ಕರ್ಕಶ ಹಾರ್ನ್ ಬೀಳಲಿ ಕಡಿವಾಣ
Team Udayavani, Dec 23, 2018, 1:31 PM IST
ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಶಬ್ದಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ವಾಹನಗಳಿಂದಲೇ ಅಧಿ ಕ ಶಬ್ದಮಾಲಿನ್ಯ ಉಂಟಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ನಗರದಲ್ಲಿ ಸಂಚರಿಸುವ ವಾಹನಗಳು ಅನಗತ್ಯವಾಗಿ ಹಾರ್ನ್ ಬಳಕೆ ಮಾಡುತ್ತಿರುವುದು. ಇದು ಸಾರ್ವಜನಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದೆ.
ನಗರದಲ್ಲಿ ದಿನಂಪ್ರತಿ 500ಕ್ಕೂ ಹೆಚ್ಚು ಬಸ್ಗಳು ಸಂಚರಿಸುತ್ತವೆ. ಕೆಲವು ಬಸ್ಗಳಲ್ಲಿ ಕರ್ಕಶ ಹಾರ್ನ್ ಬಳಕೆ ಮಾಡಲಾಗುತ್ತಿದೆ. ಸಾರಿಗೆ ಇಲಾಖೆಯು ಸಂಬಂಧಪಟ್ಟ ಬಸ್ಗಳ ವಿರುದ್ಧ ಅನೇಕ ಬಾರಿ ಪ್ರಕರಣ ದಾಖಲು ಮಾಡಿದ್ದರೂ ಕರ್ಕಶ ಹಾರ್ನ್ ಬಳಕೆ ಕಡಿಮೆಯಾಗಲಿಲ್ಲ. ಕೆಲವೊಂದು ಬಸ್ಗಳಲ್ಲಿ ಎರಡರಿಂದ ಮೂರು ಬಗೆಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದಾಗಿ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮಾತ್ರವಲ್ಲ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರೂ ತೊಂದರೆ ಅನುಭವಿಸುತ್ತಿದ್ದಾರೆ.
ಶಾಲಾ-ಕಾಲೇಜು, ಆಸ್ಪತ್ರೆ ಸಹಿತ ಕೆಲವೊಂದು ಪ್ರದೇಶಗಳಲ್ಲಿ ವಾಹನಗಳ ಹಾರ್ನ್ ಬಳಕೆ ನಿಷೇಧಿಸಲಾಗಿದೆ. ಆದರೂ ಕೂಡ ಕೆಲವೊಂದು ವಾಹನಗಳು ಈ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ನಗರದಲ್ಲಿ ಕೆಲವೊಂದು ಶಾಲಾ ಕಾಲೇಜುಗಳು ರಸ್ತೆ ಬದಿಯಲ್ಲೇ ಇವೆ. ಹೀಗಿರುವಾಗ ರಸ್ತೆಯಲ್ಲಿ ತೆರಳುವಂತಹ ವಾಹನಗಳು ಕರ್ಕಶ ಹಾರ್ನ್ ಮಾಡುವುದರಿಂದ ತರಗತಿಯಲ್ಲಿ ಪಾಠ ಮಾಡುವ ಶಿಕ್ಷಕರಿಗೆ ಮತ್ತು ಪಾಠ ಕೇಳುವ ವಿದ್ಯಾರ್ಥಿಗಳ ಏಕಾಗ್ರತೆಗೆ ತೊಂದರೆಯಾಗುತ್ತದೆ.
ವಾಹನಗಳಲ್ಲಿ ಹಾರ್ನ್ ಬಳಕೆ ಮಾಡುವ ಸಂಬಂಧ ಕಟ್ಟುನಿಟ್ಟಿನ ಕಾನೂನು ಕ್ರಮದ ಅಗತ್ಯವಿದೆ. ಒಂದು ವೇಳೆ ಈ ನಿಯಮಗಳನ್ನು ಪಾಲನೆ ಮಾಡದ ವಾಹನಗಳ ವಿರುದ್ಧ ಸ್ಥಳದಲ್ಲಿಯೇ ದಂಡ ವಿಧಿ ಸಲು ಸಾರಿಗೆ ಇಲಾಖೆ, ಸಂಚಾರಿ ಪೊಲೀಸರು ಮುಂದಾಗಬೇಕು. ಮಂಗಳೂರು ನಗರದಲ್ಲಿ ಒಂದೆಡೆ ಕರ್ಕಶ ಹಾರ್ನ್
ಸಮಸ್ಯೆಯಾದರೆ ಮತ್ತೊಂದೆಡೆ ಬೈಕ್ಗೆ ದೋಷಪೂರಿತ ಸೈಲೆನ್ಸರ್ ಅಳವಡಿಕೆ ಮಾಡಲಾಗುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಕಠಿನ ಕಾನೂನು ಕ್ರಮದ ಅಗತ್ಯವಿದೆ. ಮೋಟಾರು ವಾಹನ ಕಾಯಿದೆಯ ಅನ್ವಯ ಇಂಥ ಬೈಕ್ ಗಳ ನೋಂದಣಿ ಪತ್ರ ಅಮಾನತುಗೊಳಿಸಿ, ವಾಹನವನ್ನು ಜಪ್ತಿ ಮಾಡಲು ಕ್ರಮ ಕೈಗೊಳ್ಳಬೇಕಿದೆ.
ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ