ಸೆಂಟ್ರಲ್‌ ಮಾರ್ಕೆಟ್‌ ನಿಂದ ಹೊರಬರಲು ಸೂಕ್ತ ವ್ಯವಸ್ಥೆಯಾಗಬೇಕು


Team Udayavani, Nov 4, 2018, 12:39 PM IST

4-november-12.gif

ಮಂಗಳೂರು ನಗರ ಮಾತ್ರವಲ್ಲ ಗ್ರಾಮೀಣ ಭಾಗದ ಹೆಚ್ಚಿನ ಜನರು ಹಣ್ಣು, ತರಕಾರಿ, ಮಾಂಸ ಮತ್ತಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಸೆಂಟ್ರಲ್‌ ಮಾರ್ಕೆಟ್‌ಗೆ ಬರುತ್ತಾರೆ. ಇಲ್ಲಿ ಒಳ ಬರಲು ಮೂರು ದಾರಿಗಳಿವೆ.

1. ಲೇಡಿಗೋಷನ್‌ (ಟೌನ್‌ಹಾಲ್‌ ರಸ್ತೆ) ರಸ್ತೆ. 2. ಗಣಪತಿ ಹೈಸ್ಕೂಲ್‌ ರಸ್ತೆ (ಫೆಲಿಕ್ಸ್‌ ಪೈ ಬಜಾರ್‌ ಬಳಿ), 3. ರಾಮಕಾಂತಿ ರೂಪವಾಣಿ ಟಾಕೀಸ್‌ ಮುಖಾಂತರ ಬರಬಹು ದಾದ ರಸ್ತೆ. ಆದರೆ ಇಲ್ಲಿ ಬಂದ ಜನರ ವಾಹನಗಳಿಗೆ ಹಂಪನಕಟ್ಟೆಗೆ ಹೋಗಲು ಇರುವುದು ಲೇಡಿಗೋಷನ್‌ ಮತ್ತು ಸೆಂಟ್ರಲ್‌ ಟಾಕೀಸ್‌ ಪಕ್ಕದಲ್ಲಿರುವ ರಸ್ತೆ ಮಾತ್ರ. ಇಲ್ಲಿ ಎಲ್ಲ ಕಡೆ ನೋ ಎಂಟ್ರೀ ರಸ್ತೆಗಳೇ ಇರುವುದರಿಂದ ಸೆಂಟ್ರಲ್‌ ಮಾರುಕಟ್ಟೆಗೆ ಬಂದವರು ಹೊರ ಹೋಗಲು ಪರದಾಡುವಂತಾಗಿದೆ.

ಮಾರ್ಕೆಟ್‌ ರಸ್ತೆಯಿಂದ ಬಂದವರು ಗಣಪತಿ ರಸ್ತೆ ಸೇರುವಂತಿಲ್ಲ. ಕಾರ್‌ಸ್ಟ್ರೀಟ್‌ನಿಂದ ಬರುವವರೂ ಕಲ್ಪನಾ ಸ್ವೀಟ್‌ ಕಡೆ ಹೋಗುವಂತಿಲ್ಲ. ಒಟ್ಟಿನಲ್ಲಿ ಇಲ್ಲಿ ಒಳರಸ್ತೆಗಳಲ್ಲಿ ಸಂಚಾರಕ್ಕಿಂತ ಗೊಂದಲಗಳೇ ಹೆಚ್ಚಾಗಿವೆ. ಜತೆಗೆ ವಾಹನ ಪಾರ್ಕಿಂಗ್‌ ಸಮಸ್ಯೆ, ಬೀದಿ ಬದಿ ವ್ಯಾಪಾರಸ್ಥರ ಹಾವಳಿಯೂ ಹೆಚ್ಚಾಗಿದೆ.

ಒಟ್ಟಿನಲ್ಲಿ ಸೆಂಟ್ರಲ್‌ ಮಾರ್ಕೆಟ್‌ ಎಂಬ ಚಕ್ರವ್ಯೂಹದಿಂದ ಹೊರಬರಲು ಪಾದಚಾರಿಗಳು, ವಾಹನ ಸವಾರರು ಪರದಾಡಬೇಕಾಗಿದೆ. ಮಾರ್ಕೆಟ್‌ನಿಂದ ಮೈದಾನ (ಒಂದನೇ ಕ್ರಾಸ್‌ನಿಂದ ಒಂದು ಕ್ಲಾಕ್‌ಟವರ್‌) ರಸ್ತೆಗೆ ತಲು ಪಲು ಸಾಕಷ್ಟು ಸಾಹಸ ಪಡಬೇಕಾಗುತ್ತದೆ. ಕಾರಣ ಎರಡು ಬದಿಗಳಲ್ಲೂ ಬಿರುಸಿನ ವ್ಯಾಪಾರ ನಡೆಯುತ್ತಿರುವ ತಿನಿಸು ಹಾಗೂ ಇತರ ಅಂಗಡಿಗಳು, ಲಾರಿಗಳಿಂದ ಪಾರ್ಸೆಲ್‌ಗ‌ಳನ್ನು ಇಳಿಸುವುದು, ಪಕ್ಕದ ಅಂಗಡಿಗಳಿಗೆ ಸಾಗಿಸುವುದು, ಅದಲ್ಲದೇ ಅಂಗಡಿಗಳಿಂದ ಖರೀದಿಸಿದ ಮನೆ ಸಾಮಗ್ರಿ, ತಿನಿಸು ವಸ್ತುಗಳನ್ನು ಅವರವರ ವಾಹನಗಳಿಗೆ ಏರಿಸುವುದು, ತುಂಬಿಸುವುದು ಹೀಗೆ ಮತ್ತಿತರ ಕಾರ್ಯಗಳು ರಸ್ತೆಯಲ್ಲೇ ದಿನವೀಡಿ ಪುರುಸೊತ್ತಿಲ್ಲದ ಹಾಗೆ ನಡೆಯುತ್ತಿರುತ್ತವೆ. ಹಾಗಾಗಿ ದಿನಪೂರ್ತಿ ಲಾರಿ, ಟೆಂಪೋ, ಖಾಸಗಿ ವಾಹನಗಳು ಇಲ್ಲಿ ಯದ್ವಾತದ್ವ ಪಾರ್ಕ್‌ ಮಾಡಲಾಗಿರುತ್ತದೆ. ಹೀಗಾಗಿ ಈ ರಸ್ತೆಯಲ್ಲಿ ಹೋಗುವುದೇ ಕಷ್ಟ ಎಂಬಂತಾಗಿದೆ. ಅಲ್ಲದೇ ರಸ್ತೆಪೂರ್ತಿ ಗುಂಡಿಗಳೇ ತುಂಬಿಕೊಂಡಿದ್ದು, ತಿಳಿಯದೇ ಒಳ ಹೋದರೆ ಅಪಾಯ ಖಂಡಿತ.

ಒಟ್ಟಿನಲ್ಲಿ ಸಾವಿರಾರು ಜನರು ಬಂದುಹೋಗುವ, ಅತ್ಯಂತ ಹೆಚ್ಚಿನ ವಾಣಿಜ್ಯ ವ್ಯವಹಾರಗಳು ನಡೆಯುತ್ತಿರುವ ಸೆಂಟ್ರಲ್‌ ಮಾರ್ಕೆಟ್‌ಗೆ ಒಳ ಹೋಗುವ ಮತ್ತು ಹೊರ ಬರುವ ರಸ್ತೆಗಳನ್ನು ಸರಿಯಾಗಿ ಗುರುತಿಸಬೇಕು. ಜತೆಗೆ ಜಿಲ್ಲಾಡಳಿತ, ಟ್ರಾಫಿಕ್‌ ಪೊಲೀಸ್‌ ಹಾಗೂ ಮನಪಾ ಅಧಿಕಾರಿಗಳು ಇಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಲು ಕ್ರಮಕೈಗೊಳ್ಳಬೇಕಿದೆ.

 ಜೆ.ಎಫ್.ಡಿ’ಸೋಜಾ,
ಅತ್ತಾವರ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.