ಅವಕಾಶ ಸೃಷ್ಟಿಯಿಂದ ಆಸಕ್ತಿಯೂ ಬೆಳೆಯುತ್ತದೆ
Team Udayavani, Jan 23, 2019, 7:28 AM IST
Qಮೀನುಗಾರಿಕಾ ಕ್ಷೇತ್ರದಲ್ಲಿ ಪ್ರಸ್ತುತ ಅವಕಾಶಗಳು ಹೇಗಿವೆ?
ಮೀನುಗಾರಿಕೆಯಲ್ಲಿ ಸಮುದ್ರ ಮೀನುಗಾರಿಕೆ ಮತ್ತು ಜಲಕೃಷಿ ಎಂಬ ಎರಡು ವಿಧಾನಗಳಿವೆ. ಭಾರತದಲ್ಲಿ ಸದ್ಯ ಜಲಕೃಷಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ದೇಶೀಯ ಸಿಗಡಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಇರುವುದರಿಂದ ಮೀನುಗಳ ಪೈಕಿ ಶೇ. 75ರಷ್ಟು ರಫ್ತು ಆಹಾರವಾಗಿ ಸಿಗಡಿ ಮಾರಾಟವಾಗುತ್ತಿದೆ. ಅದಕ್ಕಾಗಿ ಜಲಕೃಷಿ ಅಭಿವೃದ್ಧಿಯಾಗುತ್ತಿದೆ. ಹೀಗಾಗಿ ಮೀನುಗಾರಿಕಾ ಕ್ಷೇತ್ರದಲ್ಲಿ ಅವಕಾಶಗಳು ಹೆಚ್ಚಾಗುತ್ತಲೇ ಇವೆ.
Qಜಲಕೃಷಿಗೆ ನಗರದಲ್ಲಿ ಒತ್ತು ನೀಡಲಾಗುತ್ತಿದೆಯೇ?
ಜಲಕೃಷಿ ಮಾಡಲು ಸಾಕಷ್ಟು ಸ್ಥಳಾವಕಾಶವಿರುವ ಕೊಳಬೇಕು. ಆದರೆ ನಗರ ಪ್ರದೇಶದಲ್ಲಿ ಕೊಳ ನಿರ್ಮಾಣಕ್ಕೆ ಸ್ಥಳಾವಕಾಶ ಸಿಗುವುದು ವಿರಳ. ಹಾಗಾಗಿ ನಗರಗಳಲ್ಲಿ ಇದಕ್ಕೆ ಅಷ್ಟೊಂದು ಒತ್ತು ನೀಡಲಾಗುತ್ತಿಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಜಲಕೃಷಿ ಹೆಚ್ಚು ಅಭಿವೃದ್ಧಿಯಾಗತೊಡಗಿದೆ.
Qಸಾಫ್ಟ್ವೇರ್ ಕಡೆಗೆ ಒಲವಿರುವ ಈ ಹೊತ್ತಿನಲ್ಲಿ ಮೀನುಗಾರಿಕಾ ವಿಜ್ಞಾನ ಕಲಿಕೆ ಮತ್ತು ವಿದ್ಯಾರ್ಥಿಗಳ ಆಸಕ್ತಿ ಹೇಗಿದೆ?
ಇಲ್ಲಿನ ಜಲ ಆಹಾರವು ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಹೋಗುವುದರಿಂದ ಸಂಸ್ಕರಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದರಿಂದ ಸಂಸ್ಕರಣಾ ಇಂಡಸ್ಟ್ರಿಗಳು ಅಭಿವೃದ್ಧಿಯಾಗುತ್ತಿವೆ. ಹೀಗಾಗಿ ಸಹಜವಾಗಿ ವಿದ್ಯಾರ್ಥಿಗಳಿಗೆ ಅವಕಾಶ ಸೃಷ್ಟಿಯಾಗುವುದರಿಂದ ಕಲಿಕಾಸಕ್ತಿಯೂ ಬೆಳೆಯುತ್ತಿದೆ.
Qಮೀನುಗಾರಿಕಾ ವಿಜ್ಞಾನ ಪದವೀಧರರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಾರೆಯೇ?
ಜಲಕೃಷಿ ಬೆಳೆಯುತ್ತಿರುವುದೇ ಗ್ರಾಮೀಣ ಭಾಗದಲ್ಲಿ. ಇದಕ್ಕೆ ವೈಶಿಷ್ಟ ್ಯಪೂರ್ಣ ತಾಂತ್ರಿಕತೆಗಳನ್ನು ಅಳವಡಿಸಿಯೇ ಬೆಳೆಸಬೇಕು. ಆದರೆ ಇದನ್ನು ನಿರ್ವಹಿಸಲು ಕ್ಷೇತ್ರ ಪರಿಣತರೇ ಬೇಕಾಗುತ್ತದೆ. ಹೀಗಾಗಿ ಮೀನುಗಾರಿಕಾ ವಿಜ್ಞಾನ ಕಲಿತವರೇ ಜಲಕೃಷಿ ಕೆಲಸಗಳನ್ನು ನಿರ್ವಹಿಸುತ್ತಾರೆ. ಇದಕ್ಕಾಗಿ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಪದವೀಧರರು ತೆರಳುತ್ತಾರೆ.
Qಮೀನುಗಾರಿಕಾ ವಿಜ್ಞಾನದಲ್ಲಿ ಪ್ರಾಯೋಗಿಕ ಶಿಕ್ಷಣದ ಮಹತ್ವವೇನು?
ಮೀನುಗಾರಿಕೆ ಶಿಕ್ಷಣವು ವಿಜ್ಞಾನದ ಒಂದು ಭಾಗ. ಪ್ರಾಯೋಗಿಕ ಶಿಕ್ಷಣಕ್ಕೇ ಇಲ್ಲಿ ಹೆಚ್ಚು ಒತ್ತು. ಹೀಗಾಗಿ ಪ್ರಾಯೋಗಿಕ ಶಿಕ್ಷಣದ ಮೂಲಕವೇ ತಿಳಿದುಕೊಳ್ಳಬೇಕು.
Qಮೀನುಗಾರಿಕಾ ವಿಜ್ಞಾನದಲ್ಲಿ ಸಂಶೋಧನೆಗೆ ಆದ್ಯತೆ ಹೇಗಿದೆ?
ಜಲಕೃಷಿ ಮಾಡುವಾಗ ಅದಕ್ಕೆ ತಟ್ಟುವ ರೋಗಗಳ ನಿವಾರಣೆ, ರೋಗಗಳನ್ನು ತಡೆಗಟ್ಟುವುದು ಹೇಗೆ, ಅದಕ್ಕೆ ಬೇಕಾದ ತಾಂತ್ರಿಕ ಪರಿಣತಿ ಈ ಬಗ್ಗೆ ಸಂಶೋಧನೆಗಳು ಅಗತ್ಯವಿದೆ. ಹಾಗಾಗಿ ಸಂಶೋಧನಾ ಕ್ಷೇತ್ರದಲ್ಲಿ ಆದ್ಯತೆ ಜಾಸ್ತಿ ಇದೆ.
ಧನ್ಯಾ ಬಾಳೆಕಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್