ತಾಲೂಕು ಭಾಗ್ಯ ಬೇಕಿರುವುದೇನು? ವೈದ್ಯಕೀಯ ವಲಯದಲ್ಲಿ ಅಭಿವೃದ್ಧಿ ಅಗತ್ಯ


Team Udayavani, Mar 17, 2017, 11:29 PM IST

Kadaba-Hospital-17-3.jpg

ಕಡಬ: ತಾಲೂಕು ಕೇಂದ್ರವಾದ ಇಲ್ಲಿ ವೈದ್ಯಕೀಯ ಸೇವೆ ವ್ಯವಸ್ಥೆ ಹೇಳಿಕೊಳ್ಳುವಷ್ಟು ಅಭಿವೃದ್ಧಿಯಾಗಿಲ್ಲ. ಸುಮಾರು 8 ವರ್ಷಗಳ ಹಿಂದೆ 6 ಹಾಸಿಗೆಗಳ ಪ್ರಾಥಮಿಕ ಆರೋಗ್ಯ ಕೇಂದ್ರ 30 ಹಾಸಿಗೆಗಳ  ಸಮುದಾಯ ಆಸ್ಪತ್ರೆಯಾಯಿತು. ಇತ್ತೀಚೆಗೆ ಇದಕ್ಕೆ 4.85 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಹಾಗೆಂದು ಖಾಸಗಿ ವೈದ್ಯ ಸೇವೆಗಳೂ‌ ಚಿಕಿತ್ಸಾಲಯದ ಮಟ್ಟದಿಂದ ಮೇಲೇರಿಲ್ಲ.

30 ಹಾಸಿಗೆಗಳ ಆಸ್ಪತ್ರೆ
ಆರು ಹಾಸಿಗೆಗಳ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು  ಸರಕಾರ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿತು. ದಿನಂಪ್ರತಿ ಸುಮಾರು 300ಕ್ಕೂ ಹೆಚ್ಚು ಹೊರರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಉಳಿದಂತೆ ಹೆಚ್ಚಿನ ಚಿಕಿತ್ಸೆಗೆ ಜನರು ಪುತ್ತೂರು ಮತ್ತು ಮಂಗಳೂರಿಗೆ ತೆರಳಬೇಕು. 2007ರಲ್ಲಿ ಸರಕಾರವು ದ.ಕ. ಜಿಲ್ಲೆಯ ಕಡಬ, ಧರ್ಮಸ್ಥಳ ಹಾಗೂ ಉಪ್ಪಿನಂಗಡಿ ಸೇರಿದಂತೆ ರಾಜ್ಯದ ಒಟ್ಟು 24 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಗತ್ಯ ಹೆಚ್ಚುವರಿ ಹುದ್ದೆಗಳ ಸಮೇತ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿತ್ತು.

ಅದರಂತೆ ಕಡಬ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಶಿಶು ತಜ್ಞರು ಸೇರಿದಂತೆ 4 ಮಂದಿ ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು- ಒಟ್ಟು 34 ಹುದ್ದೆಗಳು ಮಂಜೂರಾಗಿವೆ. ಇವುಗಳಲ್ಲಿ ಹಾಲಿ ಲಭ್ಯವಿರುವ ಹುದ್ದೆಗಳನ್ನು ಹೊರತುಪಡಿಸಿ ಉಳಿದವುಗಳನ್ನು ಕೇಂದ್ರದ ಕಟ್ಟಡ ಕಾಮಗಾರಿ ಶೇ. 60ರಷ್ಟು ಪೂರ್ಣಗೊಂಡ ಬಳಿಕ ಭರ್ತಿ ಮಾಡುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಕಟ್ಟಡ ಕಾಮಗಾರಿ ಶೀಘ್ರವೇ ಮುಗಿದು, ತಜ್ಞ ವೈದ್ಯರು ಹಾಗೂ ಅಗತ್ಯ ಸವಲತ್ತು ಸಿಕ್ಕರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. 

ದೊಡ್ಡಮಟ್ಟದ ಆಸ್ಪತ್ರೆಗಳಿಲ್ಲ
ಸಣ್ಣ ಪುಟ್ಟ ಚಿಕಿತ್ಸಾಲಯಗಳನ್ನು ಬಿಟ್ಟರೆ ಇಲ್ಲಿ ದೊಡ್ಡಮಟ್ಟದ ಖಾಸಗಿ ಆಸ್ಪತ್ರೆಗಳೂ ಇಲ್ಲ. ಮರ್ದಾಳದಲ್ಲಿ ಖಾಸಗಿ ಟ್ರಸ್ಟ್‌ ವತಿಯಿಂದ 400 ಹಾಸಿಗೆಗಳ ಆಸ್ಪತ್ರೆಗೆ ಶಂಕುಸ್ಥಾಪನೆ ಕಳೆದ ತಿಂಗಳು ನೆರವೇರಿದೆ. ಹಾಗೆಯೇ ಕಡಬದ ಸೈಂಟ್‌ ಜೋಕಿಮ್ಸ್‌ ಚರ್ಚ್‌ನ ಬಳಿ ಬೆಂಗಳೂರು ಮೂಲದ ಕೆಥೋಲಿಕ್‌ ಕ್ರೈಸ್ತ ಧರ್ಮಭಗಿನಿಯರ ನೇತೃತ್ವದ ಆಸ್ಪತ್ರೆ ಆರಂಭಿಸುವ ವಿಚಾರ ಪ್ರಾಥಮಿಕ ಹಂತದಲ್ಲಿದೆ. ಕಡಬ ತಾಲೂಕು ಕೇಂದ್ರವಾಗಿ ಅಭಿವೃದ್ಧಿಯಾದರೆ ವೈದ್ಯಕೀಯ ಸೇವೆಗಳೂ ಬೆಳೆಯಬಹುದು. ಪ್ರಸ್ತುತ ಇಲ್ಲಿ ತಜ್ಞ ದಂತ ವೈದ್ಯರನ್ನು ಹೊರ ತುಪಡಿಸಿದರೆ ಇನ್ನಿತರ ಯಾವುದೇ ವೈದ್ಯ ಕೀಯ ವಿಭಾಗದಲ್ಲಿ ಪರಿಣಿತ ವೈದ್ಯರು ಲಭ್ಯರಿಲ್ಲ ಎಂಬುದು ವಾಸ್ತವ.

8 ಗ್ರಾಮಗಳ ವ್ಯಾಪ್ತಿ
ಕಡಬ, ಕೋಡಿಂಬಾಳ, ಬಂಟ್ರ, 102ನೇ ನೆಕ್ಕಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ – 8 ಗ್ರಾಮಗಳ ವ್ಯಾಪ್ತಿ ಈ ಆಸ್ಪತ್ರೆಯದ್ದು. ಆದರೆ ಹತ್ತಿರದ ಕುಂತೂರು, ಆಲಂಕಾರು, ಕೊಂಬಾರು, ಸಿರಿಬಾಗಿಲು, ಐತ್ತೂರು, ಕೊಣಾಜೆ, ಕಾಣಿಯೂರು, ಚಾರ್ವಾಕ, ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಪಂಜ, ಯೇನೆಕಲ್‌, ಬಳ್ಪ, ಕೇನ್ಯ, ಎಡಮಂಗಲ ಪ್ರದೇಶ ದವರೂ ಇಲ್ಲಿಗೇ ಚಿಕಿತ್ಸೆಗೆ ಬರುತ್ತಿರುವುದರಿಂದ ವ್ಯಾಪ್ತಿ ಹೆಚ್ಚಾಗಿದೆ.

ಸವಲತ್ತು ನೀಡುವುದಕ್ಕೆ ಆದ್ಯತೆ 
ಕಡಬದಲ್ಲಿ ಸಮುದಾಯ ಆಸ್ಪತ್ರೆಗೆ ಸುಸಜ್ಜಿತ ಕಟ್ಟಡ ಹಾಗೂ ಅಗತ್ಯ ಸವಲತ್ತುಗಳನ್ನು ನೀಡುವುದು ನಮ್ಮ ಮೊದಲ ಗುರಿ. ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ಇಲ್ಲಿ ಆರಂಭಗೊಳ್ಳಲಿವೆ. ಅದೇ ರೀತಿ ಆರೋಗ್ಯ ಇಲಾಖೆಯ ತಾಲೂಕುಮಟ್ಟದ ಸೌಲಭ್ಯಗಳು ಕೂಡ ಲಭಿಸಿಲು   ಕಾಲಾವಕಾಶ ಅಗತ್ಯವಿದೆ. ಹಂತ ಹಂತವಾಗಿ ಕಡಬಕ್ಕೂ ಕೂಡ ತಾಲೂಕು ಆಸ್ಪತ್ರೆಯ ಮಾನ್ಯತೆ ಹಾಗೂ ಸವಲತ್ತುಗಳು ಸಿಗಲಿವೆ.
-ಡಾ| ರಾಮಕೃಷ್ಣ ರಾವ್‌,  ಜಿಲ್ಲಾ ಆರೋಗ್ಯಾಧಿಕಾರಿ

– ನಾಗರಾಜ್‌ ಎನ್‌.ಕೆ. ಕಡಬ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.