ಪಾವಗಡದಲ್ಲಿ ಚೆಕ್‌ಪೋಸ್ಟ್‌ ಆರಂಭ


Team Udayavani, Apr 5, 2018, 5:24 PM IST

tmk.jpg

ಪಾವಗಡ: ಗಡಿ ತಾಲೂಕು ಪಾವಗಡ ಸುತ್ತಲೂ ಆಂಧ್ರ ಪ್ರದೇಶ ವಿರುವ ಕಾರಣ ತಾಲೂಕನ್ನು ಪ್ರವೇಶಿಸುವ ಎಲ್ಲಾ ರಸ್ತೆಗಳಲ್ಲಿ ದಿನದ 24ಗಂಟೆಗಳ ಕಾಲ 3 ಪಾಳಿಯಲ್ಲಿ ಕೆಲಸ ನಿರ್ವಹಿಸುವಂತೆ ಚೆಕ್‌ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಚುನಾವಣಾಧಿಕಾರಿ ವಿರೂಪಾಕ್ಷಪ್ಪತಿಳಿಸಿದ್ದಾರೆ.

ತಾಲೂಕು ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಕ್ರಮಬದ್ಧವಾಗಿ ನಡೆಯಲು ಚುನಾವಣಾ ಆಯೋಗದ ಸೂಚನೆಯಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

ಹಣ ಮತ್ತಿತರ ವಸ್ತುಗಳ ಸಾಗಾಣಿಕೆ ಮೇಲೆ ಹದ್ದಿನ ಕಣ್ಣಿಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರಮ್ಮನಹಳ್ಳಿ, ದೊಡ್ಡಹಳ್ಳಿ, ವೆಂಕಟಮ್ಮನಹಳ್ಳಿ, ಲಿಂಗದಹಳ್ಳಿ, ಅರಸೀಕೆರೆ, ಚಿಟ್ನನಡಕು, ಕೊಡಮಡಗು, ದೊಮ್ಮತ್ಮರಿ ಮತ್ತು ರಾಜವಂತಿಗಲ್ಲಿ ಚೆಕ್‌ ಪೋಸ್ಟ್‌ ಸ್ಥಾಪಿಸಲಾಗಿದೆ. ಸರದಿಯಂತೆ ಕರ್ತವ್ಯ ನಿರ್ವಹಿಸಲು 24ಜನ ವಿಚಕ್ಷಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು. 

ವಿಡಿಯೋ ಚಿತ್ರೀಕರಣ: ಚುನಾವಣೆಗೆ ಸಂಬಂಧಿಸಿದ ಯಾವುದೇ ಸಂಗತಿಗಳನ್ನು ವಿಡಿಯೋ ಮಾಡಿಸಲಾಗುತಿದೆ. ವಿಡಿಯೋಗಳನ್ನು ವೀಕ್ಷಿಸಲೆಂದೇ ಒಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ರಾಜಕಾರಣಿಗಳ ಚುನಾವಣಾ ಪ್ರಚಾರದ ಸಂಪೂರ್ಣ ಚಿತ್ರೀಕರಣವನ್ನು ಗಮನಿಸಲಾಗುವುದು ಎಂದು ತಿಳಿಸಿದರು. 

21ಜನ ಸೆಕ್ಟರ್‌ ಅಧಿಕಾರಿಗಳ ನೇಮಕ: ಒಟ್ಟು 21ಜನ ಸೆಕ್ಟರ್‌ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಹೋಬಳಿಗೆ ಎರಡರಂತೆ ಫ್ಲೈಯಿಂಗ್‌ ಸ್ಕ್ವಾಡ್‌ನೇಮಿಸಲಾಗಿದ್ದು ಇದರಲ್ಲಿ 3ಜನ ಅಧಿಕಾರಿಗಳಿರುತ್ತಾರೆ. ಅಭ್ಯರ್ಥಿಗಳ ಖರ್ಚು, ವೆಚ್ಚಗಳನ್ನು ಪರಿಶೀಲಿಸಲು ದೊಡ್ಡಲಿಂಗಪ್ಪ ಜಂಟಿ ನಿರ್ದೇಶಕರು ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಮೊ. 8105544179 ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಲೆಕ್ಕ ಪರಿಶೋಧನಾ ತಂಡದಲ್ಲಿ ಶಿವಣ್ಣ ಅಧೀಕ್ಷಕರು ಮತ್ತು ರಾಘವೇಂದ್ರ, ಚುನಾವಣಾ ನೀತಿ ಸಂಹಿತಿ ನಿರ್ವಹಣಾಧಿಕಾರಿಯಾಗಿ ಬಿ. ಚಂದ್ರಶೇಖರಪ್ಪಮೊ. 9886537204ಮತ್ತು ನಾಗರಾಜು ಮೊ. 9886537204 ವಾಣಿಜ್ಯ ತೆರೆಗೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
 
ತಾಲೂಕಿನಲ್ಲಿ ಒಟ್ಟು 246ಮತಗಟ್ಟೆಗಳಿದ್ದು 15ಅತಿಸೂಕ್ಷ್ಮ, 59ಸೂಕ್ಷ್ಮ, 160ಸಾಮಾನ್ಯ ಹಾಗೂ 12ಸೂಕ್ಷ್ಮ ಮತಕೇಂದ್ರಗಳು ಎಂದು ಗುರುತಿಸಲಾಗಿದೆ. ಚುನಾವಣಾ ಆಯೋಗ ಸುವಿಧ, ಸುಗಮ, ಸಮಾಧಾನ ಎಂಬ ಆ್ಯಪ್‌ಗ್ಳನ್ನು ಬಿಡುಗಡೆ ಮಾಡಲಿದ್ದು ಇವುಗಳನ್ನು ಉಪಯೋಗಿಸಿ ಕೊಳ್ಳಬಹುದು ಎಂದರು. 

ನಾಟಕ ಪ್ರದರ್ಶನ – ಕ್ರಮ: ಮಂಗಳವಾರ ರಾಮನವಮಿ ಹಬ್ಬದ ಅಂಗವಾಗಿ ಕೆ.ಟಿ.ಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂ ಸಲಾಗಿದೆ. ಅದುದರಿಂದ ನಾಟಕ ಪ್ರದರ್ಶನ ಆಯೋಜಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

 ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೂ ಧ್ವನಿವರ್ದಕ ಉಪಯೋಗಿಸುವಂತಿಲ್ಲ. ಎಂದು ತಿಳಿಸಿದರು. ಸಾರ್ವಜನಿಕರು ಚುನಾವಣಾ ನೀತಿ ಸಂಹಿತಿಯನ್ನು ಉಲ್ಲಂ ಸಿದ ಸಂಘಟನೆಗಳು ಕಂಡು ಬಂದರೆ ಕಚೇರಿಗೆ ತಿಳಿಸಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಇವಿಎಂ, ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ ನೀಡಿದರು.
 
ಪತ್ರಿಕಾಗೋಷ್ಠಿಯಲ್ಲಿ ಪ್ರಭಾರ ತಹಶೀಲ್ದಾರ್‌ ವರದರಾಜು, ಚುನಾವಣಾಧಿಕಾರಿಗಳಾದ ಶ್ರೀನಿವಾಸ್‌, ಗಿರೀಶ್‌, ರಾಜಗೋಪಾಲ್‌ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಭಾಗವಹಿಸಿದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.