ಬಳ್ಳಮಂಜ ಅನಂತೇಶ್ವರ ಸನ್ನಿಧಿಯಲ್ಲಿ ಷಷ್ಠಿ ಸಂಭ್ರಮ


Team Udayavani, Nov 23, 2017, 5:06 PM IST

22-Nov-17.jpg

ಬೆಳ್ತಂಗಡಿ: ಮಚ್ಚಿನ ಗ್ರಾಮದ ಬಳ್ಳಮಂಜ ಶ್ರೀ ಅನಂತೇಶ್ವರ ಕ್ಷೇತ್ರ ಸಹಸ್ರಾರು ಭಕ್ತರ ಪಾಲಿನ ಪುಣ್ಯ ಬೀಡು. ಭಕ್ತರ ಸಂಕಷ್ಟ ನಿವಾರಿಸಿ ಅನಂತ ಫಲವನ್ನೀವ ಅನಂತರೂಪಿ ಶ್ರೀ ಸುಬ್ರಹ್ಮಣ್ಯನು ಆವಿರ್ಭವಿಸಿದ ಪವಿತ್ರ ಸಾನ್ನಿಧ್ಯ. ಶ್ರೀ ಒಡೆಯನಿಗೀಗ ಷಷ್ಠಿ ಬ್ರಹ್ಮರಥೋತ್ಸವದ ಸಂಭ್ರಮ.

ಷಷ್ಠಿ ಉತ್ಸವ
ಸುಬ್ರಹ್ಮಣ್ಯ, ಕುಡುಪು ಹೊರತು ಪಡಿಸಿದರೆ ಸಹಸ್ರಾರು ಭಕ್ತರ ಕೂಡುವಿಕೆಯಿಂದ ಭಕ್ತಿ ಭಾವದ ಮಿಳಿತವಾಗಿ ವಿಜೃಂಭಣೆಯಿಂದ ನಡೆಯುವ ಷಷ್ಠಿ ಉತ್ಸವ ಬಳ್ಳಮಂಜ ಷಷ್ಠಿ ಎಂಬ ಹೆಗ್ಗಳಿಕೆ ಇದೆ.

ಖ್ಯಾತಿ ಪಸರಿಸುತ್ತಿದೆ
ತುಳುನಾಡಿನಾದ್ಯಂತ ಶ್ರೀಕ್ಷೇತ್ರದ ಖ್ಯಾತಿ ಪಸರಿಸಿದ್ದು, ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ವೃದ್ಧಿಸುತ್ತಿದೆ. ಜಿಲ್ಲೆಯಲ್ಲೇ ಅತ್ಯಂತ ಪ್ರಸಿದ್ಧ ಕ್ಷೇತ್ರವೆಂದೆನಿಸಿದ್ದು, ಷಷ್ಠಿ ಮಹೋತ್ಸವಕ್ಕೆ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ.

ಕ್ಷೇತ್ರ ಬೆಳಗಿತು; ಜನ ಬೆಳಗಿದರು
ಸಹಸ್ರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ಅಭಿವೃದ್ಧಿ ಕಾರ್ಯ ಅಗತ್ಯವಿತ್ತು. ಅದರಂತೆ 2000 ಇಸವಿಯಿಂದ ಈಚೆಗೆ ಅನೇಕ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಕ್ಷೇತ್ರವು ನಾವೀನ್ಯ ಪಡೆಯಿತು. ಶ್ರೀ ದೇವರ ಶಿಲಾಮಯ ಗರ್ಭಗುಡಿ ಸಹಿತವಾಗಿ, ಮೂಲಸ್ಥಾನ, ಅನಂತ ತೀರ್ಥಕೆರೆ, ನಾಗನಕಟ್ಟೆ ಶಿಲಾಮಯ ದೈವಸ್ಥಾನ ರೂಪುಗೊಂಡು ರಜತಪಲ್ಲಕ್ಕಿಯಲ್ಲಿ ಶ್ರೀ ದೇವರ ಉತ್ಸವಗಳ ಭಾಗ್ಯ ಒದಗಿತು.

ಇತ್ತೀಚಿನ ವರ್ಷಗಳಲ್ಲಿ ದೇವಾಲಯದ ಹೊರಪ್ರಾಂಗಣದ ಮೇಲ್ಛಾವಣಿ, ಶಿಲಾಮಯ ವಸಂತಮಂಟಪ, ಅಂಗಣ ಬಂಡಿ ಅನಂತ ಪ್ರಾಸಾದ ಅನ್ನಛತ್ರ, ಶಿಲಾಮಯ ಒಳಸುತ್ತು ಪೌಳಿ, ಇಂಟರ್‌ಲಾಕ್‌ ಅಳವಡಿಕೆ, ಬ್ರಹ್ಮರಥ, ಚಂದ್ರಮಂಡಲ ರಥದ ದುರಸ್ತಿ ಅತಿಥಿ ಗೃಹಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಇತ್ಯಾದಿ ಅಭಿವೃದ್ಧಿ ಕಾರ್ಯಗಳಾಗಿವೆ. 2014ರಲ್ಲಿ ಶ್ರೀ ಸ್ವಾಮಿಗೆ ಬ್ರಹ್ಮಕಲಶಾಭಿಷೇಕ ಕಾರ್ಯ ಗಳನ್ನು ನಡೆಸಲಾಯಿತು.

ಮತ್ತೆ ಅಭಿವೃದ್ಧಿಗೆ ಸಜ್ಜಾಗಿದೆ ಕ್ಷೇತ್ರ
ದೇವಸ್ಥಾನದ ಹೊರ ಸುತ್ತುಪೌಳಿ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ನವೀಕರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ ಸುಸಜ್ಜಿತ ಕಚೇರಿ ಹಾಗೂ ಮಹಡಿಯನ್ನೊಳಗೊಂಡ ನವೀಕೃತ ಹೊರಗೋಪುರವನ್ನು ನಿರ್ಮಿಸಿ ಶ್ರೀ ಸ್ವಾಮಿಗೆ ಅರ್ಪಿಸುವ ಸಂಕಲ್ಪ ಮಾಡಲಾಗಿದೆ.

ಷಷ್ಠಿ ಜಾತ್ರೆಯ ಬಳಿಕ ಕಾಮಗಾರಿ
ಮುಂದಿನ ಎಪ್ರಿಲ್‌ ತಿಂಗಳಲ್ಲಿ ಜರಗುವ ಮೇಷ ಜಾತ್ರೆಯ ಸಂದರ್ಭದಲ್ಲಿ ನವೀಕೃತ ಹೊರಗೋಪುರವನ್ನು ಶ್ರೀ ದೇವರಿಗೆ ಸಮರ್ಪಿಸುವ ಉದ್ದೇಶ ಹೊಂದಿದ್ದು, ಷಷ್ಠಿ ಜಾತ್ರೆ ಬಳಿಕ ಕಾಮಗಾರಿ ಆರಂಭಿಸಲಾಗುತ್ತದೆ.
ಡಾ| ಹರ್ಷ ಸಂಪಿಗೆತ್ತಾಯ,
 ಆನುವಂಶಿಕ ಆಡಳಿತ ಮೊಕ್ತೇಸರ 

– ಚಂದ್ರಶೇಖರ್‌ ಎಸ್‌. ಅಂತರ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.