ಪರಿಶ್ರಮದಿಂದ ಯಶಸ್ಸು


Team Udayavani, Nov 19, 2018, 12:54 PM IST

19-november-9.gif

ಇರುವ ಸಂಪತ್ತು, ಬುದ್ಧಿವಂತಿಕೆ, ಸಾಮರ್ಥ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳುವಂತಹ ಕೌಶಲವನ್ನು ರೂಢಿಸಿಕೊಳ್ಳಬೇಕು. ನಮ್ಮ ಯಶಸ್ಸಿನ ಗುಟ್ಟು ಪರಿಶ್ರಮದಲ್ಲಿ ಅಡಗಿದೆ. ನಮ್ಮ ಬದುಕಿನ ಶಿಲ್ಪಿ ನಾವೇ ಆಗಬೇಕು. ಆ ಮೂಲಕ ಸುಂದರವಾಗಿ ಬದುಕನ್ನು ವಿನ್ಯಾಸಗೊಳಿಸಿ ಸ್ವಾವಲಂಬಿಗಳಾಗಬಹುದು.

ಯಾರನ್ನೋ ಅನುಕರಿಸಿ ಜೀವನದಲ್ಲಿ ನಾವೇನೋ ಆಗಲು ಸಾಧ್ಯವಿಲ್ಲ. ನಮ್ಮ ಜೀವನದ ಯಶಸ್ಸಿಗೆ ನಾವೇ ಏನಾದರೂ ಮಾಡಬೇಕಿರುವುದು ಅನಿವಾರ್ಯ. ಗುರಿ ಸಾಧನೆಗೆ ನಮ್ಮದೇ ದಾರಿ ಕಂಡುಕೊಳ್ಳಬೇಕು. ಆದರೂ ಸಾಧಕರ ಯಶೋಗಾಥೆಗಳಿಂದ ಪ್ರೇರಣೆ ದೊರಕುತ್ತದೆ, ಮನೋಬಲ ಹೆಚ್ಚುತ್ತದೆ. ಸಮಸ್ಯೆ, ಸಂಕಷ್ಟಗಳನ್ನು ಎದುರಿಸಿದ ಬಗೆ, ಪ್ರವಾಹದ ವಿರುದ್ಧ ಈಜುವ ಛಾತಿ, ಆತ್ಮಸ್ಥೈರ್ಯದ ಕಥೆಗಳು ನಮಗೆ ಜೀವ ತುಂಬಿ ಜೀವನದ ಯಶಸ್ಸಿಗೆ ಸ್ಫೂರ್ತಿಯಾಗುತ್ತವೆ.

ಪಲಾಯನ ಮಾಡದಿರಿ
ಕೆಲವೊಮ್ಮೆ ಸದಾ ವೈಫ‌ಲ್ಯಗಳೇ ಎದುರಾಗಬಹುದು. ಅದರರ್ಥ ನೀವು ಯಶಸ್ಸು ಪಡೆಯುವುದಿಲ್ಲವೆಂದಲ್ಲ. ಬಹುತೇಕ ಜನರು ಯಶಸ್ಸಿನ ಬಾಗಿಲಿನವರೆಗೆ ಬಂದು ತಮ್ಮ ಪ್ರಯತ್ನ ಬಿಡುತ್ತಾರೆ. ಯಶಸ್ಸಿಗೆ ಕೊಂಚ ದೂರದಲ್ಲಿರುವಾಗ ವೈಫ‌ಲ್ಯಕ್ಕೆ ಹೆದರಿ ಪಲಾಯನ ಮಾಡಬೇಡಿ. ಯಶಸ್ಸಿಗೆ ಸೋಲಿನ ಕಥೆಯೂ ಮುನ್ನುಡಿಯಾಗಿರಬಹುದು. ಆದ್ದರಿಂದ ಸೋಲಿನ ಪ್ರಮಾಣವನ್ನು ದ್ವಿಗುಣಗೊಳಿಸಿದಷ್ಟು ಯಶಸ್ಸಿಗೆ ಹತ್ತಿರವಾಗುತ್ತೇವೆ. ಹಾಗಂತ ಪ್ರಯತ್ನ ಪಡದೆ ಸೋಲಿನತ್ತ ಸಾಗಬೇಡಿ. ಅವಿರತ ಪ್ರಯತ್ನ ನಿಮ್ಮಲ್ಲಿರಲಿ.

ಕನಸು ಯೋಚನೆಗಳನ್ನು ಯೋಜನೆಗಳಾಗುವತ್ತ ದಾರಿ ತೋರುತ್ತದೆ. ಕನಸೆನ್ನುವುದು ನಿದ್ರಿಸಿದಾಗ ಕಾಣುವುದಲ್ಲ, ಬದಲಾಗಿ ನಿದ್ರಿಸದಿರುವಾಗ ಕಾಣುವುದು ಎಂದು ಹೇಳಿದ ಕಲಾಂ ಅವರ ಮಾತು ಸದಾ ನಮ್ಮ ಪಾಲಿಗೆ ಪ್ರೇರಣಾ ಶಕ್ತಿ ಇದ್ದಂತೆ.

ನಯ, ವಿನಯ ಇರಲಿ
ವಹಿಸಿರುವ ಕಾರ್ಯವನ್ನು ನಿಷ್ಠೆಯಿಂದಗೈದು, ಇತರರು ನೀವು ಕೈಗೊಳ್ಳುವ ಕೆಲಸಗಳಿಂದ ಉತ್ತೇಜಿತರಾಗುವಂತೆ ಮಾಡಬೇಕು. ಮಾತುಗಳು ಇತರರಿಗೆ ನೋವುಂಟು ಮಾಡದಿರಲು ನಯ, ವಿನಯ ಗುಣ ಅಳವಡಿಸಿಕೊಳ್ಳಬೇಕು.

ಸರಳತೆ ಇರಲಿ
ಪ್ರೀತಿಯಿಂದ ಇತರರ ಮನಸ್ಸನ್ನು ಗೆಲ್ಲಿ. ಬೇರೆಯವರ ಭಾವನೆಯೊಂದಿಗೆ ಚೆಲ್ಲಾಟ ಆಡದಿರಿ. ಯಾಂತ್ರಿಕತೆ, ಆಡಂಬರ ದೂರವಿರಲಿ. ಸಹಜತೆ, ಸರಳತೆಗೆ ಆದ್ಯತೆ ನೀಡಿ. ಹೊಸ- ಹೊಸ ಪ್ರಯೋಗಗಳಿಗೆ ತಮ್ಮನ್ನು ಅರ್ಪಿಸಿಕೊಂಡು ಯಶಸ್ಸು ಗಳಿಸಲು ಪ್ರಯತ್ನಿಸಿ. ಎಷ್ಟು ಲವಲವಿಕೆಯಿಂದಿರುತ್ತೇವೆಯೋ, ಅಷ್ಟು ಸಾಧನೆಗೈಯಬಹುದು. 

ಹರಿಯುವ ನೀರಿನಂತಾಗಿ
ನೀರು ಹರಿಯುವಾಗ ಎಲ್ಲಿಯೂ ಅಂಟಿಕೊಳ್ಳದೆ ಗುರಿಯತ್ತ ಸಾಗುತ್ತದೆ. ಹಾಗೆಯೇ ಜೀವನದಲ್ಲಿ ಬದಲಾವಣೆಯನ್ನು ಒಪ್ಪಿಕೊಂಡು ಮುಂದುವರಿಯಬೇಕು. ಹರಿಯುವ ನೀರು ನಿಂತ ನೀರಿಗಿಂತ ಶುದ್ಧ. ಹಾಗೆ ನಾವು ಸತತ ಚಟುವಟಿಕೆಯಿಂದ ಕೂಡಿದ್ದು, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಶುದ್ಧ ಹಾಗೂ ಚುರುಕಾದ ಮನಸ್ಸು ಖುಷಿ ನೀಡುತ್ತದೆ. 

ಗಣೇಶ ಕುಳಮರ್ವ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.