ಅಗತ್ಯವಿರುವ ಖಾಸಗಿ ಜಾಗವನ್ನು ಭೂಮಾಲಕರಿಂದ ನೇರವಾಗಿ ಖರೀದಿ ಮಾಡುವ ವಿಷಯದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಂದಾವರ ಗ್ರಾಮ ಪಂಚಾಯತ್ನಲ್ಲಿ ಭೂಸ್ವಾಧಿನಾಧಿಕಾರಿ ಹಾಗೂ ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಸಂದರ್ಭ ಭೂಮಾಲಕರ ಅಭಿಪ್ರಾಯ ಕೇಳಲಾಯಿತು. ಕೊಳಂಬೆ ಹಾಗೂ ಅದ್ಯಪಾಡಿ ಗ್ರಾಮದ ಜಾಗಕ್ಕೆ ಬೇರೆ ಬೇರೆ ದರ ನಿಗದಿಗೆ ಹಾಗೂ ಸರಕಾರಿ ದರಕ್ಕೆ ವಿರೋಧ ವ್ಯಕ್ತವಾಯಿತು ಕಂದಾವರ ಗ್ರಾ.ಪಂ.ಅಧ್ಯಕ್ಷೆ ವಿಜಯಾ ಗೋಪಾಲ ಸುವರ್ಣ ಮಾತನಾಡಿ, ಭೂಮಿ ಕಳೆದುಕೊಂಡವರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ನೀಡಬೇಕು. ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ಜಾಗ ಕಳೆದುಕೊಂಡವರು ತೊಂದರೆಯಲ್ಲಿದ್ದಾರೆ. ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲ ವ್ಯವಸ್ಥೆಗಳನ್ನು ಮಾಡಬೇಕು. ಸರಕಾರಿ ಜಾಗದಲ್ಲಿ ಮನೆಕಟ್ಟಿ ವಾಸವಿರುವವರಿಗೂ ಬೇರೆ ಜಾಗ ಮಂಜೂರು ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!