ಎಲೆ ಒಂದಾದರೂ ಗುಣ ಹಲವು ಆರೋಗ್ಯ ವರ್ಧಕ ಒಂದೆಲಗ


Team Udayavani, Feb 28, 2017, 9:05 AM IST

Thimare-26-2.jpg

ಒಂದೆಲಗ ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ. ಅದು ಎಲೆ ಒಂದಾದರೂ ಗುಣ ಹಲವು ಎಂಬಂತೆ ಆರೋಗ್ಯ ವರ್ಧಕವಂತೂ ಹೌದು. ಸಾಮಾನ್ಯವಾಗಿ ಒಂದೆಲಗವು ಹಚ್ಚಹಸುರಿನಿಂದ ಕೂಡಿ, ಉರುಟುರುಟಾದ ಎಲೆ ಹೊಂದಿರುತ್ತದೆ. ಜೌಗು ಪ್ರದೇಶಗಳಲ್ಲಿ  ಹೇರಳವಾಗಿ ಬೆಳೆಯುವ ಇದು ಮೂರರಿಂದ ನಾಲ್ಕು ಅಂಗುಲಗಳಷ್ಟು ಎತ್ತರಕ್ಕೂ ಹಬ್ಬಬಲ್ಲುದು. ಒಂದೆಲಗದ ಮೂಲ ಏಷ್ಯಾ ಎಂದು ಗುರುತಿಸಲಾಗಿದೆ. ಸುಶ್ರುತ ಸಂಹಿತೆಧಿಯಲ್ಲಿಯೂ ಒಂದೆಲಗದ ಉಲ್ಲೇಖವಿದ್ದು, ಆಹಾರ, ಬ್ರಾಹ್ಮಿ ಔಷಧವಾಗಿಯೂ ಇದನ್ನು ಉಪಯೋಗಿಸಲಾಗುತ್ತದೆ. ಭಾರತವಲ್ಲದೆ ದಕ್ಷಿಣ ಆಫ್ರಿಕಾ, ಚೀನಾಗಳಲ್ಲೂ ಸಾಂಪ್ರದಾಯಿಕ ಔಷಧವಾಗಿ ಬಳಸುತ್ತಾರೆ.

ಹಲವು ನಾಮಧೇಯ
ವೈಜ್ಞಾನಿಕವಾಗಿ ‘ಸೆಂಟಿಲ್ಲಾ ಏಸಿಯಾಟಿಕ್‌’ (centella asiatica) ಎಂದು ಕರೆಯಿಸಿಕೊಳ್ಳುವ ಇದು ವಿವಿಧ ಭಾಷೆಗಳಲ್ಲಿ  ಬೇರೆ ಬೇರೆ ಹೆಸರನ್ನು ಹೊಂದಿದೆ. ಕನ್ನಡದಲ್ಲಿ ಒಂದೆಲಗ, ಸಂಸ್ಕೃತದಲ್ಲಿ ಮಂಡೂಕಪರ್ಣಿ, ಹಿಂದಿಯಲ್ಲಿ ಬ್ರಾಹ್ಮಿ, ತುಳುವಿನಲ್ಲಿ ತಿಮರೆ, ಆಡುಭಾಷೆಯಲ್ಲಿ ಉರಗೆ, ಕೊಂಕಣಿ, ಮರಾಠಿ ಭಾಷೆಗಳಲ್ಲಿ ಕರಾನ್ನೊ, ತೆಲುಗಿನಲ್ಲಿ ಸರಸ್ವತೀ ಇವುಗಳಲ್ಲದೆ ವಲ್ಲಾಡಿ, ನುಂಡೂಕ, ದಿವ್ಯಾ, ಪರ್ಣಿ, ಏಕಪಾನಿ ಇತ್ಯಾದಿ ಹೆಸರುಗಳಿಂದಲೂ ಕರೆಯಲಾಗುತ್ತದೆ. ಒಂದೆಲಗ ತನ್ನಷ್ಟಕ್ಕೇ ಹುಟ್ಟಿ ಬೆಳೆಯುತ್ತದೆ. ಇದನ್ನು ನಾಟಿಗೈದು ಕೃಷಿ ಮಾಡುವ ಕ್ರಮ ಸಾಮಾನ್ಯವಾಗಿ ಇಲ್ಲ. ಧಾರಾಳ ನೀರಿನ ಆಶ್ರಯವುಳ್ಳ ನೆರಳು ಮತ್ತು ತಂಪಿನ ಪ್ರದೇಶಗಳಲ್ಲಿ  ಮಣ್ಣಿನಲ್ಲಿರುವ ಸತ್ವ ಹೀರಿ ಬೆಳೆಯುತ್ತದೆ.

ಔಷಧೀಯ ಗುಣಗಳ ಆಗರ 
ಒಂದೆಲಗದಲ್ಲಿ ಔಷಧೀಯ ಗುಣವಿರುವುದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಇದರಲ್ಲಿರುವ ಬೆಕೊಸೈಡ್‌ ಎ ಮತ್ತು ಬಿ ರಾಸಾಯನಿಕವು ಮೆದುಳಿನಲ್ಲಿರುವ ನೆನಪು ಶಕ್ತಿಗೆ ಸಂಬಂಧಿಸಿದ ಜೀವಕೋಶಗಳಿಗೆ ಪುನಶ್ಚೇತನ ನೀಡುವುದು. 

ಬೇಸಗೆಯಲ್ಲಿ ದೇಹ ತಂಪಾಗಿಸಲು ಊಟದೊಂದಿಗೆ ಒಂದೆಲಗದ ಚಟ್ನಿ ಸೇವಿಸುವುದು ಉತ್ತಮ.

ಕೆಮ್ಮು, ಉಸಿರಾಟದ ತೊಂದರೆ ಇರುವವರಿಗೆ ಇದರ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ಸೇವಿಸಲು ನೀಡುತ್ತಾರೆ. 

ಮಕ್ಕಳು 48 ದಿನಗಳ ಕಾಲ ಬೆಳಗ್ಗೆ ಪ್ರತಿದಿನ ಖಾಲಿ ಹೊಟ್ಟೆಗೆ ಒಂದೆಲಗದ ಎರಡೆರಡು ಎಲೆಗಳನ್ನು ತಿನ್ನುವುದರಿಂದ ಅವರ ಜ್ಞಾಪಕಶಕ್ತಿ ಹೆಚ್ಚುತ್ತದೆ. 

ನಿದ್ರಾಹೀನತೆ ಇರುವವರು ಒಂದೆಲಗದಿಂದ ತಯಾರಿಸಿದ ಗುಳಿಗೆಗಳನ್ನು ಸೇವಿಸುವುದರಿಂದ ಹಾಯಾಗಿ ನಿದ್ರಿಸಬಹುದು. 

ಒಂದೆಲಗದ ತೈಲವೂ ನಿದ್ರಾಹೀನತೆ ನಿವಾರಣೆಗೆ ಸಹಕಾರಿ. ನರದೌರ್ಬಲ್ಯ, ಆತಂಕ, ಒತ್ತಡ ಹಾಗೂ ಸಾಮಾನ್ಯ ತಲೆನೋವು ಗುಣವಾಗಲು ಒಂದೆಲಗದ ಕಷಾಯ ಹಿತಕರ. 

ಅಪೌಷ್ಟಿಕತೆ ಹಾಗೂ ಪಿತ್ತದೋಷದಿಂದ ಕೂದಲು ಉದುರುವುದು, ಬಿಳಿಯಾಗುವುದನ್ನು ತಡೆಯಲು ಒಂದೆಲಗದ ಎಲೆ ಸಹಿತ ಬಳ್ಳಿಯನ್ನು ತೊಳೆದು, ಅರೆದು ಅದರ ರಸಕ್ಕೆ ಸ್ವಲ್ಪ ಜೇನು ಮತ್ತು ಹಸುವಿನ ತುಪ್ಪ ಬೆರೆಸಿ ನಿತ್ಯ ಖಾಲಿಹೊಟ್ಟೆಗೆ ಸೇವಿಸುವುದು ಒಳ್ಳೆಯದು. 

ಬಾಣಂತಿಯರಿಗೆ ಒಂದೆಲಗವನ್ನು ಒಣಗಿಸಿ ಹುಡಿ ಮಾಡಿ, ಜೀರಿಗೆ ಪುಡಿಯೊಂದಿಗೆ ಹಾಲಿನಲ್ಲಿ ಬೆರೆಸಿ ಸೇವಿಸಲು ನೀಡುವುದರಿಂದ ಎದೆಹಾಲು ವೃದ್ಧಿಸುತ್ತದೆ. 

ಉರಿಮೂತ್ರ, ಮೂತ್ರಕಟ್ಟು ಉಂಟಾದಾಗ ಒಂದು ಕಪ್‌ ಎಳನೀರಿಗೆ 4 ಚಮಚ ಒಂದೆಲಗದ ರಸ, ಅರ್ಧ ಚಮಚ ಕೊತ್ತಂಬರಿ ಬೀಜದ ಹುಡಿ ಬೆರೆಸಿ ಕುಡಿದರೆ ಶಮನವಾಗುವುದು.

ಮಲಬದ್ಧತೆಯಿಂದ ಬಳಲುವವರು ಒಂದೆಲಗದಿಂದ‌ ತಯಾರಿಸಿದ ಪಲ್ಯ ಅಥವಾ ಚಟ್ನಿ ಸೇವಿಸಿದರೆ ಉತ್ತಮ.

ಒಂದೆಲಗದ ಪಲ್ಯ, ತಂಬುಳಿ, ಚಟ್ನಿ, ಸಲಾಡ್‌ ಬಲು ರುಚಿ. ಅಲ್ಲದೆ ಚಾ, ಕಾಫಿಯ ಬದಲಾಗಿ ಒಂದೆಲಗದ ಪುಡಿಯಿಂದ ಕಷಾಯ ತಯಾರಿಸಿ ಸೇವಿಸುವವರೂ ಇದ್ದಾರೆ. ಬೇಸಗೆಯಲ್ಲಿ  ಇದರ ಜ್ಯೂಸ್‌ ಆರೋಗಕ್ಕೆ ಹಿತಕರ. 

– ಗಣೇಶ ಕುಳಮರ್ವ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.