ತೂಕ ಇಳಿಕೆಗೆ ಉತ್ತಮ ದೇಸಿ ಆಹಾರ


Team Udayavani, Mar 5, 2019, 5:26 AM IST

weght.jpg

ತೂಕ ಇಳಿಸಿಕೊಳ್ಳುವುದು ಅನೇಕರಿಗೆ ಹೋರಾಟದ ವಿಷಯ. ಇದಕ್ಕಾಗಿ ವ್ಯಾಯಮದ ಜತೆಗೆ ಡಯೆಟ್‌ ಕೂಡ ಅನುಸರಿಸಬೇಕಾಗುತ್ತದೆ. ಹೆಚ್ಚು ತೂಕ ಇಳಿಸಬೇಕು ಹಾಗೂ ಸುಂದರವಾಗಿ ಕಾಣಬೇಕು ಎಂಬ ಕಾರಣಕ್ಕೆ ಇಷ್ಟವಾದ ಆಹಾರಗಳನ್ನು ತ್ಯಜಿಸಿ ಪೋಷಕಾಂಶವುಳ್ಳ ತೂಕ ಇಳಿಕೆಗೆ ಪೂರಕವಾಗುವ ಆಹಾರಗಳನ್ನು ಸೇವಿಸುವುದು ರೂಢಿಸಿಕೊಳ್ಳಬೇಕಾಗುತ್ತದೆ.

ಇಂತಹ ಡಯೆಟ್‌ ಪಾಲಿಸುವವರಿಗೆ ಇಲ್ಲಿದೆ ಇನ್ನೊಂದು ಮಾರ್ಗ. ಲೋಕ್ಯಾಲೋರಿ ಇರುವ ದೇಸಿ ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿದರೆ ದೇಹದ ತೂಕ ಬೇಗನೇ, ಆರೋಗ್ಯಕರವಾಗಿ ಇಳಿಸಿಕೊಳ್ಳಬಹುದು.

· ಅವಲಕ್ಕಿ
ಅವಲಕ್ಕಿ ಹಗುರ ಮತ್ತು ಪೋಷಕಾಂಶ ಯುಕ್ತ ಆಹಾರ. ಪ್ರತಿದಿನ ಅವಲಕ್ಕಿ ಯಿಂದ ತಯಾರಿಸಿದ ಆಹಾರವನ್ನು ಬ್ರೇಕ್‌ಫಾಸ್ಟ್‌ ಆಗಿ ಸೇವಿಸಬಹುದು. ಅಕ್ಕಿಯಿಂದ ತಯಾರಿಸಲ್ಪಟ್ಟ ಅವಲಕ್ಕಿ ಯಲ್ಲಿ ಕಬ್ಬಿಣಾಂಶ, ಅಗತ್ಯವಿರುವ ಫೊಲೆಟ್‌ ಅಂಶ ಹಾಗೂ ಕಾಬೊ ಹೈಡ್ರೇಟ್‌ ಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ಚಯಾಪಚಯ ಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಅವಲಕ್ಕಿಯಿಂದ ತಯಾರಿಸಿದ ಆಹಾರಕ್ಕೆ ಪ್ರೋಟಿನ್‌ಯುಕ್ತ ಪದಾರ್ಥಗಳನ್ನು ಸೇವಿಸಿ ಇನ್ನಷ್ಟು ಆರೋಗ್ಯಕರವಾಗಿ ಮಾಡಬಹುದು. ಹೊಟ್ಟೆಯ ಕೊಬ್ಬಿನಾಂಶವನ್ನು ಕಡಿಮೆ ಗೊಳಿಸಬಲ್ಲ ಕ್ಯಾರೆಟ್‌, ಪಾಲಕ್‌ ಇದರೊಂದಿಗೆ ಸೇರಿಸಿಕೊಳ್ಳಬಹುದು.

· ಕಿಚಡಿ
ಆರೋಗ್ಯದಲ್ಲಿ ಏರುಪೇರಾದಾಗ ಕಿಚಡಿ ಸೇವಿಸುವುದು ಸಾಮಾನ್ಯ. ಇನ್ನು ಬೇಗನೇ ತೂಕ ಇಳಿಸಿಕೊಳ್ಳ ಬಯಸುವವರಿಗೆ ಕಿಚಡಿ ಹೇಳಿಮಾಡಿಸಿದ ಆಹಾರ. ಇದು ಕೊಬ್ಬಿನಾಂಶದ ವಿರುದ್ಧ ಹೋರಾಡುವ ಫೈಬರ್‌, ವಿಟಮಿನ್‌ ಸಿ, ಮ್ಯಾಗ್ನೇಶಿಯಂ ಹಾಗೂ ಪೋಟಾಷಿಯಂ ಅಂಶಗಳನ್ನು ಹೊಂದಿದೆ. ಇದು ಬಹುಬೇಗನೇ ಜೀರ್ಣವಾಗುವುದಲ್ಲದೇ ಕೊಲೆಸ್ಟ್ರಾಲ್‌ ಕಡಿಮೆಗೊಳಿಸುವಂತೆ ಪ್ರೋಟಿನ್‌ ಒಳಗೊಂಡಿದೆ. ತೂಕ ಇಳಿಸುವಿಕೆಯೊಂದಿಗೆ
ಹೃದಯದ ಆರೋಗ್ಯವನ್ನು ಇದು ಕಾಪಾಡುತ್ತದೆ.

· ಡೋಕ್ಲಾ
ಗುಜರಾತಿನ ಪ್ರಮುಖ ಆಹಾರಗಳಲ್ಲಿ ಒಂದಾಗಿರುವ ಡೋಕ್ಲಾವನ್ನು ಬೆಳಗ್ಗಿನ ಉಪಹಾರ, ಪ್ರಮುಖ ಆಹಾರ, ಸೈಡ್‌ ಡಿಶ್‌, ಅಥವಾ ಸ್ನಾಕ್‌ ಆಹಾರವಾಗಿಯೂ ಸೇವಿಸಬಹುದು. ತೂಕ ಇಳಿಸಿಕೊಳ್ಳಲು ಇದು ಅತ್ಯುತ್ತಮವಾದ ಆಹಾರ. ಕಡಲೇಹಿಟ್ಟಿನಿಂದ ಮಾಡಲ್ಪಡುವ ಡೋಕ್ಲಾದಲ್ಲಿ ಕೆಟ್ಟ ಕಾರ್ಬೋಹೈಡ್ರೇಟ್‌ ಮತ್ತು ಕೊಬ್ಬನ್ನು ನಾಶಪಡಿಸುವಂತಹ ಫೈಬರ್‌, ವಿಟಮಿನ್‌ ಬಿ12, ಝಿಂಕ್‌ ಹೆಚ್ಚಿನ ಪ್ರಮಾಣದಲ್ಲಿದೆ.

· ಇಡ್ಲಿ ಸಾಂಬರ್‌
ಇಡ್ಲಿ ಸಾಂಬರ್‌ ಅನ್ನು ಅನೇಕ ಮಂದಿ ಬೆಳಗ್ಗಿನ ಉಪಹಾರವಾಗಿ ಸೇವಿಸುತ್ತಾರೆ. ಅಕ್ಕಿ ಹಾಗೂ ಉದ್ದಿನಬೇಳೆಯಿಂದ ಮಾಡಿದಂತಹ ಇಡ್ಲಿಯಲ್ಲಿ ಹೆಚ್ಚಿನ
ಕ್ಯಾಲೋರಿಗಳಿದೆ. ಸಾಂಬಾರ್‌ನಲ್ಲಿ ಹೆಚ್ಚಿನ ತರಕಾರಿಗಳಿರುವುದರಿಂದ ಆರೋಗ್ಯಕ್ಕೆ ಉತ್ತಮ. ಅಕ್ಕಿ ಇಡ್ಲಿಗೆ ಬದಲಾಗಿ ರಾಗಿ ಇಡ್ಲಿಯನ್ನು ಕೂಡ ಸೇವಿಸಬಹುದು. ಇದು ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆಗೊಳಿಸುತ್ತದೆ.

· ಸಬೂದಾನಿ ಕಿಚಡಿ
ಉಪವಾಸ ಕುಳಿತುಕೊಳ್ಳುವವರ ನೆಚ್ಚಿನ ಆಹಾರಗಳಲ್ಲಿ ಒಂದಾಗಿರುವ ಸಬೂದಾನಿ ದೇಹದ ತೂಕ ಇಳಿಸಿ ಕೊಳ್ಳಲು ಉತ್ತಮ ಆಹಾರಗಳಲ್ಲಿ ಒಂದು. ಸಬೂದಾನಿಯಲ್ಲಿ ಪ್ರೋಟಿನ್‌ ಹೊಟ್ಟೆ ತುಂಬಿದಂತೆ ಮಾಡುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ ಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇದರ
ಇನ್ನೊಂದು ವಿಶೇಷ ಏನೆಂದರೆ ಪದೇ ಪದೇ ತಿನ್ನಬೇಕು ಎಂಬ ಆಸೆಯನ್ನು ಇದು ಕೊನೆಗೊಳಿಸುತ್ತದೆ.

ಇಷ್ಟು ಮಾತ್ರವಲ್ಲದೆ ಮಖಾನಾ, ದಾಲ್‌- ಚವಾಲ್‌ ಕೂಡ ತೂಕ ಇಳಿಸಿಕೊಳ್ಳಬಯಸುವವರಿಗೆ ಅತ್ಯುತ್ತಮ ಆಹಾರ. ಇಂತಹ ಆಹಾರಗಳನ್ನು ಪ್ರತಿದಿನ ಸೇವಿಸುವುದರಿಂದ ದೇಹದ ತೂಕ ಸುಲಭವಾಗಿ ಇಳಿಸಿಕೊಳ್ಳಬಹುದು.

ರಮ್ಯಾ 

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.