ಕಟ್ಟುಮಸ್ತಾದ ದೇಹಕ್ಕೆ ವ್ಯಾಯಮ


Team Udayavani, Jan 22, 2019, 8:35 AM IST

sudi-6.jpg

ಕಟ್ಟುಮಸ್ತಾದ ದೇಹವಿರಬೇಕು ಎಂಬುದು ಬಹುತೇಕ ಎಲ್ಲ ಯುವಕರ ಬಯಕೆ. ಕಟ್ಟುಮಸ್ತಾದ ದೇಹವನ್ನು ಪಡೆಯುವುದರ ಮೂಲಕ ಆರೋಗ್ಯವಾಗಿರುವುದು ಕೂಡ ಬಹಳ ಮುಖ್ಯ. ಆದರೆ ಇದು ಅಷ್ಟು ಸುಲಭವಲ್ಲ. ಸತತ ವ್ಯಾಯಾಮ, ಸೂಕ್ತ ಆಹಾರ, ನಿದ್ರೆ ಕೂಡ ಇಲ್ಲಿ ಬಹುಮುಖ್ಯ. ಎದೆ, ಕೈಕಾಲುಗಳು ಮತ್ತು ಭುಜದ ಸ್ನಾಯುಗಳನ್ನು ಹುರಿಗಟ್ಟಿಸುವ ಮೂಲಕ ಸುಂದರ ಶರೀರವನ್ನು ಪಡೆಯಬಹುದು.

ಇದಕ್ಕಾಗಿ ಅತ್ಯುತ್ತಮ ವ್ಯಾಯಾಮಗಳು

•ಬಸ್ಕಿ
ತೊಡೆ ಮತ್ತು ಮೀನಖಂಡಗಳ ಸ್ನಾಯುಗಳನ್ನು ಹುರಿಗಟ್ಟಿಸಲು ಬಸ್ಕಿ, ತೂಕದೊಂದಿಗೆ ಬಸ್ಕಿ ನೆರವಾಗುತ್ತದೆ. ಬಸ್ಕಿಯಲ್ಲಿ ಯಾವುದೇ ತೂಕವಿಲ್ಲದೇ ಕೇವಲ ಕೈಗಳನ್ನು ಭೂಮಿಗೆ ಸಮಾನಾಂತರವಾಗಿ ಚಾಚುವ ಮೂಲಕ, ಸರಳ ತೂಕವನ್ನು ಹಿಡಿಯುವ ಮೂಲಕ ಉತ್ತಮ ವ್ಯಾಯಾಮ ದೊರಕುತ್ತದೆ. ತೂಕದೊಂದಿಗಿನ ಬಸ್ಕಿಯಲ್ಲಿ ಮಾತ್ರ ಹೆಚ್ಚಿನ ತೂಕದೊಂದಿಗೆ ನಿಲ್ಲುವ ಮೂಲಕ ತೊಡೆ ಮತ್ತು ಮೀನಖಂಡಗಳ ಸ್ನಾಯುಗಳು ಕೊಂಚ ಹೆಚ್ಚಿನ ಸೆಳೆತ ಪಡೆಯುತ್ತವೆ.

• ಅಲ್ಪದೂರವನ್ನು ಅತಿವೇಗವಾಗಿ ಕ್ರಮಿಸುವುದು
ದೇಹದ ಎಲ್ಲ ಸ್ನಾಯುಗಳಿಗೂ ಪೂರ್ಣ ಪ್ರಮಾಣದ ಸೆಳೆತ ನೀಡಲು ಸ್ಪ್ರಿಂಟ್ ಓಟ ಅತ್ಯುತ್ತಮವಾಗಿದೆ. ಆದರೆ ಈ ಓಟಕ್ಕೂ ಮೊದಲು ಶರೀರ ಸಂಪೂರ್ಣವಾಗಿ ಬೆಚ್ಚಗಾಗಿರುವುದು, ಎಲ್ಲ ಸೆಳೆತದ ವ್ಯಾಯಾಮಗಳನ್ನು ಪೂರ್ಣಗೊಳಿಸಿರುವುದು ಮುಖ್ಯ. ದಿನದ ವ್ಯಾಯಾಮದ ಕೊನೆಯ ಹಂತದಲ್ಲಿ ಈ ಓಟವನ್ನು ಓಡಿ ಶರೀರವನ್ನು ಪೂರ್ಣವಾಗಿ ದಣಿಸಿ ಬಳಿಕ ವಿಶ್ರಾಂತಿ ಪಡೆಯುವುದು ಆರೋಗ್ಯಕರ.

•  ಕಡಿಮೆ ತೂಕವನ್ನು ಬಳಸುವ ವ್ಯಾಯಾಮಗಳು
ಹೆಚ್ಚು ತೂಕವನ್ನು ಬಳಸಿ ಹತ್ತು ಬಾರಿ ಮಾಡುವ ವ್ಯಾಯಾಮಕ್ಕಿಂತ ಕಡಿಮೆ ತೂಕ ಬಳಸಿ ಪ್ರತಿಸಲ ಹತ್ತರಂತೆ ಐದು ಅಥವಾ ಹತ್ತು ಬಾರಿ ಪುನರಾವರ್ತಿಸುವುದರಿಂದ ಸ್ನಾಯುಗಳು ಹೆಚ್ಚು ಹುರಿಗಟ್ಟುತ್ತವೆ.

• ಸರಿಯಾಗಿ ನೀರು ಸೇವಿಸಿ
ದ್ರವ ಆಹಾರ ಮತ್ತು ನೀರನ್ನು ಹೆಚ್ಚು ಸೇವಿಸುವುದರಿಂದ ದೇಹದಾಡ್ಯರ್ ಮತ್ತು ಸ್ನಾಯುಗಳ ಬೆಳವಣಿಗೆ ಸದೃಢವಾಗಿ ಆಗುತ್ತದೆ. ದಿನವಿಡೀ ತುಂಬಾ ನೀರು ಕುಡಿಯಿರಿ. ಇದರಿಂದ ವ್ಯಾಯಾಮದ ವೇಳೆ ನಿರ್ಜಲೀಕರಣವಾಗುವುದು ತಪ್ಪುತ್ತದೆ. ವ್ಯಾಯಾಮದ ವೇಳೆ ಪ್ರತೀ 10- 20 ನಿಮಿಷಕ್ಕೊಮ್ಮೆ ನೀರು ಕುಡಿಯಿರಿ. ನಿರ್ಜಲೀಕರಣವಾದರೆ ಅದು ನಿಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ.

ಸ್ನಾಯುಗಳ ಬೆಳವಣಿಗೆಗೆ ಸೇವಿಸಬೇಕಾದ ಆಹಾರಗಳು
ಕೆಂಪು ಮಾಂಸದಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಇದು ಮಾಂಸಖಂಡಗಳ ಬೆಳವಣಿಗೆಗೆ ಮುಖ್ಯ. ದೇಹವನ್ನು ಕಟ್ಟು ಮಸ್ತಾಗಿಸಲು ಮೊಟ್ಟೆ ಕೂಡ ಮುಖ್ಯ. ವ್ಯಾಯಾಮದೊಂದಿಗೆ ಆಹಾರದಲ್ಲಿ ಪ್ರೋಟೀನ್‌ಗೆ ಹೆಚ್ಚಿನ ಆದ್ಯತೆ ಕೊಟ್ಟಾಗ ಕಟ್ಟುಮಸ್ತಾದ ದೇಹವನ್ನು ಪಡೆಯಲು ಸಾಧ್ಯವಿದೆ.

••ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.