ಹಳೆ ಪೈಪ್‌ನಿಂದ ತರಕಾರಿ ಚಪ್ಪರ


Team Udayavani, Sep 16, 2018, 3:11 PM IST

16-sepctember-18.jpg

ಎಡಪಡಿತ್ತಾಯರ ತರಕಾರಿ ಚಪ್ಪರ ಪರಿಸರ ಸ್ನೇಹಿ. ಅದಕ್ಕಾಗಿ ಮರಗಳನ್ನು ಕಡಿಯಬೇಕಾಗಿಲ್ಲ. ಕೂಲಿಗಳ ಅಗತ್ಯವೂ ಇಲ್ಲ. ಕೆಲವೇ ನಿಮಿಷಗಳಲ್ಲಿ ಚಪ್ಪರ ಸಿದ್ಧವಾಗುತ್ತದೆ. ವರ್ಷಗಳ ಕಾಲ ಉಳಿದುಕೊಳ್ಳುತ್ತದೆ. ಬೇರೆಡೆಗೂ ಸ್ಥಳಾಂತರಿಸಬಹುದು.

ತೊಂಡೆ, ಹೀರೆ, ಮುಳ್ಳುಸೌತೆ, ಪಡುವಲ ಮೊದಲಾದ ತರಕಾರಿಗಳ ಬಳ್ಳಿ, ನೆಲದಲ್ಲಿ ಹರಡಿದರೆ ಒಳ್ಳೆಯ ಗುಣಮಟ್ಟದ ಕಾಯಿಗಳು ಸಿಗುವುದಿಲ್ಲ. ಎಲೆ, ಕಾಯಿಗಳೆಲ್ಲವೂ ಮುದುಡುತ್ತವೆ. ಬಳ್ಳಿ ಸಲೀಸಾಗಿ ಹರಡಿದರೆ ಮಾತ್ರ ಗುಣಮಟ್ಟದ ಕಾಯಿ ಸಿಗುತ್ತದೆ. ಹೀಗೆ ಹರಡಲು ಅನುಕೂಲವಾದ ಚಪ್ಪರವೊಂದು ಬೇಕೇ ಬೇಕು ಅಲ್ಲವೇ? ಇಲ್ಲಿದೆ ಅದಕ್ಕೆ ಐಡಿಯಾ. 

ಹಿಂದಿನ ಕಾಲದಲ್ಲಿ ಇಂತಹ ಚಪ್ಪರ ನಿರ್ಮಿಸಲು ಕಷ್ಟವಿರಲಿಲ್ಲ. ಕಾಡಿಗೆ ಹೋಗಿ ಕಂಬ, ಗೂಟಗಳನ್ನು ಕಡಿದು ತಂದು ಗಟ್ಟಿಯಾದ ಚಪ್ಪರಗಳನ್ನು ಹಾಕಬಹುದಿತ್ತು. ರಬ್ಬರ್‌ ಕೃಷಿ ವಿಸ್ತರಿಸಿದ ಬಳಿಕ ಕಾಡುಗಳು ಮಾಯವಾಗಿವೆ. ಚಪ್ಪರ ಹಾಕಲು ಬೇಕಾದ ಸಲಕರಣೆಗಳು ಸಿಗುವುದಿಲ್ಲವೆಂಬುದು ತರಕಾರಿ ಬೆಳೆಗಾರರ ಪಾಲಿಗೆ ತಲೆನೋವಾಗಿದೆ.

ಇಂಥ ಸಮಸ್ಯೆಗಳಿಗೆ ಬಹು ಸುಲಭವಾಗಿ ಉತ್ತರ ಹುಡುಕಿದ್ದಾರೆ ವೆಂಕಟರಮಣ ಎಡಪಡಿತ್ತಾಯರು. ಶಾಲಾ ಶಿಕ್ಷಕರಾಗಿ ಕೆಲವು ದಶಕಗಳ ಕಾಲ ಸೇವೆ ಸಲ್ಲಿಸಿ  ವೃತ್ತರಾದ ಬಳಿಕ, ಮಂಗಳೂರು ತಾಲೂಕಿನ ಮೂಡು ಕೊಣಾಜೆಯಲ್ಲಿ ಕೃಷಿ ಜಾಗ ಖರೀದಿಸಿ ಅಡಿಕೆ,ತೆಂಗುಗಳ ಜತೆಗೆ ವೈವಿಧ್ಯಮಯವಾದ ತರಕಾರಿಗಳನ್ನೂ ಅವರು ಬೆಳೆಯುತ್ತಿದ್ದಾ ರೆ. ಬೇಸಗೆಯಲ್ಲಿ ಬೇರೆ, ಮಳೆಗಾಲದಲ್ಲಿ ಬೇರೆ ಬಗೆಯ ತರಕಾರಿಗಳ ಕೃಷಿ ಮಾಡಿ ಮನೆಗೆ ಬೇಕಾದಷ್ಟು ತಾಜಾ ಕಾಯಿಪಲ್ಲೆ  ಪಡೆಯುತ್ತಿದ್ದಾರೆ.

ಹೀಗೆ ಬೆಳೆಯುವ ತರಕಾರಿ ಬಳ್ಳಿಗಳಿಗೆ ಚಪ್ಪರ ಹಾಕಲು ಎಡಪಡಿತ್ತಾಯರಿಗೆ ಸನಿಹದಲ್ಲಿ ಕಾಡು ಇಲ್ಲ. ಕಂಬಗಳನ್ನು ಕಡಿದು ತಂದು ಕೆಲಸ ಮಾಡಲು ಶಕ್ತಿಯೂ ಇಲ್ಲ. ಅದಕ್ಕಾಗಿ ಅವರು ಸುಲಭವಾದ ಒಂದು ಉಪಾಯವನ್ನು ಕಂಡು ಹಿಡಿದಿದ್ದಾರೆ. ಅದು ನಿರರ್ಥಕವೆಂದು ಮೂಲೆಗೆಸೆದ ಪಿಸಿ ಪೈಪ್‌ಗ್ಳಿಂದ ಸರಳವಾಗಿ ನಿರ್ಮಿಸುವ ಚಪ್ಪರ. ತುಂಡಾದ ಪೈಪ್‌ಗಳು, ಜೋಡಣೆಗಳು, ಟಿ ಗಳು ಇದನ್ನೆಲ್ಲ ಬಳಸಿ ಸಿದ್ಧವಾಗುವ ಚಪ್ಪರವದು.

ಕಂಬದ ಬದಲಿಗೆ ಸ್ವಲ್ಪ ದಪ್ಪವಿರುವ ಪೈಪ್‌ ಗಳನ್ನು ನಾಲ್ಕು ಮೂಲೆಗಳಲ್ಲಿ ಹೂಳುತ್ತಾರೆ. ಜೋಡಣೆಗಳನ್ನು ಉಪಯೋಗಿಸಿ ಮೇಲ್ಭಾಗದ ತೋಳುಗಳನ್ನು ಬೆಸೆದಿದ್ದಾರೆ. ಒಂದಿಂಚಿನ ತುಂಡು ಪೈಪ್‌ಗಳನ್ನು ಮೇಲೆ ಹರಡಿ ಇದರ ಮೇಲೆ ತೊಂಡೆ, ಹೀರೆ ಮೊದಲಾದ ತರಕಾರಿಗಳ ಬಳ್ಳಿಗಳನ್ನು ಹಬ್ಬಲು ಬಿಡುತ್ತಾರೆ.

ಎಡಪಡಿತ್ತಾಯರ ತರಕಾರಿ ಚಪ್ಪರ ಪರಿಸರ ಸ್ನೇಹಿ. ಅದಕ್ಕಾಗಿ ಮರಗಳನ್ನು ಕಡಿಯಬೇಕಾಗಿಲ್ಲ. ಕೂಲಿಗಳ ಅಗತ್ಯವಿಲ್ಲ. ಕೆಲವೇ ನಿಮಿಷಗಳಲ್ಲಿ ಚಪ್ಪರ ಸಿದ್ಧವಾಗುತ್ತದೆ. ವರ್ಷಗಳ ಕಾಲ ಉಳಿದುಕೊಳ್ಳುತ್ತದೆ. ಬೇರೆಡೆಗೂ ಸ್ಥಳಾಂತರಿಸಬಹುದು. ತರಕಾರಿ ಬೆಳೆಗಾರರ ಪಾಲಿಗೆ ಖರ್ಚಿಲ್ಲದ ಚಪ್ಪರ ಪೇಟೆಯಲ್ಲಿ ಹಿತ್ತಿಲಿನಲ್ಲಿ ತರಕಾರಿ ಬೆಳೆಯುವವರಿಗೂ ಅನುಕೂಲವಾಗಬಹುದು.

ಪ. ರಾಮಕೃಷ್ಣ ಶಾಸ್ತ್ರಿ 

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.