ಗ್ರಾಮೀಣ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚು


Team Udayavani, Mar 10, 2018, 6:11 PM IST

tmk.jpg

ಕುಣಿಗಲ್‌: ಕಾನ್ವೆಂಟ್‌ ಶಾಲೆಗಳಲ್ಲಿ ಕಲಿತ ಮಕ್ಕಳ ಜ್ಞಾನಕ್ಕಿಂತ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಕಲಿತ ಮಕ್ಕಳ ಬೌದ್ಧಿಕ ಮಟ್ಟ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗಿರುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌.ಜಿ.ಸಿದ್ಧರಾಮಯ್ಯ ತಿಳಿಸಿದರು.

ತಾಲೂಕಿನ ಹುತ್ರಿದುರ್ಗ ಹೋಬಳಿ ಹೊಡಾಘಟ್ಟ ಗ್ರಾಮದಲ್ಲಿ ಬೆಂಗಳೂರು ವಿಜಯನಗರದ ಅಭಿನವ ಪ್ರಕಾಶನದ ವತಿಯಿಂದ ಜಿ.ಪಿ.ರಾಜರತ್ನಂ ನೆನಪಿನ ಶ್ರೀಗಂಧಕುಟಿ-10 ಗ್ರಂಥಾಲಯಕ್ಕೆ 110 ಪುಸ್ತಕಗಳನ್ನು ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಿ.ಪಿ.ರಾಜರತ್ನಂ ಅವರನ್ನು ಕನ್ನಡದ ಮೇರು ಕವಿ, ದೊಡ್ಡ ಗುರು ಎಂದು ಬಣ್ಣಿಸಿದ ಅವರು, ಪುಸ್ತಕ ಸಂಸ್ಕೃತಿಯನ್ನು ಆರಂಭಿಸಿದ ಜಿಪಿ ರಾಜರತ್ನಂ, ಕನ್ನಡ ಭಾಷೆಗೆ ನೀಡಿರುವ ಕೊಡುಗೆ ಅನನ್ಯ. ಈ ನಿಟ್ಟಿನಲ್ಲಿ ಅಭಿನವ ಪ್ರಕಾಶನದ ರವಿಕುಮಾರ್‌ ಅವರು ಜಿ.ಪಿ. ರಾಜರತ್ನಂ ಅವರ ನೆನಪಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳ ಬೌದ್ಧಿಕ ವಿಕಸನಕ್ಕಾಗಿ ಗ್ರಂಥಾಲಯ ತೆರೆಯುವ ಮೂಲಕ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಪುಸ್ತಕಗಳು ಉತ್ತಮ ಸ್ನೇಹಿತರಿದ್ದಂತೆ. ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಓದುವ ಮಕ್ಕಳ ಜ್ಞಾನ ಮಟ್ಟವನ್ನು ನಗರ ಪ್ರದೇಶದ ಮಕ್ಕಳಿಗೆ ಹೋಲಿಸಿದಾಗ ಗ್ರಾಮೀಣ ಮಕ್ಕಳಲ್ಲೇ ಹೆಚ್ಚಿನ ವಿಚಾರ ಧಾರೆಗಳು ಇರುತ್ತವೆ. ಈ ನೆಲದ ಜನರ ದೈನಂದಿನ ಬದುಕಿನ ವಾಸ್ತವ ಸಂಗತಿಗಳು ಹಳ್ಳಿ ಮಕ್ಕಳಿಗೆ ಹೆಚ್ಚು ಗೊತ್ತಿರುತ್ತವೆ ಎಂದು ಹೇಳಿದರು.

ಪರಿಸರ, ಶಿಕ್ಷಣ ಜಾಗೃತಿ ಮೂಡಿಸಿ: ಅಭಿನವ ಪ್ರಕಾಶನದ ಪ್ರಕಾಶಕ ರವಿಕುಮಾರ್‌, ಈವರೆಗೆ ನಮ್ಮ ಪ್ರಕಾಶನದ ವತಿಯಿಂದ ಸುಮಾರು 500ಕ್ಕೂ ಹೆಚ್ಚು ಪುಸ್ತಕಗಳು ಪ್ರಕಟವಾಗಿವೆ. ಇದಕ್ಕೆ ಹಲವು ಪ್ರಶಸ್ತಿಗಳು ಲಭಿಸಿವೆ. ಜೊತೆಗೆ ಶಿಕ್ಷಣ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮವನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

2009ರಲ್ಲಿ ರಾಜರತ್ನಂ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ರಾಷ್ಟ್ರಕವಿ ಜಿ.ಎಸ್‌.ಶಿವರುದ್ರಪ್ಪ ಮತ್ತು ಕನ್ನಡ ಸಂಘದ ಮೂಲಕ ಯುವ ಬರಹಗಾರರ ಪಡೆಯನ್ನು ಕಟ್ಟಿದ ಪುಸ್ತಕ ಬಂಧು ಶ್ರೀನಿವಾಸ ರಾಜು ಅವರು ಸೇರಿ ರಾಜ್ಯದ ಬೇರೆ ಬೇರೆ ಶಾಲೆಗಳಿಗೆ ರಾಜರತ್ನಂ ಅವರ ಶ್ರೀಗಂಧಕುಟಿ ಮೂಲಕ ಪುಸ್ತಕಗಳನ್ನು ಕೊಡುವ ಕೆಲಸ ಮಾಡಲಾಗುತ್ತಿತ್ತು. ಆದರೆ, ಶ್ರೀನಿವಾಸರಾಜು ಅವರು ನಿಧನರಾದ ಬಳಿಕ ಅದನ್ನು ಮುಂದುವರಿಸಿಕೊಂಡು ಹೋಗುವ ಕೆಲಸ ಅಭಿನವ ಮಾಡುತ್ತಿತ್ತು. ಈವರೆಗೂ 10 ಶಾಲೆಗಳಿಗೆ ಕನಿಷ್ಠ 100 ಪುಸ್ತಕಗಳನ್ನು ಕೊಡುವ ಕೆಲಸ ಮಾಡುತ್ತಿದೆ ಎಂದರು.

ಮಕ್ಕಳಿಗೆ ಓದುವ ಹವ್ಯಾಸ ಮೂಡಿಸಿ: ವಾರಕ್ಕೆ ಒಮ್ಮೆಯಾದರೂ ಮಕ್ಕಳಿಗೆ ಓದುವ ಹವ್ಯಾಸ ಹಚ್ಚುವುದನ್ನು ಶಿಕ್ಷಕರು ಮಾಡಬೇಕು. ಮಕ್ಕಳಲ್ಲಿ ಜ್ಞಾನ ಹೆಚ್ಚಿಸ ಬೇಕು. ಈ ಶಾಲೆಗೆ 75 ವರ್ಷ ಸಂದಿದ್ದು, ಪುಸ್ತಕಗಳನ್ನು ಇಡಲು ಕಪಾಟುಗಳನ್ನು ನೀಡಲಾಗುವುದು. ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶ್ರೀಗಂಧಕುಟಿಗಳನ್ನು ಆರಂಭಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಬರಹಗಾರ ಹುಲಿಕುಂಟೆ ಮೂರ್ತಿ, ಚಂದನ ಪ್ರಕಾಶನದ ಗಿರಿಯಪ್ಪ ಶ್ರೀನಿವಾಸಮೂರ್ತಿ, ಮುಖ್ಯ ಶಿಕ್ಷಕ ವೈ. ಎಂ.ಲೋಕೇಶಮೂರ್ತಿ ಮಾತನಾಡಿದರು. ಗ್ರಾಪಂ ಸದಸ್ಯ ನಾಗರಾಜು, ಚಂದ್ರಿಕಾ, ಮುಖಂಡರಾದ ಪಾಪೇಗೌಡ ಇದ್ದರು. 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.