ಮೊಬೈಲ್‌ ಚೋರನ ಸ್ವಾಗತ


Team Udayavani, Mar 19, 2019, 12:30 AM IST

w-1.jpg

ಹಳ್ಳಿಯನ್ನು ಬಿಟ್ಟು ದೂರದ ಊರಿಗೆ ಎಂದೂ ಪ್ರಯಾಣ ಮಾಡಿರಲಿಲ್ಲ. ಆರೋಗ್ಯ ತಪಾಸಣೆ ಸಂಬಂಧ ಅದೊಂದು ದಿನ ಅಕ್ಕನ ಮನೆಗೆಂದು, ಹುಬ್ಬಳ್ಳಿಯ ಬಸ್ಸು ಹತ್ತಿದ್ದೆ. ಅಪ್ಪ, ಆಸ್ಪತ್ರೆಯ ಖರ್ಚಿಗೆಂದು ಸ್ಪಲ್ಪ ಹಣವನ್ನಷ್ಟೇ ನೀಡಿದ್ದರು. ಅಕ್ಕನಿಗಾಗಿ ಅಮ್ಮ ಸಂಡಿಗೆ ಮಾಡಿ ಕಳುಹಿಸಿದ್ದಳು. ಅವೆಲ್ಲವನ್ನೂ ಜೋಪಾನವಾಗಿ ಇಟ್ಟುಕೊಂಡು, ಬಸ್ಸಿನಲ್ಲಿ ಹೊರಟಿದ್ದೆ. 

ಅಕ್ಕ ಆಗಾಗ್ಗೆ ಕರೆಮಾಡಿ, ನಾನಿರುವ ಸ್ಥಳವನ್ನು ತಿಳಿದುಕೊಳ್ಳುತ್ತಿದ್ದಳು. “ಹುಬ್ಬಳ್ಳಿಗೆ ಬಂದ ತಕ್ಷಣ ಕರೆಮಾಡು, ಕರೆದುಕೊಂಡು ಬರಲು ನಿನ್ನ ಭಾವ ಬರ್ತಾರೆ’ ಎಂದಿದ್ದಳು. ಕೊನೆಗೂ ಹುಬ್ಬಳ್ಳಿ ಬಂದೇ ಬಿಟ್ಟಿತು. ಬಸ್ಸಿನಿಂದ ಇಳಿದ ಕೂಡಲೇ ಅಕ್ಕನಿಗೆ ಕರೆಮಾಡಬೇಕೆಂದು, ಮೊಬೈಲ್‌ ಕೈಗೆತ್ತಿಕೊಂಡಿದ್ದಷ್ಟೇ… ಅದೆಲ್ಲಿದ್ದನೋ ಒಬ್ಬ ಭೂಪ, ನನ್ನ ಕೈಯಿಂದ ಮೊಬೈಲ್‌ ಕಿತ್ಕೊಂಡು ಪರಾರಿ. ನಾನು “ಅಯ್ಯೋ ಮೊಬೈಲ್‌, ಮೊಬೈಲ್‌’ ಎಂದು ಕಿರುಚಿಕೊಂಡೆ. ಯಾರೂ ನನ್ನ ಸಹಾಯಕ್ಕೆ ಬರಲಿಲ್ಲ. ಅಕ್ಕನ ಮನೆಗೆ ಹೋಗುವುದು ಹೇಗೆ ಎಂಬುದೇ ಚಿಂತೆಯಾಯಿತು. ಆದರೆ, ಅನತಿ ದೂರದಲ್ಲಿ ನಿಂತಿದ್ದ ಒಬ್ಬ ಹಳ್ಳಿಯವ ಇದನ್ನು ಗಮನಿಸಿ, ಆ ಕಳ್ಳನನ್ನು ಬೆನ್ನಟ್ಟಿದ. ಕಳ್ಳ ಮೊಬೈಲನ್ನು ಬಿಸಾಕಿ, ಓಡಿ ಹೋದ. 

ಹಳ್ಳಿಯ ಹುಡುಗ ಮೊಬೈಲ್‌ ತಂದು ನನ್ನ ಕೈಗಿಟ್ಟ. ಅವನಿಗೆ ಹೇಗೆ ಕೃತಜ್ಞತೆ ಸಲ್ಲಿಸಬೇಕೋ ತಿಳಿಯದಾದೆ. “ಹುಷ್ಯಾರು ತಮ್ಮಾ, ಮೊಬೈಲ್‌ ಜ್ವಾಕಿ’ ಎಂದು ಹೇಳಿ ಹಳ್ಳಿಯವ ಹೊರಟು ಹೋದ. ಅವನೀಗ ಎಲ್ಲಿಯೇ ಇದ್ದರೂ, ಒಂದು ಥ್ಯಾಂಕ್ಸ್‌ ಹೇಳಬಯಸುತ್ತೇನೆ.

ವೆಂಕಟೇಶ ಚಾಗಿ, ಲಿಂಗಸುಗೂರ

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.