ಸ್ಮಾರ್ಟ್‌ ನಗರಿಗೂ ಬರಲಿ ಗೆರಿಲ್ಲಾ ತೋಟಗಾರಿಕೆ


Team Udayavani, Mar 10, 2019, 9:27 AM IST

10-march-11.jpg

ಸ್ವಲ್ಪ ಜಾಗವಿದ್ದರೂ ಸಾಕು ಅಲ್ಲೊಂದು ಫ‌ಲ ಪುಷ್ಪಗಳ ಗಿಡಗಳನ್ನು ನೆಟ್ಟು ಪೋಷಣೆ ಮಾಡುವುದು ಕೆಲವರ ನೆಚ್ಚಿನ ಹವ್ಯಾಸ. ನಗರ ಸೌಂದರ್ಯ ಹೆಚ್ಚಿಸುವಲ್ಲೂ ನಾವು ಈ ನೀತಿಯನ್ನು ಅನುಸರಿಸಿದರೆ ನಗರ ಹೆಚ್ಚು ಸುಂದರ, ಸ್ವಚ್ಛವಾಗಲು, ಕಾಂಕ್ರೀಟ್‌ ಕಾಡಿನಲ್ಲೂ ಹಚ್ಚಹಸುರು ನಳನಳಿಸಲು ಸಾಧ್ಯವಿದೆ.  ಕಾಂಕ್ರೀಟ್‌ ಕಾಡುಗಳ ಮಧ್ಯೆ ಇರುವ ಸಣ್ಣ ಪುಟ್ಟ ಜಾಗಗಳು, ಇಂಟರ್‌ ಲಾಕ್‌ ಹಾದಿಯ ನಡುವೆ ಅಲ್ಲೊಂದು ಇಲ್ಲೊಂದು ಸಿಗುವ ಜಾಗಗಳಲ್ಲಿ ತೋಟಗಾರಿಕೆಯನ್ನು ನಡೆಸಬಹುದು ಎಂಬುದನ್ನು ಅಮೆರಿಕಾದ ಲಾಸ್‌ ಏಂಜಲೀಸ್‌ ನಗರ ನಿವಾಸಿಗಳು ಮಾಡಿ ತೋರಿಸಿದ್ದಾರೆ. ಅಲ್ಲಿ  ಅವರು ಮೊರೆ ಹೋಗಿದ್ದು ಗೆರಿಲ್ಲಾ ತೋಟಗಾರಿಕೆ ನೀತಿಗೆ.

ಏನಿದು ಗೆರಿಲ್ಲಾ ತೋಟಗಾರಿಕೆ?
ಗೆರಿಲ್ಲಾ ತೋಟಗಾರಿಕೆ ಎಂಬುದು ಭೂಮಿಯ ಮೇಲೆ ನಡೆಸಬಹುದಾದ ತೋಟಗಾರಿಕೆ ಪ್ರಕ್ರಿಯೆಯಾಗಿದ್ದು, ತೋಟಗಾರರು ಬೆಳೆಸಿಕೊಳ್ಳುವಂತಹ ಕಾನೂನುಬದ್ಧ ಹಕ್ಕುಗಳನ್ನು ಹೊಂದಿಲ್ಲ. ತೋಟಗಾರಿಕೆಯ ಬಗ್ಗೆ ಆಸಕ್ತಿ ಹೊಂದಿರುವ ಗುಂಪೊಂದು ಗೆರಿಲ್ಲಾ ತೋಟಗಾರಿಕೆ ನಡೆಸುವ ಹೊಣೆ ಹೊತ್ತಿರುತ್ತದೆ. ಕೈಬಿಟ್ಟ ಸ್ಥಳಗಳು, ಕಾಳಜಿ ವಹಿಸದ ಪ್ರದೇಶಗಳು ಅಥವಾ ಖಾಸಗಿ ಆಸ್ತಿಯು ಗೆರಿಲ್ಲಾ ತೋಟಗಾರಿಕೆಗೆ ಒಳಗೊಳ್ಳುತ್ತದೆ. ಉದ್ಯಾನವನದ ಗೆರಿಲ್ಲಾ ಎಂದು ಕರೆಯಲ್ಪಡುವ ಭೂಮಿ ಸಾಮಾನ್ಯವಾಗಿ ಕಾನೂನುಬದ್ಧ ಮಾಲಕರಿಂದ ನಿರ್ಲಕ್ಷಿಸಲ್ಪಟ್ಟ ಕಾರಣ ಇಲ್ಲಿ ಸಸ್ಯಗಳನ್ನು ಬೆಳೆಸಲು ಗೆರಿಲ್ಲಾ ತೋಟಗಾರರು ಆ ಭೂಮಿಯನ್ನು ಬಳಸುತ್ತಾರೆ. ಸೌಂದರ್ಯದ ಉದ್ದೇಶಗಳಿಗಾಗಿ ಹೂವು, ಆಹಾರ ಬೆಳೆಗಳು ಅಥವಾ ಉಪಯೋಗಕಾರಿ ಸಸ್ಯಗಳನ್ನು ನೆಡಲು, ಸಂರಕ್ಷಿಸಲು ಕಾಳಜಿ ವಹಿಸುತ್ತಾರೆ. ನಿರ್ಲಕ್ಷಿಸಲ್ಪಟ್ಟ ಜಾಗವೇ ಆಗಬೇಕೆಂದಿಲ್ಲ. ಉಪಯೋಗಕ್ಕೆ ಬಾರದ ವಾಹನಗಳು, ಇನ್ನಿತರ ಅನಗತ್ಯ ವಸ್ತುಗಳನ್ನು ಬಳಸಿಯೂ ತೋಟಗಾರಿಕೆ ನಡೆಸಬಹುದು ಎಂಬುದನ್ನು ಇವರು ಮಾಡಿ ತೋರಿಸಿದ್ದಾರೆ.

ಗೆರಿಲ್ಲಾ ತೋಟಗಾರಿಕೆ ಎಂಬುದು ಕೇವಲ ಅಮೆರಿಕದಲ್ಲಿ ಮಾತ್ರವಲ್ಲ ವಿಶ್ವದ ಅನೇಕ ಕಡೆಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ರಾತ್ರಿ ಹಗಲೆನ್ನದೆ ಕಾರ್ಯ ನಿರ್ವಹಿಸುವ ಸ್ವಯಂ ಸೇವಕರೂ ಇದ್ದಾರೆ. ಇದರಲ್ಲಿ ಹೆಚ್ಚಾಗಿ ಉನ್ನತ ಹುದ್ದೆಯಲ್ಲಿರುವ ವರೂ ತಮ್ಮ ತಮ್ಮ ನಗರವನ್ನೂ ರೂಪಿಸಲು ಗೆರಿಲ್ಲಾ ತೋಟಗಾರಿಕೆಯ ಮೂಲಕ ಪ್ರಯತ್ನಿಸುತ್ತಿದ್ದಾರೆ.

ಸ್ಮಾರ್ಟ್‌ ನಗರಿಗೂ ಬರಲಿ
ಮಂಗಳೂರಿನಲ್ಲಿ ಕೆಲವೊಂದು ಸ್ವಯಂ ಸೇವಕ ತಂಡಗಳು ಈ ಕೆಲಸವನ್ನೂ ಮಾಡುತ್ತಿವೆ. ಇದು ಇನ್ನಷ್ಟು ಪ್ರಭಾವಗೊಳ್ಳಬೇಕು, ಸರಕಾರದಿಂದ ಪ್ರೋತ್ಸಾಹ ಸಿಗಬೇಕು. ಹೀಗಾಗಿ ಗೆರಿಲ್ಲಾ ತೋಟಗಾರಿಕಾ ನಿರ್ಮಾಣ ತಂಡ ಆಸಕ್ತ ಜನರನ್ನು ಸೇರಿಸಿ ಸ್ಥಳೀಯಾಡಳಿತವೇ ಕಟ್ಟಿಕೊಳ್ಳಬೇಕಿದೆ. ಜತಗೆ ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವ ಕ್ರಮಕೈಗೊಂಡರೆ ನಗರದಲ್ಲಿ ಅವ್ಯವಸ್ಥಿತ ಸ್ಥಳಗಳು, ನಿರ್ಲಕ್ಷಿಸಲ್ಪಟ್ಟ ಪ್ರದೇಶಗಳು, ರಸ್ತೆ ಬದಿ, ರಸ್ತೆ ಮಧ್ಯೆ ಇರುವ ಡಿವೈಡರ್‌ ಗಳನ್ನು ಇನ್ನಷ್ಟು ಆಕರ್ಷಕಗೊಳಿಸಲು ಪ್ರಯತ್ನಿಸಬಹುದು.

ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.