ಡಿಜಿಟಲ್‌ ಫ್ಲೆಕ್ಸ್‌ ಅಳವಡಿಕೆ ಅಗತ್ಯ


Team Udayavani, Oct 21, 2018, 2:01 PM IST

21-october-13.gif

ನಗರ ಸ್ಮಾರ್ಟ್‌ಸಿಟಿಯಾಗಿ ಬೆಳೆಯುತ್ತಿದೆ. ಸ್ಮಾರ್ಟ್‌ ಸಿಟಿ ಪಟ್ಟ ಹೊತ್ತಿರುವ ನಗರದ ಸೌಂದರ್ಯ ವರ್ಧನೆಗೆ ಡಿಜಿಟಲೀಕರಣಗೊಂಡ ಬೋರ್ಡ್‌ಗಳ ಬಳಕೆ ಹೆಚ್ಚಾದರೆ ಉತ್ತಮ. ಮುಖ್ಯವಾಗಿ ಜಾಹೀರಾತು ಫಲಕ, ಮಾರ್ಗಸೂಚಿ ಫಲಕ, ಟ್ರಾಫಿಕ್‌ ಬೋರ್ಡ್ ಗಳು ಡಿಜಿಟಲೀಕರಣಗೊಂಡರೆ ಪ್ರವಾಸಿ ಸ್ನೇಹಿಯಾಗಿ, ವಾಹನ ಚಾಲಕ ಸ್ನೇಹಿ ಹಾಗೂ ಸಾರ್ವಜನಿಕ ಸ್ನೇಹಿಯಾಗಿಯೂ ನಗರ ಮಾರ್ಪಾಡಾಗುವಲ್ಲಿ ಸಹಕಾರಿಯಾಗುತ್ತದೆ.

ನಗರದಲ್ಲಿ ಪ್ರಮುಖವಾಗಿ ಸಮಸ್ಯೆ ಸೃಷ್ಟಿಸುತ್ತಿರುವುದೆಂದರೆ ಪ್ಲಾಸ್ಟಿಕ್‌ ಫ್ಲೆಕ್ಸ್‌ಗಳ ಬಳಕೆ. ಆದರೆ ಇದನ್ನು ಸಂಪೂರ್ಣ ನಿಲುಗಡೆಗೊಳಿಸಿ, ಡಿಜಿಟಲ್‌ ಫಲಕಗಳನ್ನು ಅಳವಡಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಿಂದ ಪ್ರೋತ್ಸಾಹ ಸಿಕ್ಕಿದರೆ ಇಡೀ ನಗರವನ್ನು ಡಿಜಿಟಲ್‌ ಬೋರ್ಡ್‌ ಅಳವಡಿಕೆಯತ್ತ ಕೊಂಡೊಯ್ಯಬಹುದು. ಸರಕಾರದ ಜಾಹೀರಾತುಗಳನ್ನು ಅಳವಡಿಸುವಾಗಲೂ ಪ್ಲಾಸ್ಟಿಕ್‌ ಫ್ಲೆಕ್ಸ್‌ಗಳನ್ನು ಬಳಕೆ ಮಾಡುತ್ತಿ ರುವುದು ಹೆಚ್ಚುತ್ತಿದೆ. ಈ ಫ್ಲೆಕ್ಸ್‌ಗಳು ಹಳೆಯದಾದಂತೆ ಹರಿದು ಬಿದ್ದು, ಅಥವಾ ನಿರುಪಯೋಗಗೊಂಡ ಬಳಿಕ ಅಲ್ಲಲ್ಲಿ ಬಿಸಾಡುವುದೇ ಹೆಚ್ಚು. ಇದು ಮಣ್ಣಿನಲ್ಲಿ ಬಿದ್ದು, ಕರಗದೆ ಪರಿಸರ ನಾಶಕ್ಕೂ ಕಾರಣವಾಗುತ್ತದೆ. ಒಂದು ವೇಳೆ ಸುಟ್ಟು ಹಾಕಿದರೆ, ಅದೂ ವಾಯು ಮಾಲಿನ್ಯಕ್ಕೆ ಕಾರಣವಾಗಿ ಮನುಷ್ಯ ಸಹಿತ ಸಮಸ್ತ ಜೀವಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದಕ್ಕಾಗಿ ಫ್ಲೆಕ್ಸ್‌ ಬಳಕೆಯನ್ನೂ ಡಿಜಿಟ ಲೀಕರಣ ಮಾಡಿದರೆ, ನಗರದ ಸೌಂದರ್ಯ ವರ್ಧನೆಗೆ ಕಾರಣವಾಗುತ್ತದೆ ಜತೆಗೆ ಪ್ಲಾಸ್ಟಿಕ್‌ ಬಳಕೆಯೂ ತಪ್ಪುತ್ತದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ, ಪಿವಿಎಸ್‌ ಸರ್ಕಲ್‌ ಬಳಿ, ಲಾಲ್‌ ಬಾಗ್‌ ಸೇರಿದಂತೆ ಕೆಲವೆಡೆ ಈಗಾಗಲೇ ಡಿಜಿಟಲ್‌ ಫ್ಲೆಕ್ಸ್‌ ಗಳನ್ನು ಹಾಕಲಾಗಿದೆ. ಇದು ನೋಡುವುದಕ್ಕೂ ಆಕರ್ಷಕವಾಗಿ ಕಾಣುವುದರಿಂದ ಅಧಿಕೃತವಾಗಿ ಮುಂದಿನ ದಿನಗಳಲ್ಲಿ ಕಾರ್ಯಾಚರಿಸಿದರೆ ಉತ್ತಮ. ಸಂಪೂರ್ಣ ಡಿಜಿಟಲೀಕರಣಗೊಳ್ಳುವುದರಿಂದ ಪಾಲಿಕೆಯ ಆದಾಯಕ್ಕೂ ಹೆಚ್ಚಿನ ರೀತಿಯ ಸಂಗ್ರಹಣೆಯಾಗಬಹುದು.

ಅಂತೆಯೇ ನಂತೂರು ವೃತ್ತ ಮುಂತಾದೆಡೆಗಳಲ್ಲಿ ಟ್ರಾಫಿಕ್‌ ಡಿಜಿಟಲ್‌ ಬೋರ್ಡ್‌ ಕಾರ್ಯನಿರ್ವಹಿಸುತ್ತಿದೆ. ಮುಖ್ಯವಾಗಿ ಪರವೂರುಗಳಿಂದ ಪ್ರವಾಸಿಗರು ನಗರಕ್ಕೆ ಆಗಮಿಸಿದ ಸಂದರ್ಭಗಳಲ್ಲಿ ಇದು ಹೆಚ್ಚು ಉಪಯುಕ್ತವಾಗುತ್ತದೆ. ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಡಿಜಿಟಲೀಕರಣಗೊಳ್ಳುತ್ತಿರುವ ಟ್ರಾಫಿಕ್‌ ಡಿಜಿಟಲ್‌ ಬೋರ್ಡ್‌, ಫ್ಲೆಕ್ಸ್‌ಗಳನ್ನು ಸಂಪೂರ್ಣ ಡಿಜಿಟಲೀಕರಣದ ವ್ಯಾಪ್ತಿಗೆ ತರುವುದು ಈ ಹೊತ್ತಿನ ಅವಶ್ಯಕತೆ. 

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.