ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿ


Team Udayavani, Oct 28, 2018, 2:44 PM IST

28-october-15.gif

ಸ್ಮಾರ್ಟ್‌ ಸಿಟಿಯಾಗಲು ಹೊರಟಿರುವ ಮಂಗಳೂರು ನಗರದಲ್ಲಿ ಸಮಸ್ಯೆಗಳದ್ದೇ ಸಾಲು. ಸಾರ್ವಜನಿಕ ರಸ್ತೆ, ಒಳಚರಂಡಿ ವ್ಯವಸ್ಥೆ, ಫುಟ್‌ಪಾತ್‌, ಬಸ್‌ ಬೇ ನಿರ್ಮಾಣ ಎಲ್ಲವೂ ಅರೆಬರೆ ಕಾಮಗಾರಿಯೊಂದಿಗೆ ನಿಲುಗಡೆಗೊಂಡಿದೆ. ಕಳೆದ ಮೇ ತಿಂಗಳಿನಲ್ಲಿ ಆರಂಭವಾದ ವಿವಿಧ ಸಣ್ಣ ಪುಟ್ಟ ಕಾಮಗಾರಿಗಳು ಕೊನೆಗೊಳ್ಳುವ ಲಕ್ಷಣಗಳೇ ಕಾಣುತ್ತಿಲ್ಲ. ಚರಂಡಿ ನೀರು ಬ್ಲಾಕ್‌ ಆದರೆ ಅಥವಾ ಏನಾದರೂ ಸಮಸ್ಯೆ ಕಾಣಿಸಿಕೊಂಡರೆ ರಸ್ತೆ ಮಧ್ಯದಲ್ಲಿ ಮ್ಯಾನ್‌ಹೋಲ್‌ ಅಗೆದು ತಿಂಗಳುಗಟ್ಟಲೆ ಹಾಗೇ ಬಿಡಲಾಗುತ್ತಿದೆ.

ಬಂಟ್ಸ್‌ಹಾಸ್ಟೆಲ್‌ ವೃತ್ತದ ಬಳಿ ಮುಖ್ಯರಸ್ತೆಯಲ್ಲಿ ಹಲವು ಸಮಯಗಳ ಬಳಿಕ ಮ್ಯಾನ್‌ಹೋಲ್‌ ತೆರೆದ ಸ್ಥಿತಿಯಲ್ಲಿತ್ತು. ಬಳಿಕ ಅದನ್ನು ಮುಚ್ಚಲಾಗಿತ್ತು. ಆನಂತರ ಬಿಜೈ ರಸ್ತೆಯಲ್ಲಿಯೂ ಇದೇ ಕತೆಯಾಯಿತು. ಈಗ ಜೈಲ್‌ ರಸ್ತೆಯಿಂದ ಬಿಜೈ ಸಂಪರ್ಕಿಸುವ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಅಗೆದು ಸುತ್ತ ಬ್ಯಾರಿಕೇಡ್‌ ಹಾಕಿ ಬಿಡಲಾಗಿದೆ. ಮ್ಯಾನ್‌ಹೋಲ್‌ ತೆರೆದ ಸ್ಥಿತಿಯಲ್ಲಿದ್ದು ತಿಂಗಳಾಗುತ್ತಾ ಬಂದಿದ್ದರೂ, ಇನ್ನೂ ಸ್ಥಳೀಯಾಡಳಿತದ ಸಂಬಂಧಪಟ್ಟವರು ಅದನ್ನು ಶೀಘ್ರ ಕೆಲಸ ನಡೆಸಿ ಮುಚ್ಚುವ ಹಂತಕ್ಕೆ ಬಂದಿಲ್ಲ. ಇದು ವಾಹನ ನಿಬಿಡ ರಸ್ತೆಯಾದ್ದರಿಂದ ಮತ್ತು ಅತಿ ವೇಗದಲ್ಲಿ ವಾಹನಗಳು ಸಂಚರಿಸುತ್ತಿರುವುದರಿಂದ ಬ್ಯಾರಿಕೇಡ್‌ ಹಾಕಿರುವುದು ಏಕಾಏಕಿ ತಿಳಿಯದೆ ಅಪಘಾತ ಸಂಭವಿಸುವ ಸಾಧ್ಯತೆಗಳೂ ಇವೆ. ಅಲ್ಲದೇ ಇಲ್ಲಿ ಡಿವೈಡರ್‌ ಇಲ್ಲದಿರುವುದರಿಂದ ಎರಡೂ ಕಡೆಯಿಂದ ಬರುವ ವಾಹನಗಳು ಬ್ಯಾರಿಕೇಡ್‌ ತಿಳಿಯದೆ ಢಿಕ್ಕಿಯಾಗುವ ಸಂಭವವೂ ಇದೆ.

ಇನ್ನು ಎಂ.ಜಿ. ರೋಡ್‌, ಬಂಟ್ಸ್‌ ಹಾಸ್ಟೆಲ್‌ ಮುಂತಾದೆಡೆಗಳಲ್ಲಿ ಬಸ್‌ ಬೇ ನಿರ್ಮಾಣ ಕಾಮಗಾರಿಯೂ ಮಂದಗತಿಯಲ್ಲಿ ಸಾಗುತ್ತಿದೆ. ಬಸ್‌ ಬೇ ನಿರ್ಮಾಣವಾಗದಿರುವ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಬಸ್‌ ನಿಲುಗಡೆಗೊಳಿಸಲಾಗುತ್ತಿದ್ದು, ಪಾದಚಾರಿಗಳಿಗೂ ಅನಗತ್ಯ ತೊಂದರೆ ಉಂಟಾಗುತ್ತಿದೆ. ಸ್ಥಳೀಯಾಡಳಿತ ಶೀಘ್ರ ಇತ್ತ ಕಡೆ ಗಮನ ಹರಿಸಬೇಕಾದ ಅವಶ್ಯವಿದೆ. ನಗರದ ಅಲ್ಲಲ್ಲಿ ಫುಟ್‌ಪಾತ್‌ ಕೂಡ ತೆರೆದುಕೊಂಡಿದ್ದು, ಪಾದಚಾರಿಗಳಿಗೆ ನಡೆದಾಡಲು ಸೂಕ್ತ ವ್ಯವಸ್ಥೆಯೇ ಇಲ್ಲದಂತಾಗಿದೆ.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.