ಬದುಕಿಗೆ ಬಣ್ಣ ತುಂಬುವ ಚಿತ್ರಕಲೆ 


Team Udayavani, Jun 27, 2018, 4:00 PM IST

27-june-15.jpg

ತಾಳ್ಮೆ, ಆಸಕ್ತಿ, ಬುದ್ಧಿವಂತಿಕೆ ಜತೆಗೆ ಸಮಯವನ್ನು ಸಂಪೂರ್ಣವಾಗಿ ಉಪಯೋಗಿಸುವ ಬುದ್ಧಿವಂತಿಕೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ಓದಿದ್ದು ಎಂಜಿನಿಯರಿಂಗ್‌ ಆದರೂ ಆಸಕ್ತಿ ಚಿತ್ರಕಲೆಯಲ್ಲಿ. ಮಂಗಳೂರಿನ ಶ್ರೀನಿವಾಸ ಇನ್ಸ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯಲ್ಲಿಯಲ್ಲಿ ಏರೋನೆಟಿಕ್‌ ಎಂಜಿನಿಯರಿಂಗ್‌ನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ, ಪ್ರಸ್ತುತ ಬೆಂಗಳೂರಿನ ಕಂಪೆನಿಯೊಂದರಲ್ಲಿ ತರಬೇತಿ ಪಡೆಯುತ್ತಿರುವ ಯತಿನ್‌, ಚಿತ್ರಕಲೆ ಬಗ್ಗೆ ಯಾವುದೇ ತರಬೇತಿ ಪಡೆದಿಲ್ಲ. ಬಾಲ್ಯದಿಂದಲೇ ಈ ಬಗ್ಗೆ ಇದ್ದ ಆಸಕ್ತಿ ಇಂದು ಅವರ ಹವ್ಯಾಸವಾಗಿ ಬೆಳೆದಿದೆ.

ತಂದೆ- ತಾಯಿಯ ನಿರಂತರ ಪ್ರೋತ್ಸಾಹದಿಂದ ಎಂಜಿನಿಯರಿಂಗ್‌ ಕಲಿಕೆಯ ಜತೆಗೆ ಚಿತ್ರಕಲೆಯ ಆಸಕ್ತಿಯು ಬೆಳೆಯುತ್ತಾ ಹೋಯಿತು ಎನ್ನುತ್ತಾರೆ ಯತೀನ್‌. ಹಲವು ಕಲಾವಿದರಿಂದ ಪ್ರೇರಣೆ ಪಡೆದ ಯತೀನ್‌ಗೂ ಚಿತ್ರಕಲೆ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲವಿದೆ. ಪೈಂಟಿಂಗ್‌ ಎಲ್ಲರಿಗೂ ಇಷ್ಟವಾಗುವ ಕಲೆ. ಜತೆಗೆ ಮನಸ್ಸಿಗೆ ಪ್ರಿಯವಾಗುವ ಕಾರ್ಯ. ಹೊಸಹೊಸ ಯೋಚನೆಗಳು, ಚಿಂತನೆಗಳು ಬೆಳೆಯಲು ಇದು ಪ್ರೇರಣೆ. ಕಲ್ಪನೆಯೇ ಇದಕ್ಕೆ ಬಂಡವಾಳ ಎನ್ನುವ ಯತೀನ್‌ ಪೈಂಟಿಂಗ್‌ನ ಹಲವು ಮಾದರಿಗಳನ್ನು ಬಿಡಿಸುತ್ತಾರೆ. ಅದರಲ್ಲಿ ಮುಖ್ಯವಾಗಿ ಪೆನ್ಸಿಲ್‌ ಸ್ಕೆಚ್‌, 3ಡಿ ಆರ್ಟ್‌, ಚುಕ್ಕಿ ಚಿತ್ರ, 5 ಮಿನಟ್ಸ್‌ ಪೈಂಟಿಂಗ್‌.

ಉದ್ಯೋಗಕ್ಕೊಂದು ದಾರಿ
ಚಿತ್ರಕಲೆಯ ಹವ್ಯಾಸವಿದ್ದವರು ಲಕ್ಷಾಂತರ ರೂ. ಸಂಪಾದನೆಯನ್ನೂ ಮಾಡಬಹುದು. ಮನಸ್ಸಿಗೆ ಖುಷಿ ಕೊಡುವ ಚಿತ್ರಕಲೆಯನ್ನು ಹವ್ಯಾಸವನ್ನಾಗಿಯೂ ಬೆಳೆಸಿಕೊಳ್ಳಬಹುದು. ಬಿಡುವಿದ್ದ ವೇಳೆಯಲ್ಲಿ ಅಥವಾ ಫ‌ುಲ್‌ ಟೈಮ್‌ ಕೆಲಸವನ್ನಾಗಿಯೂ ಮಾಡಿಕೊಳ್ಳಬಹುದು.
ಚಿತ್ರಕಲೆಯಲ್ಲಿ ತೊಡಗಿಕೊಂಡಿರುವವರಿಗೆ ಆರ್ಕಿಟೆಕ್ಟ್, ಫ್ಯಾಷನ್‌ ಇಂಡಸ್ಟ್ರೀ, ಮಾಡೆಲಿಂಗ್‌ ಸಹಿತ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳೂ ಇವೆ. ಹೀಗಾಗಿ ಚಿತ್ರಕಲೆಯನ್ನು ಕಲಿತರೆ ಬದುಕಿಗೊಂದು ಹೊಸ ದಾರಿ ಹುಡುಕಿದಂತಾಗುವುದು. 

ಕಲಿಕೆ ಸುಲಭ
ಗುರುವಿನೊಂದಿಗೆ ಅಥವಾ ಗುರು ಇಲ್ಲದೆಯೂ ಕಲಿಯಬಹುದಾಗಿರುವ ಕಲೆಗಳಲ್ಲಿ ಚಿತ್ರಕಲೆಯೂ ಒಂದು. ಚಿತ್ರಗಳನ್ನು ನೋಡುತ್ತಾ, ಮಾದರಿಯನ್ನು ಅನುಸರಿಸುತ್ತಾ ಬಂದರೆ ಚಿತ್ರಕಲೆ ಅಭ್ಯಾಸ ನಮ್ಮೊಳಗೆ ನಮಗರಿವಿಲ್ಲದಂತೆ ಹವ್ಯಾಸವಾಗಿ ಬೆಳೆಯುತ್ತದೆ. ಈ ಕುರಿತು ತರಬೇತಿ ನೀಡುವ ಸಾಕಷ್ಟು ಸಂಸ್ಥೆಗಳು, ಆನ್‌ಲೈನ್‌ ಶಿಕ್ಷಣವೂ ಇದೆ. ಓದು, ವೃತ್ತಿಯೊಂದಿಗೆ ಇದನ್ನೂ ಹವ್ಯಾಸವನ್ನಾಗಿ ಬೆಳೆಸಿಕೊಳ್ಳಬಹುದು, ಪಾರ್ಟ್‌ ಟೈಂ ವೃತ್ತಿಯನ್ನಾಗಿ ಮಾಡಿಕೊಳ್ಳಬಹುದು. 

ಶ್ರುತಿ ನೀರಾಯ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.