ಬಿ.ಸಿ. ರೋಡ್‌: ಹದಗೆಟ್ಟ  ಸರ್ವಿಸ್‌ ರಸ್ತೆ; ಸುಗಮ ಸಂಚಾರಕ್ಕೆ ತೊಡಕು


Team Udayavani, Mar 19, 2017, 11:25 PM IST

Service-Road-19-3.jpg

ಬಂಟ್ವಾಳ: ಬಿ.ಸಿ.ರೋಡ್‌ ನಗರದ ಸರ್ವಿಸ್‌ ರಸ್ತೆ ದುಸ್ಥಿತಿಯಲ್ಲಿದ್ದು, ಸುಗಮ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಫ್ಲೈಓವರ್‌ ತುದಿಯಲ್ಲಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಆಗದೆ  ಈ ಹಿಂದೆ ಸಂಚಾರಕ್ಕೆ ತೊಡಕಾಗಿತ್ತು. ಅದು ನಿವಾರಣೆ ಆಗುತ್ತಿದ್ದಂತೆ ಇಲ್ಲಿನ ಸರ್ವಿಸ್‌ ರಸ್ತೆಯ ಸಮಸ್ಯೆ ಮುನ್ನೆಲೆಗೆ ಬಂದಿದೆ. ಈ ರಸ್ತೆಯು ಗ್ರಾಮೀಣ ರಸ್ತೆಗಿಂತಲೂ ಕಳಪೆಯಾಗಿದೆ. ಇದರಿಂದ ಮತ್ತೆ ಟ್ರಾಫಿಕ್‌ ಜಾಮ್‌ ಭೀತಿ ತಲೆದೋರಿದೆ.

ಕಾಯಕಲ್ಪವೇ ಆಗಿಲ್ಲ
ಸರ್ವಿಸ್‌ ರಸ್ತೆಗೆ ಫ್ಲೈಓವರ್‌ನಂತೆ ಎರಡು ದಶಕಗಳ ಇತಿಹಾಸವಿದೆ. ಮೇಲ್ಸೇತುವೆ ನಿರ್ಮಾಣ ಆಗುವ ಮೊದಲೇ ಸರ್ವಿಸ್‌ ರಸ್ತೆ ಹಾಳಾಗಿತ್ತು. ಆದರೂ ಇದುವರೆಗೆ ಅದು ಸುಸ್ಥಿತಿಗೆ ಬಂದಿಲ್ಲ. ಈ ರಸ್ತೆಯ ಚರಂಡಿ ನಿರ್ಮಾಣದ ಕೆಲಸ ಈಗ ಆರಂಭವಾಗಿದ್ದು, ಮಂದಗತಿಯಲ್ಲಿ ನಡೆಯುತ್ತಿದೆ. ಎರಡು ತಿಂಗಳ ಹಿಂದೆ ನೂತನ ದ.ಕ. ಜಿಲ್ಲಾಧಿಕಾರಿ ಬಂದು ಬಿ.ಸಿ.ರೋಡ್‌ ನಗರ ಪ್ರದಕ್ಷಿಣೆ ಹಾಕಿದ್ದರು. ಜಿಲ್ಲಾ ಪೊಲೀಸ್‌ ಅಧೀಕ್ಷಕರು ಬಂದು ನೋಡಿದರೂ ಪ್ರಯೋಜನವಾಗಿಲ್ಲ ಎಂಬುದು ನಾಗರಿಕರ ದೂರು. ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬಹುತೇಕ ಅಭಿವೃದ್ಧಿ ಕಾರ್ಯ ಅಪೂರ್ಣವಾಗಿದ್ದು, ಯಾವುದೂ ಮುಗಿಯುತ್ತಿಲ್ಲ ಎಂಬುದು ಜನರು ಮತ್ತು ವ್ಯಾಪಾರಸ್ಥರ ಕೊರಗು.

ನಾಗರಿಕರ ಯಾತನೆ 
ಬಿ.ಸಿ. ರೋಡ್‌, ಬಂಟ್ವಾಳ, ಪಾಣೆಮಂಗಳೂರು ಮತ್ತು ಮೆಲ್ಕಾರ್‌ ಭಾಗಗಳಲ್ಲಿ ಯಾವುದೇ ರಸ್ತೆಗಳಲ್ಲಿ ಸಂಚಾರಿ ನಿಯಮಗಳ ಪಾಲನೆ ಸಾಧ್ಯವಿಲ್ಲದಂತಾಗಿದೆ. ಬಿ.ಸಿ.ರೋಡ್‌ ಸರ್ಕಲ್‌ನಲ್ಲಿ ಧರ್ಮಸ್ಥಳ ಕಡೆಗೆ ಹೋಗುವುದಿದ್ದರೆ ಬಿ.ಸಿ. ರೋಡ್‌ ಜಂಕ್ಷನ್‌ (ನಾರಾಯಣ ಗುರು ವೃತ್ತ)ನಿಂದ ಬೈಪಾಸ್‌ ರಸ್ತೆಯಲ್ಲಿ ಸಾಗಬೇಕು. ಬಲಕ್ಕೆ ತಿರುಗಿದರೆ ಬಂಟ್ವಾಳ ಪೇಟೆ ಸಿಗುತ್ತದೆ. ನೀವು ಪೇಟೆಗೆ ಹೋಗುವಿರಿ ಎಂದಾದರೆ ಮೈಯೆಲ್ಲ ಕಣ್ಣಿದ್ದರೂ ಸಾಲದು. ಬೈಪಾಸ್‌ ರಸ್ತೆಯಿಂದ ಬಿ.ಸಿ. ರೋಡ್‌ ಕಡೆಗೆ ಬರುವ ವಾಹನಗಳು ಕಾಣಿಸೋದು ಕಷ್ಟ. ಯಾವಾಗ ಅಪಘಾತ ಸಂಭವಿಸುತ್ತದೋ ಎಂದು ಹೇಳಲಿಕ್ಕಾಗದು. ರಾತ್ರಿಯಂತೂ ಇನ್ನೂ ಅಪಾಯಕಾರಿ.

ಬಿ.ಸಿ.ರೋಡ್‌ ವೃತ್ತದಿಂದ ಮಂಗಳೂರು ಕಡೆಗೆ ಮೇಲ್ಸೇತುವೆಯಲ್ಲಿ ಸಾಗಿ ಇಳಿಯುವ ಸಂದರ್ಭ ವಾಹನಗಳು ವೇಗಮಿತಿ ಕಾಪಾಡಿಕೊಳ್ಳದಿದ್ದರೆ ಅಪಾಯ ತಪ್ಪಿದ್ದಲ್ಲ. ಯಾಕೆಂದರೆ ಅದೇ ಸಮಯದಲ್ಲಿ ಅಲ್ಲಿಯೇ ಸರ್ವಿಸ್‌ ರೋಡ್‌ನಿಂದ ವಾಹನಗಳು ಹೆದ್ದಾರಿ ಕಡೆ ತಿರುಗುತ್ತಿರುತ್ತವೆ. ಆದರೆ ಅದೇ ಜಾಗದಲ್ಲಿ ಮೇಲ್ಸೇತುವೆ ಮೇಲೆ ಕೆಲ ವಾಹನಗಳನ್ನು ನಿಲ್ಲಿಸಲಾಗಿರುತ್ತದೆ. ಇದರಿಂದ ಎದುರಿಗೆ ಬರುವ ವಾಹನಗಳು ಕೂಡಲೆ ಗಮನಕ್ಕೆ ಬಾರದು. ಜೋಡುಮಾರ್ಗದ ಸರಕಾರಿ ಬಸ್‌ ನಿಲ್ದಾಣ ನಿರ್ಮಾಣದ ಕೆಲಸ ಅಂತಿಮ ಹಂತದಲ್ಲಿದ್ದು ಇಲ್ಲಿನ ಫ್ಲೈ ಓವರ್‌ ಬಂದು ಸೇರುವಲ್ಲಿ ಇನ್ನೊಂದು ಸರ್ಕಲ್‌ ಮಾಡಿ ಅಲ್ಲಿ ಸಿಗ್ನಲ್‌ ವ್ಯವಸ್ಥೆ ಅಳವಡಿಸಬೇಕಾಗಿದೆ ಎಂಬುದು ನಾಗರಿಕರ ಬೇಡಿಕೆ.

ಹೆದ್ದಾರಿ ಇಲಾಖೆ ಕೆಲಸ 
ಸರ್ವಿಸ್‌ ರಸ್ತೆಯಲ್ಲಿ ಚರಂಡಿ ನಿರ್ಮಾಣ ಕೆಲಸ ಕಾಮಗಾರಿ ಪ್ರಗತಿಯಲ್ಲಿದೆ. ಕೆಲಸವು ನಿಧಾನವಾಗಿ ನಡೆಯುವುದಾಗಿ ದೂರುಗಳಿವೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸಂಬಂಧಪಟ್ಟ ಕೆಲಸ ಇದಾಗಿದ್ದು ಮಳೆಗಾಲಕ್ಕೆ ಮೊದಲು ಮುಗಿಸುವರು. ಇಲ್ಲಿ ಪುರಸಭೆಯಿಂದ ಪೈಪ್‌ಲೈನ್‌ ಕೆಲಸ ನಡೆಯಲಿದ್ದು, ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ.
-ಪಿ. ರಾಮಕೃಷ್ಣ ಆಳ್ವ, ಅಧ್ಯಕ್ಷರು, ಬಂಟ್ವಾಳ ಪುರಸಭೆ

ಸರ್ವಿಸ್‌ ರಸ್ತೆ ಅಭಿವೃದ್ಧಿ 
ಕುಡಿಯುವ ನೀರಿನ ಪೈಪ್‌ಲೈನ್‌ ಕೆಲಸಗಳನ್ನು ಕೆಯುಡಬ್ಲ್ಯುಎಸ್‌ನೊದಿಗೆ ಮಾಡುವ ಮೂಲಕ ಸರ್ವಿಸ್‌ ರಸ್ತೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡಲಾಗುವುದು. 
– ಎಂ.ಎಚ್‌. ಸುಧಾಕರ್‌, ಮುಖ್ಯಾಧಿಕಾರಿ, ಬಂಟ್ವಾಳ ಪುರಸಭೆ

– ರಾಜಾ ಬಂಟ್ವಾಳ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.