ಒಳನಾಡು ಜಲಸಾರಿಗೆ ಅಭಿವೃದ್ಧಿ ಮಂಗಳೂರಿನಲ್ಲೂ ಅವಕಾಶ 


Team Udayavani, Nov 4, 2018, 12:17 PM IST

4-november-10.gif

ಸಾಗರ ಜಲ ಮಾರ್ಗದ ಕುರಿತು ಚಿಂತನೆಗಳು ಹಲವಾರು ವರ್ಷಗಳಿಂದ ಇದ್ದರೂ ಸಾಕಾರ ಸ್ವರೂಪ ಪಡೆದುಕೊಂಡಿಲ್ಲ. ಆದರೆ ಇತ್ತೀಚೆಗೆ ರಾಷ್ಟ್ರೀಯ ಒಳನಾಡು ಜಲಮಾರ್ಗ ಸಾರಿಗೆ ಪ್ರಾಧಿಕಾರ ನಡೆಸಿರುವ ಯೋಜನೆಯ ಲಾಭ ಸ್ಮಾರ್ಟ್‌ ನಗರಿಯಾಗಿರುವ ಮಂಗಳೂರಿಗೂ ದೊರೆಯುವ ಸಾಧ್ಯತೆ ಹೆಚ್ಚಾಗಿಸಿದೆ. ಜಲ ಮಾರ್ಗರಚನೆಗೆ ನೇತ್ರಾವತಿ ನದಿಯನ್ನು ಗುರುತಿಸಿರುವುದು ಇಲ್ಲಿನ ಸಾರಿಗೆ ಜತೆಗೆ ಹಿನ್ನೀರು ಪ್ರವಾಸೋದ್ಯಮದ ಅಭಿವೃದ್ಧಿಗೂ ಪೂರಕವಾಗುವ ಸಾಧ್ಯತೆಯನ್ನು ಹೆಚ್ಚಿಸಿದೆ. 

ಮಂಗಳೂರು ಸಾಗರ ಜಲಮಾರ್ಗದ ಜತೆಗೆ ಒಳನಾಡು ಜಲಸಾರಿಗೆ ಅಭಿವೃದ್ಧಿಗೆ ಅಪೂರ್ವ ಅವಕಾಶಗಳನ್ನು ಹೊಂದಿದೆ. ಈ ಅವಕಾಶಗಳನ್ನು ಬಳಸಿಕೊಳ್ಳುವ ಕುರಿತು ಬಹಳಷ್ಟು ವರ್ಷಗಳಿಂದ ಚಿಂತನೆಗಳು ನಡೆಯುತ್ತಾ ಬಂದಿವೆಯಾದರೂ, ಇದು ಸಾಕಾರದ ಸ್ವರೂಪ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿಲ್ಲ.

ಈಗ ರಾಷ್ಟ್ರೀಯ ಒಳನಾಡು ಜಲಮಾರ್ಗ ಸಾರಿಗೆ ಪ್ರಾಧಿಕಾರ (ಐಡಬ್ಲೂéಎಐ) ಈ ನಿಟ್ಟಿನಲ್ಲಿ ಸಾಧ್ಯತೆಗಳನ್ನು ತೆರೆದಿಟ್ಟಿದೆ. ದೇಶದಲ್ಲಿ ಸಮುದ್ರ ಮಾರ್ಗದಲ್ಲಿ ಸಾರಿಗೆ ಮಾದರಿಯಲ್ಲೇ ಒಳನಾಡಿನ ಜಲಮಾರ್ಗಗಳಲ್ಲಿರುವ ಅವಕಾಶಗಳನ್ನು ಬಳಸಿ ಕ್ರಾಂತಿಕಾರಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ನದಿಯನ್ನು ಕೂಡ ಗುರುತಿಸಿದೆ. ಸಾರಿಗೆ ಜತೆಗೆ ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೂ ಇದು ಪೂರಕವಾಗಲಿದೆ.

ಒಳನಾಡು ಜಲಮಾರ್ಗ ಪ್ರಾಧಿಕಾರ ತನ್ನ ಕಾಂತಿಕಾರಿ ಯೋಜನೆಯ ಸಾಕಾರದ ಮಹತ್ವದ ಹೆಜ್ಜೆಯಾಗಿ ಮೊದಲ ಬಾರಿಗೆ ಕೋಲ್ಕೊತಾ- ವಾರಣಾಸಿ ನಡುವನ ಜಲಮಾರ್ಗದಲ್ಲಿ ಸಾರಿಗೆ ಆರಂಭಿಸಿದೆ. ಪೆಪ್ಸಿ ಕಂಪೆನಿಯ 16 ಟ್ರಕ್‌ ಲೋಡ್‌ ಸರಕುಗಳನ್ನು ಹೊತ್ತುಕೊಂಡು ಎಂ.ವಿ.ಆರ್‌.ಎನ್‌. ಠಾಗೋರ್‌ ನೌಕೆಯು ಕೋಲ್ಕೊತ್ತಾದಿಂದ ವಾರಣಾಸಿಗೆ ತೆರಳಿದೆ.

ನೇತ್ರಾವತಿ ನದಿಯಲ್ಲಿ 78 ಕಿ.ಮೀ. ಜಲಮಾರ್ಗ
ದೇಶದಲ್ಲಿ 100 ಕ್ಕೂ ಹೆಚ್ಚು ನದಿಗಳನ್ನು ಜಲಮಾರ್ಗಗಳಾಗಿ ಪರಿವರ್ತಿಸಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಕೇಂದ್ರ ಬಂದರು ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ನೇತ್ರಾವತಿ ನದಿಯಲ್ಲಿ 78.6 ಕಿ.ಮೀ., ಮಲಪ್ರಭಾದಲ್ಲಿ 94 ಕಿ.ಮೀ., ಶರಾವತಿ ನದಿಯಲ್ಲಿ 20 ಕಿ.ಮೀ., ಕಾವೇರಿ ನದಿಯಲ್ಲಿ 324 ಕಿ.ಮೀ., ಕಬಿನಿ ನದಿಯಲ್ಲಿ 23 ಕಿ.ಮೀ. ಘಟಪ್ರಭಾ ನದಿಯಲ್ಲಿ 112 ಕಿ.ಮೀ. ಹಾಗೂ ಭೀಮಾ ನದಿಯಲ್ಲಿ 139 ಕಿ.ಮೀ. ಜಲ ಮಾರ್ಗವನ್ನು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ ನದಿಗೆ ಪಾಣೆಮಂಗಳೂರು ಸೇತುವೆ ಹಾಗೂ ಫಲ್ಗುಣಿ ನದಿಗೆ ಕುಳೂರಿನಲ್ಲಿ ಸೇತುವೆ ನಿರ್ಮಾಣವಾಗುವ ಮೊದಲು ನದಿಗಳೇ ಪ್ರಮುಖ ಸಾರಿಗೆ ಮಾರ್ಗಗಳಾಗಿದ್ದವು. ಸಾಗರ ಮಾರ್ಗದಲ್ಲಿ ಮಂಗಳೂರಿನಿಂದ ಮುಂಬಯಿಗೆ ಹಡಗುಗಳ ಸಂಚಾರವಿತ್ತು. ಮಂಗಳೂರು ಹಳೆ ಬಂದರಿನಿಂದ ಪಾಣೆಮಂಗಳೂರಿಗೆ ದೋಣಿಗಳ ಮೂಲಕ ಸರಕು ಸಾಗಣೆ ನಡೆದು ಅಲ್ಲಿಂದ ಎತ್ತಿನ ಗಾಡಿಗಳ ಮೂಲಕ ಇತರೆಡೆಗಳಿಗೆ ಸಾಗಿಸಲಾಗುತ್ತಿತ್ತು. ಸೇತುವೆಗಳು ನಿರ್ಮಾಣವಾದ ಬಳಿಕ ಜಲಮಾರ್ಗ ಮುಚ್ಚಿ ಹೋಯಿತು.

ಲಕ್ಷ ದ್ವೀಪದೊಂದಿಗೆ ಶತಮಾನಗಳಿಂದ ವಾಣಿಜ್ಯವೂ ಸಹಿತ ನಿಕಟ ಸಂಬಂಧವನ್ನು ಮಂಗಳೂರು ಹೊಂದಿದೆ. ಮಂಗಳೂರಿನ ಹಳೆ ಬಂದರಿನಲ್ಲಿ ಲಕ್ಷದ್ವೀಪಕ್ಕೆ ಸರಕುಗಳನ್ನು ಸಾಗಿಸುವ ವಾಣಿಜ್ಯ ದಕ್ಕೆ ಇದೆ. ಇಲ್ಲಿ ಲಕ್ಷ ದ್ವೀಪದಿಂದ ಬರುವ ಸರಕು ನೌಕೆಗಳು ಲಂಗರು ಹಾಕಿ ಸರಕುಗಳನ್ನು ತುಂಬಿಸಿಕೊಂಡು ಹೋಗುತ್ತಿವೆ. ಮಂಜಿ ಎಂದು ಕರೆಯಲ್ಪಡುವ ನೌಕೆಗಳ ಮೂಲಕ ಅಲ್ಲಿಂದ ವ್ಯಾಪಾರಿಗಳು ಮಂಗಳೂರು ಹಳೆ ಬಂದರಿಗೆ ಆಗಮಿಸಿ ಇಲ್ಲಿಂದ ಲಕ್ಷದ್ವೀಪಕ್ಕೆ ದಿನಂಪ್ರತಿ ಕಟ್ಟಡ ಸಾಮಗ್ರಿಗಳನ್ನು, ಸಂಬಾರು ಪದಾರ್ಥಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದರು. ಇದು ಈಗಲೂ ಅವ್ಯಾಹತವಾಗಿ ಮುಂದುವರಿದುಕೊಂಡು ಬಂದಿದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ
ಒಳನಾಡು ಜಲಸಾರಿಗೆ ಅಭಿವೃದ್ಧಿ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಸಾಗರ ಪ್ರವಾಸೋದ್ಯಮ ಇದರಲ್ಲಿ ಮುಖ್ಯವಾಗಿ ಗುರುತಿಸಲ್ಪಡುತ್ತದೆ. ದೇಶದ ಪ್ರವಾಸೋದ್ಯಮ ಕ್ಷೇತ್ರವನ್ನು ಅವಲೋಕಿಸಿದರೆ ಸಾಗರತೀರ ಪ್ರವಾಸೋದ್ಯಮ ಒಂದು ಪ್ರಮುಖ ಆದಾಯ ತರುವ ಕ್ಷೇತ್ರ. ನೇತ್ರಾವತಿ ನದಿ ಹರಿಯುತ್ತಿರುವ ಅಡ್ಯಾರ್‌ನಿಂದ ಅಳಿವೆ ಬಾಗಿಲು ವರೆಗಿನ ಹಾಗೂ ಫಲ್ಗುಣಿ ನದಿ ಹರಿಯುತ್ತಿರುವ ಗುರುಪುರದಿಂದ ತಣ್ಣೀರು ಬಾವಿಯವರೆಗಿನ ಪ್ರದೇಶದಲ್ಲಿ ಹಲವಾರು ಕಡೆಗಳಲ್ಲಿ ನದಿ ಇಕ್ಕೆಲಗಳಲ್ಲಿ ಹಿನ್ನೀರಿನಲ್ಲಿ ಸುಂದರ ಪ್ರಕೃತಿ ತಾಣಗಳಿವೆ. ಬೋಟು ಹೌಸ್‌ಗಳು, ಪ್ರವಾಸೋದ್ಯಮ ತಾಣಗಳ ಸ್ಥಾಪನೆಗೆ ಈ ಪ್ರದೇಶಗಳು ಅತ್ಯಂತ ಸೂಕ್ತವಾಗಿದೆ. ಕೇಂದ್ರ ಸರಕಾರ ಸಿಆರ್‌ ಝಡ್‌ ನಿಯಮ ಪರಿಷ್ಕರಣೆಯಲ್ಲೂ ಸಾಗರ ಪ್ರವಾಸೋದ್ಯಮಕ್ಕೆ ಪೂರಕವಾಗಿ ಕೆಲವು ರಿಯಾಯತಿಗಳನ್ನು ನೀಡಲಾಗಿದೆ. ಬೋಟ್‌ ಹೌಸ್‌ಗಳ ಜತೆಗೆ ನದಿಗಳ ಮಧ್ಯೆ ಇರುವ ಕಿರು ದ್ವೀಪಗಳು ಕೂಡ ಹಿನ್ನೀರು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಪೂರಕವಾಗಿವೆ. ಕೆಲವು ಕುದ್ರುಗಳನ್ನು ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿಗೊಳಿಸುವ ಪ್ರಯತ್ನಗಳು ನಡೆದರೂ ಕೆಲವು ಕಾರಣಗಳಿಂದ ಯಶಸ್ಸು ಕಾಣಲು ಸಾಧ್ಯವಾಗಲಿಲ್ಲ.

ನೀಲ ನಕಾಶೆ ಹೀಗಿರಲಿ
ಮಂಗಳೂರು ಸಹಿತ ಕರಾವಳಿಯಲ್ಲಿ ಜಲ ಪ್ರವಾಸೋದ್ಯಮಕ್ಕೆ ಪೂರಕವಾಗಿ ಒಳನಾಡು ಜಲಸಾರಿಗೆಯನ್ನು ರೂಪಿಸುವ ನಿಟ್ಟಿನಲ್ಲಿ ನೀಲ ನಕಾಶೆಯೊಂದು ಸಿದ್ಧಗೊಳ್ಳುವ ಆವಶ್ಯಕತೆ ಇದೆ. ಸಮಗ್ರ ಸರ್ವೆ ಕಾರ್ಯ ನಡೆದು ಹಿನ್ನೀರುಗಳಲ್ಲಿ ಯಾವುದೆಲ್ಲ ಪ್ರದೇಶಗಳು ಜಲಸಾರಿಗೆಗೆ ಪೂರಕವಾಗಿವೆ. ಇದಕ್ಕೆ ಹೊಂದಿಕೊಂಡು ಹಿನ್ನೀರು ಪ್ರವಾಸೋದ್ಯಮವನ್ನು ರೂಪಿಸಬಹುದು. ಯಾವುದೆಲ್ಲ ತಾಣಗಳನ್ನು ಅಭಿವೃದ್ಧಿ ಪಡಿಸಲು ಸಾಧ್ಯವಿದೆ, ಹೇಗೆ ವೈವಿಧ್ಯವಾಗಿ ಇವುಗಳನ್ನು ವಿನ್ಯಾಸಗೊಳಿಸಬಹುದಾಗಿದೆ ಮತ್ತು ದೇಶವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಅನುಸರಿಸಬೇಕಾದ ತಂತ್ರಗಳು ಸಹಿತ ಸಮಗ್ರ ಯೋಜನೆಯನ್ನು ನೀಲ ನಕಾಶೆಯಲ್ಲಿ ರೂಪಿಸಬಹುದಾಗಿದೆ. 

ಕೇಶವ ಕುಂದರ್‌

ಟಾಪ್ ನ್ಯೂಸ್

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.