ಅವಕಾಶ ಸೃಷ್ಟಿಯಿಂದ ಆಸಕ್ತಿಯೂ ಬೆಳೆಯುತ್ತದೆ


Team Udayavani, Jan 23, 2019, 7:28 AM IST

23-january-9.jpg

Qಮೀನುಗಾರಿಕಾ ಕ್ಷೇತ್ರದಲ್ಲಿ ಪ್ರಸ್ತುತ ಅವಕಾಶಗಳು ಹೇಗಿವೆ?
ಮೀನುಗಾರಿಕೆಯಲ್ಲಿ ಸಮುದ್ರ ಮೀನುಗಾರಿಕೆ ಮತ್ತು ಜಲಕೃಷಿ ಎಂಬ ಎರಡು ವಿಧಾನಗಳಿವೆ. ಭಾರತದಲ್ಲಿ ಸದ್ಯ ಜಲಕೃಷಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ದೇಶೀಯ ಸಿಗಡಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಇರುವುದರಿಂದ ಮೀನುಗಳ ಪೈಕಿ ಶೇ. 75ರಷ್ಟು ರಫ್ತು ಆಹಾರವಾಗಿ ಸಿಗಡಿ ಮಾರಾಟವಾಗುತ್ತಿದೆ. ಅದಕ್ಕಾಗಿ ಜಲಕೃಷಿ ಅಭಿವೃದ್ಧಿಯಾಗುತ್ತಿದೆ. ಹೀಗಾಗಿ ಮೀನುಗಾರಿಕಾ ಕ್ಷೇತ್ರದಲ್ಲಿ ಅವಕಾಶಗಳು ಹೆಚ್ಚಾಗುತ್ತಲೇ ಇವೆ.

Qಜಲಕೃಷಿಗೆ ನಗರದಲ್ಲಿ ಒತ್ತು ನೀಡಲಾಗುತ್ತಿದೆಯೇ?
ಜಲಕೃಷಿ ಮಾಡಲು ಸಾಕಷ್ಟು ಸ್ಥಳಾವಕಾಶವಿರುವ ಕೊಳಬೇಕು. ಆದರೆ ನಗರ ಪ್ರದೇಶದಲ್ಲಿ ಕೊಳ ನಿರ್ಮಾಣಕ್ಕೆ ಸ್ಥಳಾವಕಾಶ ಸಿಗುವುದು ವಿರಳ. ಹಾಗಾಗಿ ನಗರಗಳಲ್ಲಿ ಇದಕ್ಕೆ ಅಷ್ಟೊಂದು ಒತ್ತು ನೀಡಲಾಗುತ್ತಿಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಜಲಕೃಷಿ ಹೆಚ್ಚು ಅಭಿವೃದ್ಧಿಯಾಗತೊಡಗಿದೆ.

Qಸಾಫ್ಟ್‌ವೇರ್‌ ಕಡೆಗೆ ಒಲವಿರುವ ಈ ಹೊತ್ತಿನಲ್ಲಿ ಮೀನುಗಾರಿಕಾ ವಿಜ್ಞಾನ ಕಲಿಕೆ ಮತ್ತು ವಿದ್ಯಾರ್ಥಿಗಳ ಆಸಕ್ತಿ ಹೇಗಿದೆ?
ಇಲ್ಲಿನ ಜಲ ಆಹಾರವು ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಹೋಗುವುದರಿಂದ ಸಂಸ್ಕರಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದರಿಂದ ಸಂಸ್ಕರಣಾ ಇಂಡಸ್ಟ್ರಿಗಳು ಅಭಿವೃದ್ಧಿಯಾಗುತ್ತಿವೆ. ಹೀಗಾಗಿ ಸಹಜವಾಗಿ ವಿದ್ಯಾರ್ಥಿಗಳಿಗೆ ಅವಕಾಶ ಸೃಷ್ಟಿಯಾಗುವುದರಿಂದ ಕಲಿಕಾಸಕ್ತಿಯೂ ಬೆಳೆಯುತ್ತಿದೆ.

Qಮೀನುಗಾರಿಕಾ ವಿಜ್ಞಾನ ಪದವೀಧರರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಾರೆಯೇ?
ಜಲಕೃಷಿ ಬೆಳೆಯುತ್ತಿರುವುದೇ ಗ್ರಾಮೀಣ ಭಾಗದಲ್ಲಿ. ಇದಕ್ಕೆ ವೈಶಿಷ್ಟ ್ಯಪೂರ್ಣ ತಾಂತ್ರಿಕತೆಗಳನ್ನು ಅಳವಡಿಸಿಯೇ ಬೆಳೆಸಬೇಕು. ಆದರೆ ಇದನ್ನು ನಿರ್ವಹಿಸಲು ಕ್ಷೇತ್ರ ಪರಿಣತರೇ ಬೇಕಾಗುತ್ತದೆ. ಹೀಗಾಗಿ ಮೀನುಗಾರಿಕಾ ವಿಜ್ಞಾನ ಕಲಿತವರೇ ಜಲಕೃಷಿ ಕೆಲಸಗಳನ್ನು ನಿರ್ವಹಿಸುತ್ತಾರೆ. ಇದಕ್ಕಾಗಿ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಪದವೀಧರರು ತೆರಳುತ್ತಾರೆ.

Qಮೀನುಗಾರಿಕಾ ವಿಜ್ಞಾನದಲ್ಲಿ ಪ್ರಾಯೋಗಿಕ ಶಿಕ್ಷಣದ ಮಹತ್ವವೇನು?
ಮೀನುಗಾರಿಕೆ ಶಿಕ್ಷಣವು ವಿಜ್ಞಾನದ ಒಂದು ಭಾಗ. ಪ್ರಾಯೋಗಿಕ ಶಿಕ್ಷಣಕ್ಕೇ ಇಲ್ಲಿ ಹೆಚ್ಚು ಒತ್ತು. ಹೀಗಾಗಿ ಪ್ರಾಯೋಗಿಕ ಶಿಕ್ಷಣದ ಮೂಲಕವೇ ತಿಳಿದುಕೊಳ್ಳಬೇಕು.

Qಮೀನುಗಾರಿಕಾ ವಿಜ್ಞಾನದಲ್ಲಿ ಸಂಶೋಧನೆಗೆ ಆದ್ಯತೆ ಹೇಗಿದೆ?
ಜಲಕೃಷಿ ಮಾಡುವಾಗ ಅದಕ್ಕೆ ತಟ್ಟುವ ರೋಗಗಳ ನಿವಾರಣೆ, ರೋಗಗಳನ್ನು ತಡೆಗಟ್ಟುವುದು ಹೇಗೆ, ಅದಕ್ಕೆ ಬೇಕಾದ ತಾಂತ್ರಿಕ ಪರಿಣತಿ ಈ ಬಗ್ಗೆ ಸಂಶೋಧನೆಗಳು ಅಗತ್ಯವಿದೆ. ಹಾಗಾಗಿ ಸಂಶೋಧನಾ ಕ್ಷೇತ್ರದಲ್ಲಿ ಆದ್ಯತೆ ಜಾಸ್ತಿ ಇದೆ.

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.