ಮೊಬೈಲ್‌ ಮಾರ್ಕೆಟ್‌ ಮಂಗಳೂರು ಸ್ಮಾರ್ಟ್ ನಗರಿಗೂ ಬರಲಿ


Team Udayavani, Feb 10, 2019, 6:32 AM IST

10-february-10.jpg

ಮಾರುಕಟ್ಟೆಗಳು ಹತ್ತಿರವಾಗಿರಬೇಕು, ಆರೋಗ್ಯಕರವಾದ ವಸ್ತುಗಳು ಅಲ್ಲಿ ದೊರೆಯಬೇಕು, ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದಕ್ಕಾಗಿ ಎಲ್ಲರೂ ಮಾಲ್‌ ಗಳು, ಸಾವಯವ ಸಂತೆ ಗಳ ಮೊರೆ ಹೋಗುತ್ತಿದ್ದಾರೆ. ಸ್ಮಾರ್ಟ್‌ ನಗರಿ ಮಂಗಳೂರಿನಲ್ಲೂ ಈಗ ಮಾರ್ಕೆಟ್‌ಗೆ ಹೋಗುವ ಹೆಚ್ಚಿನ ಜನರು ಸಾವಯವ ಸಂತೆ, ಮಾಲ್‌ ಗಳಿಗೆ ಹೋಗಿ ತರಕಾರಿ, ಹಣ್ಣು ಹಂಪಲುಗಳನ್ನು ಕೊಂಡು ತರುತ್ತಿದ್ದಾರೆ. ಆದರೆ ಇದಕ್ಕಾಗಿ ಹೆಚ್ಚು ಸಮಯ ಮೀಸಲಿಡಬೇಕಾಗುತ್ತದೆ. ಬ್ಯುಸಿ ಲೈಫ್ ನಲ್ಲಿ ಇದು ಕಷ್ಟ ಎನ್ನುವವರೂ ಹಲವರಿದ್ದಾರೆ. ಇದರ ಬದಲು ಒಂದು ಸಣ್ಣ ಮಾಲ್‌ ಸಾವಯವ ತರಕಾರಿಗಳನ್ನು ಹೊತ್ತು ಕೊಂಡು ಮನೆ ಮುಂದೆ ಬಂದರೆ ಹೇಗಿರುತ್ತದೆ? ಅಮೆರಿಕದ ಚಿಕಾಗೋದಲ್ಲಿ ಇಂಥ ಒಂದು ವ್ಯವಸ್ಥೆಯಿದೆ. ಸುಂದರವಾದ ಸುಸಜ್ಜಿತ ಬಸ್‌ ವೊಂದು ಸಾವಯವ ತರಕಾರಿಗಳನ್ನು ಹೊತ್ತು ಕೊಂಡು ಪೇಟೆಯ ಗಲ್ಲಿಗಲ್ಲಿಗಳಲ್ಲಿ ಸಂಚರಿಸುತ್ತದೆ. ಇದು ರೈತರಿಗೆ ಮಾತ್ರವಲ್ಲ ಅಲ್ಲಿನ ಸರಕಾರಕ್ಕೂ ಉತ್ತಮ ಲಾಭವನ್ನು ತಂದುಕೊಟ್ಟಿದೆ. ಸ್ಥಳೀಯ ಸರಕಾರಕೈಗೊಂಡಿ ರುವ ಪ್ರಶ್‌ ಮೂವ್ಸ್‌ ಮೊಬೈಲ್‌ ಮಾರ್ಕೆಟ್‌ ಯೋಜನೆಯಿಂದಾಗಿ ಗ್ರಾಮೀಣ ಭಾಗದ ರೈತರು ದೊಡ್ಡ ಮಟ್ಟಿನ ಲಾಭವನ್ನು ಪಡೆಯುತ್ತಿದ್ದಾರೆ.

ನಗರವಾಸಿಗಳಿಗೆ ಹಳ್ಳಿಯ ಉತ್ಪನ್ನಗಳು ಸುಲಭವಾಗಿ ಸಿಗುವಂತೆ ಮತ್ತು ರೈತರ ಉತ್ಪನ್ನವನ್ನು ನೇರ ಖರೀದಿಸುವಂತೆ ಮಾಡಲು ಇಲ್ಲಿನ ಸರ ಕಾರ ಕೈಗೊಂಡ ಮಹತ್ವದ ಯೋಜನೆ ಪ್ರಶ್‌ ಮೂವ್ಸ್‌ ಮೊಬೈಲ್‌ ಮಾರ್ಕೆಟ್‌. ನಮ್ಮ ನಗರಗಳ ಬಸ್‌ಗಳಲ್ಲಿ ಜನರು ಸಂಚರಿಸಿದರೆ ಅಮೆರಿಕದ ಚಿಕಾಗೊ ನಗರದ ಗಲ್ಲಿ ಗಲ್ಲಿಗಳಲ್ಲಿ ತರಕಾರಿಗಳು ಸಂಚರಿಸುತ್ತವೆ. ಅಂದರೆ ಇದರರ್ಥ ಇಲ್ಲಿ ರೈತರೇ ಬೆಳೆದ ಉತ್ಪನ್ನಗಳ ಗ್ರಾಹಕರು ಸುಲಭವಾಗಿ ಖರೀದಿಸಲು ಸಹಾಯ ಮಾಡುವಂತೆ ಮಾರುಕಟ್ಟೆ ದೂರವನ್ನು ಕಡಿಮೆಗೊಳಿಸುವ ಸಲುವಾಗಿ ಬಸ್‌ ಗಳನ್ನು ಮಾರುಕಟ್ಟೆ ರೀತಿಯಲ್ಲಿ ಬದಲಾಯಿಸಿ ಮೊಬೈಲ್‌ ರೈತರ ಮಾರುಕಟ್ಟೆಯಾಗಿ ಬಳಸುತ್ತದೆ. ಈ ಬಸ್‌ಗಳು ಶಾಲೆ, ಸಮುದಾಯ ಮತ್ತು ಆರೋಗ್ಯ ಕೇಂದ್ರಗಳಿಗೆ ಉತ್ಪನ್ನಗಳನ್ನು ತರುವ ಮೂಲಕ ಜನರ ಸಮಯವನ್ನು ಉಳಿತಾಯ ಮಾಡುತ್ತದೆ. ಹಣ್ಣು ತರಕಾರಿಗಳು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪುವುದರಿಂದ ಮಾರುಕಟ್ಟೆಯ ಬೆಲೆಗಿಂತ ಕಡಿಮೆಯಾಗಿದೆ. 

ಈ ತಾಜಾ ಮೂವ್ಸ್  ಆರೋಗ್ಯಕರ ಆಹಾರದ ಆಯ್ಕೆ ಮಾಡಲು ಮತ್ತು ರೈತರನ್ನು ಪ್ರೋತ್ಸಾಹಿಸಲು ಸಹಕಾರಿಯಾಗಿದೆ. ಮಂಗಳೂರಿನಲ್ಲಿ ಈಗಾಗಲೇ ಸಾವಯವ ಸಂತೆ, ಸಾವಯವ ತರಕಾರಿಯನ್ನು ಕರೆ ಮಾಡಿ ಮನೆ ಬಾಗಿಲಿಗೆ ತರುವಂತ ವ್ಯವಸ್ಥೆ ಇದ್ದರೂ ಬಸ್‌ ಗಳ ಮೂಲಕ ತರ ಕಾರಿ ಮನೆ ಬಾಗಿಲಿಗೆ ಬರುವ ಸೌಲಭ್ಯವಿಲ್ಲ. ಸ್ಥಳೀಯ ಆಡ ಳಿತದ ಮೂಲಕ ಇದು ಜಾರಿಯಾದರೆ ಸಾರ್ವಜನಿಕರಿಗೆ ಅನುಕೂಲವಾಗುವುದು, ನಗರ, ಗ್ರಾಮೀಣ ವಲಯದ ರೈತರಿಗೂ ಪ್ರೋತ್ಸಾಹ ಸಿಕ್ಕಿದಂತಾಗುವುದು ಮಾತ್ರವಲ್ಲ ಆಡಳಿತಕ್ಕೂ ನಿರ್ದಿಷ್ಟ ಆದಾಯ ಕೈಸೇರುವುದು. ಹೀಗಾಗಿ ಇದೊಂದು ಆಶಾದಾಯಕ ಯೋಜನೆಯಾಗುವುದರಲ್ಲಿ ಸಂದೇಹವಿಲ್ಲ.

ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.