ಮಲೆನಾಡಿನ ಮಡಿಲಲ್ಲಿ ಕಲ್ಲತ್ತಗಿರಿ ಜಲಪಾತ 


Team Udayavani, Oct 4, 2018, 3:05 PM IST

4-october-13.gif

ಜಿಟಿ ಜಿಟಿ ಮಳೆಯ ನಡುವೆ ಬೆಟ್ಟಗುಡ್ಡಗಳನ್ನು ಹತ್ತುವ ಸಂಭ್ರಮವೇ ರೋಮಾಂಚನವನ್ನುಂಟು ಮಾಡುವಂಥದ್ದು. ಈ ನಡುವೆ ಹರಿಯುವ ಜಲಧಾರೆಯಲ್ಲಿ ಮನತಣಿಸುವಷ್ಟು ಕುಣಿದು ಕುಪ್ಪಳಿಸಿ, ಆಟವಾಡಿದ ನೆನಪುಗಳು ಬದುಕಿನದ್ದಕ್ಕೂ ಸವಿನೆನಪುಗಳಾಗಿಯೇ ಉಳಿದುಬಿಡುತ್ತವೆ. ಸ್ನೇಹಿತರ ಜತೆಯಾಗಿ ಮಲೆನಾಡಿನ ಬೆಟ್ಟಗುಡ್ಡಗಳಲ್ಲಿ ಅಲೆದು ಕಲ್ಲತ್ತಗಿರಿ ಜಲಪಾತವನ್ನು ಕಂಡಾಗ ಮನಸ್ಸು ಧನ್ಯವಾಗಿತ್ತು.

ರಾತ್ರಿ ಇಡೀ ಮಳೆ. ಕೆಮ್ಮಣ್ಣು ಗುಂಡಿಯ ಹಾದಿಯಲ್ಲಿ ಉದ್ದಕ್ಕೂ ಗುಂಡಿಗಳೇ ಸಿಕ್ಕವು. ಕಲ್ಲತ್ತಗಿರಿ ಜಲಪಾತ ನೋಡುವ ಉತ್ಸಾಹ ನೂರ್ಮುಡಿಯಾಗಿದ್ದು ಈ ಮಳೆಯಿಂದಲೇ. ಜಲಪಾತ ನೋಡಲು ಅಣಿಯಾದೆವು. ಅಲ್ಲಿಯೇ ಹತ್ತಿರದ ಹೊಟೇ ಲೊಂದರಲ್ಲಿ ಉಪಹಾರ ಮುಗಿಸಿ ಬಳುಕಿನ ಹಾದಿಯಲ್ಲಿ ಮಲೆನಾಡ ಸೊಬಗನ್ನು ಸವಿಯುತ್ತಾ ಹೊರಟೆವು. ಎಲ್ಲೆಲ್ಲೂ ಹಚ್ಚ ಹಸುರು, ನಡುನಡುವೆ ಸುರಿವ ತುಂತುರು. ಜತೆಜತೆಗೆ ಜೋರು ಮಳೆ. ಹಸಿರು ಗಿರಿಶ್ರೇಣಿಗಳ ಮೇಲೆ ಹಾರಾಡುತ್ತಾ ಹಸಿರು ಗುಡ್ಡಗಳಿಗೆ ಮುತ್ತಿಕ್ಕುವ ಮುದವಾದ ನೋಟ ನಮ್ಮ ಕಣ್ಣುಗಳನ್ನು ತಂಪಾಗಿಸಿತು. ದಾರಿಯ ನಡುವೆ ಸಿಗುವ ಸಣ್ಣ ಸಣ್ಣ ಜಲಪಾತಗಳು ಇನ್ನಷ್ಟು ಹುಚ್ಚೆಬ್ಬಿಸಿದ್ದವು. ಎಲ್ಲರೂ ಫೋಟೋ ಶೂಟ್‌ ನಡೆಸಿದ್ದೇ ನಡೆಸಿದ್ದು.

ಜಲಪಾತದ ಸೊಬಗು
ಅರಣ್ಯ ಇಲಾಖೆಯ ತಪಾಸಣೆ ಮುಗಿಸಿಕೊಂಡು ಜಲಪಾತದ ಹತ್ತಿರಕ್ಕೆ ಬಂದಾಗಲೂ ಮಳೆ ಸುರಿಯುತ್ತಲೇ ಇತ್ತು. ಮಳೆ ಹನಿಗಳ ಜತೆ ಹರಿಯುವ ನೀರಿನಲ್ಲಿ ಮಿಂದು ಅಲ್ಲಿಯೇ ಇದ್ದ ಹೊಟೇಲೊಂದರಲ್ಲಿ ಕುಡಿದ ಮಲೆನಾಡಿನ ಬಿಸಿ ಬಿಸಿ ಕಾಫಿ  ಹೃದಯವನ್ನು ಬೆಚ್ಚಗೆ ಮಾಡಿತು. ಅಲ್ಲಿಂದ ಹೊರಟ ತಲುಪಿದ್ದು ಝೆಡ್‌ ಪಾಯಿಂಟ್‌ಗೆ. 

ಅಲ್ಲೂ ಜಿಟಿಜಿಟಿ ಮಳೆ, ಮೈ ಕೊರೆಯುವ ಚಳಿ. ಸುಂದರ ಪರಿಸರ, ಮಳೆಯಿಂದಾಗಿ ಎಲ್ಲೆಲ್ಲೂ ಹಚ್ಚ ಹಸುರಿನಿಂದ ಕಂಗೊಳಿಸುತ್ತಿರುವ ಪರ್ವತ ಸಾಲುಗಳ ರುದ್ರರಮಣೀಯ ಪರಿಸರ.

ನೋಡುತ್ತಾ ಅಲ್ಲಿಯೇ ಇದ್ದು ಇಡಬೇಕೆನಿಸುವಷ್ಟು ಆನಂದ. ಸ್ವಲ್ಪ ಮುಂದೆ ಸಾಗುತ್ತಿರುವಾಗಲೇ ಧುಮುಕುತ್ತಿರುವ ನೀರಿನ ಜಲಧಾರೆಯ ದರ್ಶನವಾಯ್ತು. ಅದೇ ಶಾಂತಿ ಜಲಪಾತ. ಜಲಧಾರೆಯ ಸೌಂದರ್ಯವನ್ನು ಕಣ್ತುಂಬಿಕೊಂಡು ಪ್ರಯಾಣ ಮುಂದುವರೆಸಿದೆವು.

ಮುಂದೆ ಸಿಕ್ಕಿದ್ದು, ಎಲ್ಲೆಲ್ಲೂ ಹಸುರು ಸೀರೆಯನ್ನು ಉಟ್ಟ ಪರ್ವತ ಸಾಲುಗಳೇ. ಪ್ರಕೃತಿಯ ಹಸಿರ ಸೌಂದರ್ಯವನ್ನು ಆಸ್ವಾದಿಸುತ್ತಾ ಗುಡ್ಡದ ತುತ್ತತುದಿಯನ್ನು ತಲುಪಿದಾಗ ಸ್ವರ್ಗಕ್ಕೆ ಮೂರೇ ಗೇಣು. ಮೈಮನಗಳಲ್ಲಿ ನಿಜಾರ್ಥದಲ್ಲಿ ರೋಮಾಂಚನ ಉಂಟು ಮಾಡುವಂಥ ಜಾಗ. ಸ್ವಲ್ಪ ಸಮಯ ಅಲ್ಲೇ  ಕಾಲ ಕಳೆದು ವಾಪಸ್‌ ಹೊರಟೆವು. 

ರೂಟ್‌ ಮ್ಯಾಪ್‌
· ಮಂಗಳೂರಿನಿಂದ ಕೆಮ್ಮಣ್ಣು ಗುಂಡಿಗೆ ಸುಮಾರು 213 ಕಿ.ಮೀ. ದೂರ.
 ·ಕೆಮ್ಮಣ್ಣು ಗುಂಡಿಯಿಂದ 4 ಕಿ.ಮೀ. ದೂರದ ಲ್ಲಿದೆ ಫಾಲ್ಸ್‌.
 ·ಕಲ್ಲತ್ತಗಿರಿ ಜಲಪಾತಕ್ಕೆ ಖಾಸಗಿ ವಾಹನಗಳನ್ನು ಮಾಡಿಕೊಂಡು ಹೋದರೆ ಅನುಕೂಲ.
 ·ಕೆಮ್ಮಣ್ಣುಗುಂಡಿಯಲ್ಲಿ ಮೊದಲೇ ಬುಕ್ಕಿಂಗ್‌ ಮಾಡಿದರೆ ವಸತಿ, ಊಟದ       
   ಸಮಸ್ಯೆಯಿಲ್ಲ.
 ·ಹತ್ತಿರದಲ್ಲಿದೆ ರಾಕ್‌ ಗಾರ್ಡನ್‌, ಕೆಮ್ಮಣ್ಣು ಗುಂಡಿ ಕೃಷ್ಣರಾಜೇಂದ್ರ ಪಾರ್ಕ್‌, ಶಾಂತಿ
  ಫಾಲ್ಸ್‌.

ಲಕ್ಷ್ಮೀಕಾಂತ್‌ ಎಲ್‌.ವಿ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.